ನರೇಂದ್ರಮೋದಿ ಅವರು ಯೋಗದ ಮಹತ್ವ ಜಗತ್ತಿಗೆ ಸಾರಿದವರು: ಪ್ರಭು ಚೌವ್ಹಾಣ್‌


Team Udayavani, Jun 20, 2022, 9:38 PM IST

ನರೇಂದ್ರಮೋದಿ ಅವರು ಯೋಗದ ಮಹತ್ವ ಜಗತ್ತಿಗೆ ಸಾರಿದವರು: ಪ್ರಭು ಚೌವ್ಹಾಣ್‌

ಬೆಂಗಳೂರು: ಆರೋಗ್ಯ ಮತ್ತು ಸರ್ವತೋಮುಖ ಬೆಳವಣಿಗೆಗೆ ಯೋಗ ಉತ್ತಮ ಸಾಧನ. ಯೋಗ ಕೇವಲ ವ್ಯಾಯಾಮವಲ್ಲ, ಇದು ವಿಶ್ವ ಮತ್ತು ಪ್ರಕೃತಿಯೊಂದಿಗೆ ನಮ್ಮತನವನ್ನು ಒಂದಾಗಿಸುವ ವಿದ್ಯೆಯಾಗಿದೆ. ಯೋಗವು ಬದುಕನ್ನು ಬದಲಿಸುವ ಮತ್ತು ಆತ್ಮಸಾಕ್ಷಿಯ ಸೃಷ್ಟಿ ಎಂದು ಜಗತ್ತಿಗೆ ಸಾರಿದವರು ಪ್ರಧಾನಿ ನರೇಂದ್ರ ಮೋದಿ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್‌ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಯೋಗವು 6000 ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಪ್ರತಿವರ್ಷ ಯೊಗದ ದಿನಾಚರಣೆಯು ಯೋಗ, ಧ್ಯಾನ, ಸಭೆಗಳು ಚರ್ಚೆಗಳು, ಸಾಂಸ್ಕೃತಿಕ ಪ್ರದರ್ಶನಗಳು ಇತ್ಯಾದಿಗಳನ್ನು ಅಭ್ಯಸಿಸುವುದರ ಮೂಲಕ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತದೆ.

ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾಗಿ ಮೊದಲ ಬಾರಿ ಅಧಿಕಾರ ವಹಿಸಿಕೊಂಡ ವರ್ಷವೇ 2014ರ ಸೆಪ್ಟೆಂಬರ್‌ನಲ್ಲಿ ನಡೆದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಯೋಗದ ಮಹತ್ವವನ್ನು ಸಾರಿದರು. ಯೋಗವು ವಿಶ್ವ ಶಾಂತಿಗೂ ಪೂರಕ ಎನ್ನುವುದನ್ನು ವಿಶ್ವ ಸಂಸ್ಥೆಯ ಸದಸ್ಯರ ರಾಷ್ಟ್ರಗಳಿಗೆ ಮನವರಿಕೆ ಮಾಡಿಕೊಟ್ಟರು. ಆ ವೇಳೆ ವಿಶ್ವ ಸಂಸ್ಥೆಯ ಮುಂದೆ ಯೋಗ ದಿನ ಆಚರಣೆಯ ಪ್ರಸ್ತಾವನೆಯನ್ನು ಮುಂದಿಟ್ಟರು. ಇದನ್ನು ವಿಶ್ವ ಸಂಸ್ಥೆ ಮಾನ್ಯ ಮಾಡಿತು.

ನಂತರ ತನ್ನ ಎಲ್ಲ ಸದಸ್ಯ ರಾಷ್ಟ್ರಗಳ ಅಭಿಪ್ರಾಯ ಸಂಗ್ರಹಿಸಿ, 2015ರಲ್ಲಿ ಜೂನ್‌ 21ನ್ನು ವಿಶ್ವ ಯೋಗ ದಿನ ಎಂದು ಘೋಷಿಸಿತು. ಅದರೊಂದಿಗೆ, ಭಾರತಕ್ಕಷ್ಟೆೈ ಸೀಮಿತವಾಗಿದ್ದ, ಕೆಲವು ಆಸಕ್ತ ವಿದೇಶಿಗರಷ್ಟೆೈ ಮಾಡುತ್ತಿದ್ದ ಯೋಗವನ್ನು ಪ್ರಪಂಚದಾದ್ಯಂತ ಸಾಮೂಹಿಕವಾಗಿ ಅಭ್ಯಸಿಸುವಂತೆ ಮಾಡುವಲ್ಲಿ ಮೋದಿ ಯಶಸ್ವಿಯಾದರು ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರ ಭಾಷಣದ ಬಳಿಕ 2014ರ ಡಿಸೆಂಬರ್‌ 11ರಂದು ವಿಶ್ವ ಸಂಸ್ಥೆಯಲ್ಲಿ ಮಸೂದೆಯೊಂದನ್ನು ಮಂಡಿಸಲಾಯಿತು. ಭಾರತದ ವಿಶ್ವ ಸಂಸ್ಥೆಯ ಪ್ರತಿನಿಧಿ ಅಶೋಕ್‌ ಮುಖರ್ಜಿ ಅವರು ಕರಡನ್ನು ಸಿದ್ಧಪಡಿಸಿ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಂಡಿಸಿದರು. ಈ ಕರಡಿಗೆ ಯಾವುದೇ ವಿರೋಧವಿಲ್ಲದೆ 177 ದೇಶಗಳು ಒಪ್ಪಿದವು. ಒಂದೂ ಮತ ಚಲಾವಣೆಯಾಗದೆ ಯೋಗ ದಿನ ಆಚರಣೆಯ ಕರಡು ಪ್ರತಿ ಅಂಗೀಕಾರವಾಯಿತು. ಬಳಿಕ ಮಸೂದೆಯನ್ನು ಅಂಗೀಕರಿಸಲಾಯಿತು. ಇದು ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ತಕರಾರು ಇಲ್ಲದೆ, ಹೆಚ್ಚಿನ ಬೆಂಬಲ ಪಡೆದು ಅಂಗೀಕಾರಗೊಂಡ ಮಸೂದೆ ಎಂಬ ಖ್ಯಾತಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

8ನೇ ಅಂತರಾಷ್ಟ್ರೀಯ ಯೋಗ
ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣದಿಂದ ಎಲ್ಲಿಯೂ ಯೋಗ ದಿನ ಆಚರಿಸಲು ಸಾಧ್ಯವಾಗಿರಲಿಲ್ಲ. 8ನೇ ಅಂತರಾಷ್ಟ್ರೀಯ ಯೋಗ ದಿನ ಆಚರಣೆಯು ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಆಚರಿಸುತ್ತಿರುವುದು ಕರುನಾಡಿನ ಕೀರ್ತಿ ಪತಾಕೆಯು ವಿಶ್ವದÇÉೆಡೆ ಪಸರಿಸಲಿದೆ. ಡ್ರಾಯಿಂಗ್‌ ರೂಮ್‌ ನಿಂದ ಬೋರ್ಡ್‌ ರೂಮಿನವರೆಗೆ, ನಗರದ ಉದ್ಯಾವನಗಳಿಂದ ಹಿಡಿದು ಕ್ರೀಡಾ ಸಂಕೀರ್ಣದವರೆಗೆ ಇಂದು ಯೋಗ ಮಾಡಲಾಗುತ್ತಿದೆ. ಇಂದಿನ ಬದಲಾಗುತ್ತಿರುವ ಕಾಲದಲ್ಲಿ ನಾವು ಆರೋಗ್ಯದ ಮೇಲೆ ಗಮನ ಹರಿಸಬೇಕಿದೆ. ಈ ಶಕ್ತಿ ಸಿಗಲು ಯೋಗದಿಂದ ಮಾತ್ರ ಸಾಧ್ಯ ಎಂದು ಸಾರಿದ ನರೇಂದ್ರಮೋದಿ ಅವರ ಆದರ್ಶ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.