ಹೈ ಸೆಕ್ಯೂರಿಟಿ ನಂಬರ್‌ ಪ್ಲೇಟ್‌ಗೆ ಸಿದ್ಧತೆ


Team Udayavani, Jan 30, 2020, 3:08 AM IST

HSNP

ಬೆಂಗಳೂರು: ರಾಜ್ಯದಲ್ಲಿ ಎಲ್ಲಾ ಬಗೆಯ ವಾಹನಗಳಿಗೆ “ಹೈ-ಸೆಕ್ಯೂರಿಟಿ ನಂಬರ್‌ ಪ್ಲೇಟ್‌’ (ಗರಿಷ್ಠ ಭದ್ರತೆ ಫ‌ಲಕ) ಅಳವಡಿ ಸುವ ಯೋಜನೆ ಆರಂಭಿಸಲು ಸಿದ್ಧತೆ ನಡೆಸಲಾಗಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಸುಪ್ರೀಂಕೋರ್ಟ್‌ ತೀರ್ಪು ಹಾಗೂ ಕೇಂದ್ರ ಸರ್ಕಾರ ಆದೇಶವಿದ್ದರೂ ಕರ್ನಾಟಕದಲ್ಲಿ “ಹೈ ಸೆಕ್ಯೂರಿಟಿ ನಂಬರ್‌ ಪ್ಲೇಟ್‌’ ಅಳವಡಿಕೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿ ವಕೀಲ ಕೆ.ಬಿ. ವಿಜಯಕುಮಾರ್‌ ಸಲ್ಲಿಸಿದ್ದ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ. ಎ.ಎಸ್‌. ಓಕಾ ಹಾಗೂ ನ್ಯಾ. ಹೇಮಂತ್‌ ಚಂದನಗೌಡರ್‌ ಅವರಿದ್ದ ವಿಭಾಗೀ ಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.

ಈ ವೇಳೆ ಸರ್ಕಾರಿ ವಕೀಲ ವಿ. ಶ್ರೀನಿಧಿಯವರು ಪ್ರಮಾಣಪತ್ರ ಸಲ್ಲಿಸಿ, ಎಲ್ಲಾ ಬಗೆಯ ವಾಹನ ಗಳಿಗೆ “ಹೈ-ಸೆಕ್ಯೂರಿಟಿ ನಂಬರ್‌ ಪ್ಲೇಟ್‌’ (ಗರಿಷ್ಠ ಭದ್ರತೆಯ ನೋಂದಣಿ ಫ‌ಲಕ) ಅಳವಡಿಸುವ ಯೋಜನೆ ಆರಂಭಿಸಲು ಸಿದ್ಧತೆ ನಡೆಸಲಾಗಿದೆ . ರಾಜ್ಯ ಸರ್ಕಾರ 2018ರ ಏಪ್ರಿಲ್‌ನಿಂದ 2019ರ ಆಗಸ್ಟ್‌ವರೆಗೆ ಹೈ ಸೆಕ್ಯೂರಿಟಿ ನಂಬರ್‌ ಪ್ಲೇಟ್‌ ಅಳವಡಿಸದ ಒಟ್ಟು 20,487 ವಾಹನಗಳಿಂದ 4.6 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ ಎಂದು ನ್ಯಾಯಪೀಠಕ್ಕೆ ಮಾಹಿತಿ ಒದಗಿಸಿದರು.

ಅದನ್ನು ಪರಿಗಣಿಸಿದ ನ್ಯಾಯಪೀಠ, ಕೇಂದ್ರ ಮೋಟಾರು ವಾಹನ ಕಾಯ್ದೆ-1989ರ ಸೆಕ್ಷನ್‌ 50 ಮತ್ತು 51ರ ಅಡಿಯಲ್ಲಿ ನಿಗದಿತ ನಮೂನೆಯಲ್ಲಿ ಹೈಸೆಕ್ಯೂರಿಟಿ ನಂಬರ್‌ ಪ್ಲೇಟ್‌ ಅಳವಡಿಸದ ಖಾಸಗಿ ಹಾಗೂ ವಾಣಿಜ್ಯ ಸೇರಿದಂತೆ ಎಲ್ಲಾ ಬಗೆಯ ವಾಹನಗಳ ವಿರುದ್ಧ ವಿಶೇಷ ಕಾರ್ಯಾ ಚರಣೆ ನಡೆಸಿ ದಂಡ ವಿಧಿಸಬೇಕು. ಜತೆಗೆ, ಈ ಕುರಿತಂತೆ ಕೈಗೊಂಡ ಕ್ರಮಗಳ ವರದಿಯನ್ನು ಮುಂದಿನ ವಿಚಾರಣೆ ವೇಳೆ ಸಲ್ಲಿಸುವಂತೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಸರ್ಕಾರ ಹೇಳಿದ್ದಿಷ್ಟು: “ಮೋಟಾರು ವಾಹನ ಕಾಯ್ದೆ-1989’ರ ಸೆಕ್ಷನ್‌ 50 ಮತ್ತು 51ರಂತೆ ಎಲ್ಲ ವಾಹನಗಳಿಗೆ ಭದ್ರತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಗರಿಷ್ಠ ಭದ್ರತೆಯ (ಹೈ ಸೆಕ್ಯೂರಿಟಿ) ನಂಬರ್‌ ಪ್ಲೇಟ್‌ಗಳನ್ನು ಅಳವಡಿಸಬೇಕು. ಈ ಬಗ್ಗೆ 2018ರಲ್ಲಿ ಸುಪ್ರೀಂಕೋರ್ಟ್‌ ಹಾಗೂ ಕೇಂದ್ರ ಸರ್ಕಾರ ಆದೇಶ ಹೊರಡಿಸಿವೆ. ಎಲ್ಲ ರಾಜ್ಯಗಳಲ್ಲಿ 2019ರ ಏ.1ರಿಂದ “ಎಚ್‌ಎಸ್‌ಆರ್‌ಪಿ’ (ಗರಿಷ್ಠ ಭದ್ರತೆಯ ಫ‌ಲಕ) ಜಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.

2018ರ ಏಪ್ರಿಲ್‌ನಿಂದ 2019ರ ಆಗಸ್ಟ್‌ವರೆಗೆ ರಾಜ್ಯಾದ್ಯಂತ 5,85,830 ವಾಹನ ತಪಸಾಣೆ ನಡೆಸಿ, ಹೈ ಸೆಕ್ಯೂರಿಟಿ ನಂಬರ್‌ ಪ್ಲೇಟ್‌ ಅಳವಡಿಸದ 20,487 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 2019ರ ಏ.1ರ ನಂತರ ನಿರ್ಮಾಣವಾದ ವಾಹನಗಳಿಗೆ ಆಯಾ ತಯಾರಿಕಾ ಸಂಸ್ಥೆಗಳಿಂದಲೇ ಸೆಕ್ಯೂರಿಟಿ ನಂಬರ್‌ ಅಳವಡಿಕೆ ಜವಾಬ್ದಾರಿ ಹೊಂದಿವೆ ಎಂದು ಸರ್ಕಾರ ಕೋರ್ಟ್‌ಗೆ ಭರವಸೆ ನೀಡಿದೆ.

ಟಾಪ್ ನ್ಯೂಸ್

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.