ಇ-ಕಾಮರ್ಸ್‌ ಸಂಸ್ಥೆಗಳ ವಿರುದ್ಧ ದಂಡ ಪ್ರಯೋಗಕ್ಕೆ ಸಿದ್ಧತೆ


Team Udayavani, Feb 15, 2018, 6:10 AM IST

E-commerce.jpg

ಬೆಂಗಳೂರು: ಇ- ಕಾಮರ್ಸ್‌ ಸಂಸ್ಥೆಗಳು, ಇ- ಕಾಮರ್ಸ್‌ ಉದ್ಯಮಗಳು ಆನ್‌ಲೈನ್‌ನಲ್ಲಿ ಮಾರುವ ಉತ್ಪನ್ನಗಳ ಎಂಆರ್‌ಪಿ ಸೇರಿದಂತೆ ಇತರೆ ವಿವರ ಪ್ರಕಟಿಸುವುದು ಜ.1ರಿಂದ ಕಡ್ಡಾಯವಾಗಿದ್ದರೂ ಬಹಳಷ್ಟು ಸಂಸ್ಥೆ ಪಾಲಿಸದ ಕಾರಣ ಪ್ರಕರಣ ದಾಖಲಿಸಿ ದಂಡ ಪ್ರಯೋಗಕ್ಕೆ ರಾಜ್ಯ ಕಾನೂನು ಮಾಪನ ಇಲಾಖೆ ಸಿದ್ಧತೆ ನಡೆಸಿದೆ.

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ಸರಕಿಗೆ ಸಂಬಂಧಪಟ್ಟಂತೆ ಆರು ಪ್ರಮುಖ ವಿವರ ಪ್ರಕಟಿಸುವುದನ್ನು ಕೇಂದ್ರ ಸರ್ಕಾರ ಜ.1ರಿಂದ ಕಡ್ಡಾಯಗೊಳಿಸಿದೆ. ಇಷ್ಟಾದರೂ ಬಹಳಷ್ಟು ಇ-ಕಾಮರ್ಸ್‌ ಸಂಸ್ಥೆಗಳು ವಿವರ ಪ್ರಕಟಿಸುತ್ತಿಲ್ಲ. ವಿವರ ಪ್ರಕಟಿಸದಿರುವುದನ್ನು ವಂಚನೆ ಎಂದು ಪರಿಗಣಿಸಿರುವ ಇಲಾಖೆ ಇದೀಗ ದಂಡ ವಿಧಿಸಲು ಸಜ್ಜಾಗಿದೆ.

ಈಚಿನ ವರ್ಷಗಳಲ್ಲಿ ಆನ್‌ಲೈನ್‌ ವಹಿವಾಟು ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ಇ- ಕಾಮರ್ಸ್‌ ಸಂಸ್ಥೆಗಳು, ಇ- ಕಾಮರ್ಸ್‌ ಉದ್ಯಮಗಳು ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ಉತ್ಪನ್ನಗಳಿಗೆ ಭಾರಿ ರಿಯಾಯ್ತಿ ಘೋಷಿಸುತ್ತಿರುವುದರಿಂದ ಗ್ರಾಹಕರು ಆಕರ್ಷಿತರಾಗುತ್ತಿದ್ದಾರೆ. ಆದರೆ ಸರಕಿಗೆ ಸಂಬಂಧಪಟ್ಟಂತೆ ಕೆಲ ವಿವರ ನೀಡದ ಕಾರಣ ಗ್ರಾಹಕರು ವಂಚನೆಗೆ ಒಳಗಾಗುವ ಸಾಧ್ಯತೆ ಇದೆ.

ಗ್ರಾಹಕರ ಹಿತಕ್ಕಾಗಿ ಕ್ರಮ: ಗ್ರಾಹಕರ ಹಿತ ಕಾಪಾಡಲು 2017ರ ಕಾನೂನು ಮಾಪನಶಾಸ್ತ್ರ (ಪ್ಯಾಕೇಜ್‌x ಕಮಾಡಿಟಿ) ತಿದ್ದುಪಡಿ ನಿಯಮಾವಳಿಯಂತೆ ಎಂಆರ್‌ಪಿ ಇತರೆ ವಿವರ ಪ್ರಕಟಣೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಡಿಜಿಟಲ್‌, ಎಲೆಕ್ಟ್ರಾನಿಕ್‌ ನೆಟ್‌ವರ್ಕ್‌ ವೇದಿಕೆಯಡಿ ನಾನಾ ಬ್ರಾಂಡ್‌ನ‌ ಸರಕು- ಸೇವೆ ಮಾರಾಟ ಮಾಡುವ ಸಂಸ್ಥೆಗಳು ಇ- ಕಾಮರ್ಸ್‌ ಸಂಸ್ಥೆ ಹಾಗೂ ತನ್ನದೇ ಬ್ರಾಂಡ್‌ನ‌ ಉತ್ಪನ್ನವನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ಸಂಸ್ಥೆಯನ್ನು ಇ- ಕಾಮರ್ಸ್‌ ಉದ್ಯಮ ಎಂದು ನಿಯಮದಲ್ಲಿ ಗುರುತಿಸಲಾಗಿದೆ.

ಉತ್ಪನ್ನದ ಹೆಸರು, ಉತ್ಪಾದಕರ ಹೆಸರು, ವಿಳಾಸ, ಎಂಆರ್‌ಪಿ, ನಿವ್ವಳ ತೂಕ, ಆಕಾರ, ಗ್ರಾಹಕರ ದೂರು ಸಲ್ಲಿಕೆಗೆ ಸಂಬಂಧಪಟ್ಟ ಮಾಹಿತಿಯನ್ನು ಅಂತರ್ಜಾಲದಲ್ಲಿ ನಿರ್ದಿಷ್ಟ ಗಾತ್ರದ ಅಕ್ಷರಗಳಲ್ಲಿ ಪ್ರಕಟಿಸುವುದು ಕಡ್ಡಾಯ. ಇದನ್ನು ಪಾಲಿಸುವಂತೆ ಇಲಾಖೆಯು ಇ- ಕಾಮರ್ಸ್‌ ಸಂಸ್ಥೆಗಳಿಗೆ ಪತ್ರ ಬರೆದು ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ನೀಡುವಂತೆಯೂ ಸೂಚಿಸಿತ್ತು. ಈವರೆಗೆ ಬೆರಳೆಣಿಕೆ ಸಂಸ್ಥೆಗಳಷ್ಟೇ ಕ್ರಮ ಕೈಗೊಂಡಿವೆ. ಆ ಹಿನ್ನೆಲೆಯಲ್ಲಿ ಸದ್ಯದಲ್ಲೇ ಪರಿಶೀಲನೆ ಆರಂಭಿಸಿ ಪ್ರಕರಣ ದಾಖಲಿಸಲು ನಿರ್ಧರಿಸಿದೆ.

ವಂಚನೆ ಹೇಗೆ: ಅಂತರ್ಜಾಲದಲ್ಲಿ ಪ್ರಕಟಿಸುವ ಉತ್ಪನ್ನದ ಎಲ್ಲ ತೆರಿಗೆ ಒಳಗೊಂಡಂತೆ ಎಂಆರ್‌ಪಿ ದರ ಪ್ರಕಟಿಸದೆ ಭಾರಿ ರಿಯಾಯ್ತಿ ಪ್ರಕಟಿಸುತ್ತವೆ. ಮೂಲ ಬೆಲೆಯೇ ಗೊತ್ತಿಲ್ಲದೆ ರಿಯಾಯ್ತಿ ಆಕರ್ಷಣೆಗೆ ಒಳಗಾಗಿ ಖರೀದಿಸಿದಾಗ ನಿಗದಿತ ರಿಯಾಯ್ತಿ ಸಿಗದೆ ಹೋಗಬಹುದು. ಖರೀದಿಸಿದ ಉತ್ಪನ್ನದ ತೂಕ, ಅಳತೆಯಲ್ಲಿ ಲೋಪ. (ಉದಾ: 6.3 ಮೀ. ಉದ್ದದ ಸೀರೆ ಖರೀದಿಸಿದರೆ 5.45 ಮೀ. ಮಾತ್ರ ಇರುವುದು), ಖರೀದಿಸಿದ ಉತ್ಪನ್ನದ ಪೂರಕ ಉತ್ಪನ್ನ (ಆಕ್ಸೆಸರಿಸ್‌) ನೀಡದೆ ವಂಚಿಸುವುದು.

ಆನ್‌ಲೈನ್‌ನಲ್ಲಿ ಖರೀದಿಸುವ ಗ್ರಾಹಕರ ಅನುಕೂಲಕ್ಕಾಗಿ ಸರಕಿನ ಎಂಆರ್‌ಪಿ ಸೇರಿದಂತೆ ಇತರೆ ವಿವರ ಪ್ರಕಟಿಸುವುದು ಕಡ್ಡಾಯವಾಗಿದ್ದು, ಈ ಬಗ್ಗೆ ಇ-ಕಾಮರ್ಸ್‌ ಸಂಸ್ಥೆಗಳಿಗೆ ಮಾಹಿತಿ ನೀಡಲಾಗಿದೆ. ಆದರೂ ಕೆಲ ಸಂಸ್ಥೆಗಳು ವಿವರ ಪ್ರಕಟಿಸದಿರುವುದು ಕಂಡುಬಂದಿದ್ದು, ಈ ಬಗ್ಗೆ ತಿಳಿವಳಿಕೆ ನೀಡಲಾಗುತ್ತಿದೆ. ಸದ್ಯದಲ್ಲೇ ನಿಯಮಾನುಸಾರ ಕ್ರಮ ಕೈಗೊಳ್ಳಲು ಸಿದ್ಧತೆ ನಡೆದಿದೆ.
– ಎಂ.ಮಮತ, ಸಹಾಯಕ ನಿಯಂತ್ರಕರು, ಕಾನೂನು ಮಾಪನ ಇಲಾಖೆ

ದಂಡ- ಜೈಲು ಶಿಕ್ಷೆ
ಮೊದಲ ಬಾರಿ ನಿಯಮ ಉಲ್ಲಂಘನೆಗೆ 5000 ರೂ. ದಂಡ. ಎರಡನೇ ಬಾರಿ ನಿಯಮ ಉಲ್ಲಂಘನೆಗೆ ನ್ಯಾಯಾಲಯದಲ್ಲಿ ದಾವೆ ಹೂಡಿ, ಗರಿಷ್ಠ ಒಂದು ವರ್ಷದವರೆಗೆ ಜೈಲು ಶಿಕ್ಷೆ, ದಂಡ ವಿಧಿಸಲು ಅವಕಾಶವಿದೆ. ಇ-ಕಾಮರ್ಸ್‌ ಸಂಸ್ಥೆಗಳು ನಾನಾ ಕಂಪನಿ, ಬ್ರಾಂಡ್‌ನ‌ ಉತ್ಪನ್ನಗಳನ್ನು ಒಂದೇ ಸೂರಿನಡಿ ಮಾರಾಟ ಮಾಡುತ್ತವೆ. ಆದರೆ ನಿಯಮ ಉಲ್ಲಂಘನೆಯಾದಾಗ ನಿರ್ದಿಷ್ಟ ಕಂಪನಿ ಜತೆಗೆ ಇ- ಕಾಮರ್ಸ್‌ ಸಂಸ್ಥೆಯೂ ಜವಾಬ್ದಾರಿ ಹೊರಬೇಕಾಗುತ್ತದೆ. ಸರಕಿನ ಸ್ವರೂಪ, ಸಂದರ್ಭಕ್ಕೆ ಪೂರಕವಾಗಿ ಜವಾಬ್ದಾರಿ ಗೊತ್ತುಪಡಿಸಲಾಗುತ್ತದೆ. ಆಯ್ದ ಉತ್ಪನ್ನಗಳ ಬಳಕೆ ಮಿತಿಯ ತಿಂಗಳು, ವರ್ಷದ ವಿವರವನ್ನು ಆನ್‌ಲೈನ್‌ನಲ್ಲಿ ಪ್ರಕಟಿಸುವ ಅಗತ್ಯವಿಲ್ಲ. ಆದರೆ ಉತ್ಪನ್ನದ ಮೇಲೆ ನಮೂದಿಸುವುದು ಕಡ್ಡಾಯ.

ಗ್ರಾಹಕರೂ ದೂರು ನೀಡಬಹುದು
ಆನ್‌ಲೈನ್‌ನಲ್ಲಿ ಸರಕು ಖರೀದಿ ವೇಳೆ ನಿಯಮ ಉಲ್ಲಂಘನೆಯಾಗಿದ್ದರೆ ಗ್ರಾಹಕರು ದಾಖಲೆ ಸಹಿತ ದೂರು ನೀಡಬಹುದಾಗಿದೆ. ದೂರವಾಣಿ ಸಂಖ್ಯೆ: 080- 2225 3500. ಇ-ಮೇಲ್‌ ವಿಳಾಸ: [email protected]

– ಎಂ.ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.