ತರಗೆಲೆ ಬಳಸಿ ಗೊಬ್ಬರ ತಯಾರಿ


Team Udayavani, Apr 2, 2019, 5:00 AM IST

taragale

ಬೆಂಗಳೂರು: ಕಬ್ಬನ್‌ ಪಾರ್ಕ್‌ನಲ್ಲಿ ಮರ-ಗಿಡಗಳಿಂದ ಉದುರಿದ ಒಣ ಎಲೆಗಳ ಕಸ ಒಟ್ಟುಗೂಡಿಸಿ ಗೊಬ್ಬರವನ್ನಾಗಿ ಪರಿವರ್ತಿಸುವತ್ತ ತೋಟಗಾರಿಕೆ ಇಲಾಖೆ ಹೆಜ್ಜೆಯಿರಿಸಿದೆ.

ಈಗ ವಂಸತ ಕಾಲವಾಗಿರುವುದರಿಂದ ಕಬ್ಬನ್‌ ಪಾರ್ಕ್‌ನಲ್ಲಿ ಅಧಿಕ ಪ್ರಮಾಣದ ಒಣಗಿದ ಎಲೆಗಳು ಉದುರುತ್ತಿವೆ. ಇವುಗಳನ್ನು ಒಟ್ಟುಗೂಡಿಸಿ ರಸಗೊಬ್ಬರ ಮಾಡುವ ಕಾರ್ಯವನ್ನು ತೋಟಗಾರಿಕೆ ಇಲಾಖೆ ಮಾಡುತ್ತಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಮೊದಲು, ವಿವಿಧ ಮರಗಳಿಂದ ಉದುರಿ ಬಿದ್ದಿರುವ ಒಣ ಎಲೆಗಳನ್ನು ಒಂದು ಕಡೆ ಗುಡ್ಡೆ ಹಾಕಲಾಗುತ್ತದೆ. ನಂತರ, ಪ್ರತಿ ಹದಿನೈದು ದಿನಕ್ಕೆ ಒಮ್ಮೆ ಒಣ ಎಲೆಗಳ ಕಸವನ್ನು ವಾಹನಗಳ ಮೂಲಕ ಗೊಬ್ಬರ ತಯಾರಿಕೆ ಘಟಕಕ್ಕೆ ಕೊಂಡೊಯ್ದು, ಅಲ್ಲಿ ಗೊಬ್ಬರ ತಯಾರಿಸಲಾಗುತ್ತದೆ. ಹೀಗೆ, ತಯಾರಾದ ಗೊಬ್ಬರವನ್ನು ತೋಟಗಾರಿಕೆ ಇಲಾಖೆ, ಲಾಲ್‌ಬಾಗ್‌ನಲ್ಲಿರುವ ಹೂ ತೋಟ ಹಾಗೂ ಸಸಿಗಳನ್ನು ಬೆಳೆಸಲು ಬಳಸುತ್ತಿದೆ.

ಗೊಬ್ಬರ ಉತ್ಪಾದನೆ ಕೇಂದ್ರ: ತೋಟಗಾರಿಕೆ ಇಲಾಖೆ ತನಗೆ ಅಗತ್ಯವಿರುವ ಗೊಬ್ಬರವನ್ನು ತಾನೇ ಉತ್ಪಾದಿಸಿಕೊಳ್ಳುತ್ತಿದೆ. ಇದಕ್ಕಾಗಿ ಹತ್ತು ಗೊಬ್ಬರ ಉತ್ಪಾದನೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಕಬ್ಬನ್‌ ಪಾರ್ಕ್‌ ಮತ್ತು ಲಾಲ್‌ಬಾಗ್‌ನಲ್ಲಿ ಗೊಬ್ಬರ ತಯಾರಿಕೆ ಘಟಕಗಳಿದ್ದು, ಇಲ್ಲಿ ಎರೆಹುಳು ಗೊಬ್ಬರನ್ನು ತಯಾರಿಸಲಾಗುತ್ತಿದೆ.

ಇದರೊಂದಿಗೆ ಬನ್ನೇರುಘಟ್ಟ ರಸ್ತೆಯ ಹುಳಿಮಾವಿನಲ್ಲಿರುವ ಬಯೋಟೆಕ್ನಾಜಿ ಕೇಂದ್ರದಲ್ಲೂ ಗೊಬ್ಬರ ತಯಾರಿಸುವ ಕೆಲಸ ನಡೆಯುತ್ತಿದೆ. ಕಬ್ಬನ್‌ ಪಾರ್ಕ್‌ನಲ್ಲಿ ಮರಗಳಿಂದ ಉದುರಿದ ಒಣ ಎಲೆಗಳ ಕಸವನ್ನು ಹದಿನೈದು ದಿನಕ್ಕೆ ಎರಡು ಬಾರಿ ಇಲಾಖೆಯ 2 ಲಾರಿಗಳಲ್ಲಿ ಗೊಬ್ಬರ ತಯಾರಿಕೆ ಕೇಂದ್ರಕ್ಕೆ ಕೊಂಡೊಯ್ಯಲಾಗುತ್ತದೆ ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಒಂದು ಟನ್‌ ಗೊಬ್ಬರ ಉತ್ಪಾದನೆ: ಹೂ ತೋಟ ಮತ್ತು ಸಸಿಗಳನ್ನು ಬೆಳೆಸಲು ತೋಟಗಾರಿಕೆ ಇಲಾಖೆಗೆ ಅಧಿಕ ಪ್ರಮಾಣದಲ್ಲಿ ಸಾವಯವ ಗೊಬ್ಬರ ಬೇಕಾಗುತ್ತದೆ. ಆದರೆ, ಅಗತ್ಯ ಪ್ರಮಾಣದಷ್ಟು ಎರೆಹುಳು ಗೊಬ್ಬರ ಉತ್ಪಾದಿಸಲು ಸಾಧ್ಯವಾಗುತ್ತಿಲ್ಲ.

ಆದರೂ, ಕಬ್ಬನ್‌ ಪಾರ್ಕ್‌ ಮತ್ತು ಲಾಲ್‌ಬಾಗ್‌ನಲ್ಲಿ ಮರಗಳಿಂದ ಉದುರಿದ ಒಣ ಎಲೆಗಳಿಂದ ಪ್ರತಿ ವರ್ಷ ಒಂದು ಟನ್‌ ಗೊಬ್ಬರವನ್ನು ಇಲಾಖೆ ಉತ್ಪಾದಿಸುತ್ತದೆ ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಅಧಿಕಾರಿ ಮಹಾಂತೇಶ್‌ ಮುರುಗೋಡ್‌ ಮಾಹಿತಿ ನೀಡುತ್ತಾರೆ.

ತೋಟಗಾರಿಕೆ ಇಲಾಖೆ ಕಳೆದ 2 ವರ್ಷದಿಂದ ಸುಮಾರು 2 ಟನ್‌ ಎರೆಹುಳು ಗೊಬ್ಬರ ಉತ್ಪಾದನೆ ಮಾಡಿದೆ. ಈ ಗೊಬ್ಬರ ತಯಾರಿಸಲು ಸುಮಾರು ಒಂದು ವರ್ಷ ಕಾಯಬೇಕು ಎನ್ನುತ್ತಾರೆ.

ತೋಟಗಾರಿಕೆ ಇಲಾಖೆಯ ಈ ಕಾರ್ಯಕ್ಕೆ ವಾಯು ವಿಹಾರಿಗಳಿಂದ ಮತ್ತು ಪರಿಸರ ತಜ್ಞರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಹೀಗೆ ಮಾಡುವುದರಿಂದ ಕಬ್ಬನ್‌ ಪಾರ್ಕ್‌ ಅನ್ನು ಅಂದವಾಗಿ ಇರಿಸಿಕೊಂಡಂತಾಗುತ್ತದೆ. ಜತೆಗೆ ಗಿಡಗಳಿಗೂ ಗೊಬ್ಬರ ಸಿಗುತ್ತದೆ ಎಂಬುದು ಕಬ್ಬನ್‌ ಪಾರ್ಕ್‌ನ ವಾಯು ವಿಹಾರಿ ಗಿರಿಧರ್‌ ಅವರ ಅಭಿಪ್ರಾಯ.

ಕಬ್ಬನ್‌ ಪಾರ್ಕ್‌ನಲ್ಲಿ ಮರಗಳಿಂದ ಉದುರುವ ಒಣಗಿದ ಎಲೆಗಳಿಂದ, ತೋಟಗಾರಿಕೆ ಇಲಾಖೆ ಗೊಬ್ಬರ ತಯಾರಿಸಿ, ಹೂ ಗಿಡಗಳನ್ನು ಬೆಳೆಸಲು ಬಳಸುತ್ತಿರುವುದು ಆಶಾದಾಯಕ ಬೆಳವಣಿಗೆ.
-ವಿಜಯ್‌ ನಿಶಾಂತ್‌, ಮರತಜ್ಞ

* ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.