ಪ್ರತಿಭಾ ಪುರಸ್ಕಾರ ವೇದಿಕೆಯಿಂದ ಸನ್ಮಾನ


Team Udayavani, Aug 4, 2017, 1:26 PM IST

purandeswari.jpg

ಬೆಂಗಳೂರು: ಪ್ರತಿಭಾ ಪುರಸ್ಕಾರ ವೇದಿಕೆಯು ಈ ಬಾರಿ ನರರೋಗ ತಜ್ಞ ಹಾಗೂ ಬ್ರೈನ್ಸ್‌ (ಬಿಆರ್‌ಎಐಎನ್‌ಎಸ್‌) ಸಂಸ್ಥಾಪಕ ಡಾ.ಎನ್‌.ಕೆ. ವೆಂಕಟರಮಣ ಅವರನ್ನು ಪುರಸ್ಕರಿಸಲು ನಿರ್ಧರಿಸಿದೆ.

ಆಗಸ್ಟ್‌ 5ರಂದು ಸಂಜೆ 5ಕ್ಕೆ ನಗರದ ಚೌಡಯ್ಯ ಸ್ಮಾರಕ ಭವನದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಡಾ.ವೆಂಕಟರಮಣ ಅವರನ್ನು ಪುರಸ್ಕರಿಸಲಾಗುವುದು. ಮಾಜಿ ಕೇಂದ್ರ ಸಚಿವೆ ಡಿ. ಪುರಂದೇಶ್ವರಿ ಕಾರ್ಯಕ್ರಮ ಉದ್ಘಾಟಿಸವರು. ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಂ.ಎನ್‌. ವೆಂಕಟಾಚಲಯ್ಯ, ಇಸ್ರೋ ಅಧ್ಯಕ್ಷ ಎ.ಎಸ್‌. ಕಿರಣ ಕುಮಾರ್‌ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ವೇದಿಕೆಯ ಸದಸ್ಯ ಗಂಗರಾಜು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ದೇಶದಲ್ಲಿಯೇ ಮೊಟ್ಟಮೊದಲ ಬಾರಿಗೆ ಅಪಘಾತದ ಸಂದರ್ಭದಲ್ಲಿ ತುರ್ತು ಸ್ಪಂದನೆಗಾಗಿ 1062 ಜಿಪಿಎಸ್‌ ಆಧಾರಿತ ಮೊಬೈಲ್‌ ತುರ್ತು ಸ್ಪಂದನೆಯ ವ್ಯವಸ್ಥೆ ಜಾರಿಗೊಳಿಸಿದ ಅಗ್ಗಳಿಕೆ ಡಾ.ವೆಂಕಟರಮಣ ಅವರಿಗೆ ಸಲ್ಲುತ್ತದೆ. ಈ ಹೊಸ ಪ್ರಯೋಗದಿಂದ ಬೆಂಗಳೂರಿನಲ್ಲಿ
ಅಪಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಶೇ. 22ರಿಂದ ಶೇ. 5ಕ್ಕೆ ಇಳಿಯಿತು. ಮುಂದೆ ಈ ವ್ಯವಸ್ಥೆಯನ್ನು ರಾಜ್ಯ ಸರ್ಕಾರ “108 ತುರ್ತು ಸೇವೆ’ ಅಡಿ ಜಾರಿಗೊಳಿಸಲಾಯಿತು.

ಇದರ ಮುಂದುವರಿದ ಭಾಗವಾಗಿ ಈಗ “ಗೋಲ್ಡನ್‌ ಅವರ್‌’ ಎಂಬ ಹೊಸ ಯೋಜನೆ ಅನುಷ್ಠಾನಕ್ಕೆ ಡಾ.ವೆಂಕಟರಮಣ ನಿರ್ಧರಿಸಿದ್ದಾರೆ. ಅಂದರೆ ಅಪಘಾತ ನಡೆದ ತಕ್ಷಣದಲ್ಲೇ ಅಪಘಾತಕ್ಕೀಡಾದವರಿಗೆ ಪ್ರಾಥಮಿಕ ಚಿಕಿತ್ಸೆ ದೊರೆತರೆ, ಜೀವ ಉಳಿಯುವ ಸಾಧ್ಯತೆಗಳು ಹೆಚ್ಚು. ಇದರಿಂದ ಸಾವಿನ ಪ್ರಮಾಣ ಮತ್ತಷ್ಟು ತಗ್ಗಿಸಬಹುದು. ಈ ಹಿನ್ನೆಲೆಯಲ್ಲಿ ನಗರದಲ್ಲಿ ವಾರ್ಡ್‌ಗೊಂದು “ಗೋಲ್ಡನ್‌ ಅವರ್‌’ ಕೇಂದ್ರ ತೆರೆಯಲು ಉದ್ದೇಶಿಸಲಾಗಿದೆ.

ಮೊದಲ ಹಂತದಲ್ಲಿ ನೂರು ಕೇಂದ್ರಗಳನ್ನು ಆರಂಭಿಸಲು ನರರೋಗ ತಜ್ಞ ನಿರ್ಧರಿಸಿದ್ದಾರೆ. ಈ ಸೇವೆಯನ್ನು ಪರಿಗಣಿಸಿ ಪುರಸ್ಕರಿಸಲಾಗುತ್ತಿದೆ. ಈ ಸೇವೆಗೆ ಆಗಸ್ಟ್‌ 5ರಂದು ನಡೆಯುವ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಗುವುದು ಎಂದೂ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸದಸ್ಯ ಮೋಹನರಾಜು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.