ಜಲಮಂಡಳಿಗೆ ವಿದ್ಯುತ್‌ ಬರೆ


Team Udayavani, Apr 23, 2022, 1:22 PM IST

Untitled-1

ಬೆಂಗಳೂರು: ಸಂಪನ್ಮೂಲ ಕ್ರೋಢೀಕರಣಕ್ಕಾಗಿ ಹೆಣಗಾಡುತ್ತಿರುವ ಬೆಂಗಳೂರು ಜಲಮಂಡಳಿಗೆ ಈಗ ವಿದ್ಯುತ್‌ ದರ ಏರಿಕೆಯಿಂದಾಗಿ ಮತ್ತಷ್ಟು ಹೊರೆಯಾದಂತಾಗಿದೆ.

ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ ಇತ್ತೀಚೆಗಷ್ಟೇ ವಿದ್ಯುತ್‌ ದರ ಹೆಚ್ಚಳ ಮಾಡಿದ್ದು, ಇದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲೂಎಸ್‌ಎಸ್‌ಬಿ) ಪಾವತಿಸುವ ವಿದ್ಯುತ್‌ ಬಿಲ್‌ ಶುಲ್ಕವೂ 1 ಕೋಟಿ ರೂ.ನಷ್ಟು ಹೆಚ್ಚಾಗಿದೆ. ವಿದ್ಯುತ್‌ ಬಿಲ್‌ನ ಹೆಚ್ಚುವರಿ ಹೊರೆಯ ಆರ್ಥಿಕ ಹೊಂದಾಣಿಕೆಯ ಬಗ್ಗೆ ಚಿಂತೆ ಶುರುವಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಗ್ರಾಹಕರಿಂದ ಪ್ರತಿ ತಿಂಗಳು ಅಂದಾಜು 110 ಕೋಟಿ ರೂ.ಗೂ ಅಧಿಕ ಹಣ ಸಂಗ್ರಹಿಸುತ್ತದೆ.

ಈ ಮೊತ್ತದಲ್ಲಿ 30 ಕೋಟಿ ರೂ.ಗೂ ಅಧಿಕ ಹಣ ಕಾರ್ಯಾಚರಣೆಯ ವೆಚ್ಚಗಳಿಗೆ ಮತ್ತು 12 ಕೋಟಿ ರೂ. ವೇತನ ಪಾವತಿಸಲು ಹೋಗುತ್ತದೆ. ವಾರ್ಷಿಕ ಶುಲ್ಕ ಸಂಗ್ರಹಣೆಯಲ್ಲಿ ಶೇ.66ರಷ್ಟು ಪಾಲು ಕೇವಲ ವಿದ್ಯುತ್‌ ಬಿಲ್‌ ಪಾವತಿಗೆ ವ್ಯಯಿಸುತ್ತದೆ. ಹೀಗಾಗಿ ಇತರೆ ವೆಚ್ಚಗಳನ್ನು ಸರಿದೂಗಿಸುವುದು ಕಷ್ಟವಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ವಿದ್ಯುತ್‌ ಶುಲ್ಕ ಹೆಚ್ಚಳವನ್ನು ಸರಿದೂಗಿಸಿಕೊಂಡು ಹೋಗುವುದೇ ಒಂದು ಸವಾಲಾಗಿ ಪರಿಣಿಮಿಸಿದೆ ಎಂದು ಹೇಳುತ್ತಾರೆ.

71 ಕೋಟಿ ರೂ.ವಿದ್ಯುತ್‌ ಶುಲ್ಕ ಪಾವತಿ: ಬೆಂಗಳೂರು ಜಲಮಂಡಳಿ ಈ ಹಿಂದೆ ಸುಮಾರು 70 ಕೋಟಿ.ರೂ.ಅನ್ನು ವಿದ್ಯುತ್‌ ಶುಲ್ಕಕ್ಕಾಗಿ ವಿನಿಯೋಗ ಮಾಡುತ್ತಿತ್ತು. ಇದೀಗ 1ಕೋಟಿ ರೂ.ಹೆಚ್ಚಳ ಶುಲ್ಕವನ್ನು ನೀಡಬೇಕಾಗಿದೆ. ನೀರಿನ ಬಿಲ್‌ ಏರಿಕೆ ಮಾಡದಿರುವ ಹಿನ್ನೆಲೆಯಲ್ಲಿ ಈಗಿರುವ ಅನುದಾನದಲ್ಲೇ ಹೊಂದಾಣಿಕೆ ಮಾಡಿಕೊಂಡು ಬೆಸ್ಕಾಂಗೆ ವಿದ್ಯುತ್‌ ಶುಲ್ಕ ನೀಡುತ್ತಿದೆ ಎಂದು ಜಲಮಂಡಳಿ ಹಿರಿಯ ಎಂಜಿನಿಯರ್‌ ವೊಬ್ಬರು ಮಾಹಿತಿ ನೀಡಿದ್ದಾರೆ.

ಜಲಮಂಡಳಿಗೆ 1 ಕೋಟಿ ರೂ. ಪ್ರತಿ ತಿಂಗಳ ಹೆಚ್ಚುವರಿ ವಿದ್ಯುತ್‌ ಬಿಲ್‌ ಜತೆಗೆ ನೀರಿನ ಪೈಪ್‌ಲೈನ್‌ ಗಳ ನಿಯಮಿತ ನಿರ್ವಹಣೆ ಮತ್ತು ಸಿಬ್ಬಂದಿ ವೇತನದಂತಹ ಖರ್ಚು ವೆಚ್ಚವನ್ನು ನೋಡಿಕೊಳ್ಳಬೇಕಾಗಿದೆ ಎಂದು ಹೇಳುತ್ತಾರೆ. ಈ ಹಿಂದೆ ಆರ್ಥಿಕ ಒತ್ತಡಕ್ಕೆ ಸಿಲುಕ್ಕಿದ್ದ ಬೆಂಗಳೂರು ಜಲಮಂಡಳಿ 2014ರಲ್ಲಿ ಶೇ.20ರಷ್ಟು ನೀರಿನ ದರ ಪರಿಷ್ಕರಣೆ ಮಾಡಿತ್ತು. ಅದಾದ ಬಳಿಕೆ ಇಲ್ಲಿಯವೆಗೂ ನೀರಿನ ಬೆಲೆ ಏರಿಕೆ ಮಾಡಿಲ್ಲ. ನೀರನ್ನು ಪಂಪ್‌ ಮಾಡಲು, ಶುದ್ಧಿಕರಿಸಲು, ನೀರು ಸರಬರಾಜು ಮಾಡಲು ವಿದ್ಯುತ್‌ ಅಗತ್ಯ ಇರುವ ಹಿನ್ನೆಲೆಯಲ್ಲಿ ವಿದ್ಯುತ್‌ ಶುಲ್ಕಕ್ಕಾಗಿಯೇ ಹೆಚ್ಚಿನ ಹಣವನ್ನು ಮೀಸಲಿಡಬೇಕಾದ ಪರಿಸ್ಥಿತಿ ಇದೆ.

ಈ ಹಿನ್ನೆಲೆಯಲ್ಲಿ ಆರ್ಥಿಕ ಹೊರೆಯನ್ನು ತಗ್ಗಿಸಲು ಈ ಹಿಂದೆ ಜಲಮಂಡಳಿ ನೀರಿನ ದರ ಪರಿಷ್ಕರಣೆಗೆ ಮುಂದಾಗಿತ್ತಾದರೂ ಕೋವಿಡ್‌ ಹಿನ್ನೆಲೆಯಲ್ಲಿ ಸರ್ಕಾರ ಇದಕ್ಕೆ ಅವಕಾಶ ನೀಡಿರಲಿಲ್ಲ. ಕೆಲವು ದಿನಗಳ ಹಿಂದಷ್ಟೇ ಜಲಮಂಡಳಿ ನೀರಿನ ಬಿಲ್‌ ಏರಿಕೆ ಪ್ರಸ್ತಾಪನ್ನು ಸರ್ಕಾರದ ಮುಂದೆ ಇಟ್ಟಿದೆ. ಆದರೆ ಇದಕ್ಕೆ ಸರ್ಕಾರ ಅನುಮತಿ ನೀಡಿಲ್ಲ.

 

-ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.