ಲೋಕಸಭೆ ಮತ ಎಣಿಕೆಗೆ ಸಿದ್ಧತೆ ಆರಂಭ


Team Udayavani, May 5, 2019, 3:09 AM IST

lokasabher

ಬೆಂಗಳೂರು: ಈಗಾಗಲೇ ಬೆಂಗಳೂರಿನ ಮೂರು ಲೋಕಸಭೆ ಕ್ಷೇತ್ರಗಳ ಮತ ಎಣಿಕೆಗೆ ಸಿದ್ಧತೆ ಆರಂಭಿಸಿದ್ದು, ಬೆಂಗಳೂರಿನ ಮೂರು ಕೇಂದ್ರಗಳಲ್ಲಿ ವಿಧಾನಸಭಾ ಕ್ಷೇತ್ರವಾರು ಪ್ರತ್ಯೇಕವಾಗಿ ಮತ ಎಣಿಕೆ ನಡೆಯಲಿದೆ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ್‌ ಪ್ರಸಾದ್‌ ತಿಳಿಸಿದ್ದಾರೆ.

ಚುನಾವಣಾಧಿಕಾರಿಗಳು ಹಾಗೂ ನಗರ ಪೊಲೀಸ್‌ ಆಯುಕ್ತ ಟಿ.ಸುನೀಲ್‌ ಕುಮಾರ್‌ ಜಂಟಿ ನೇತೃತ್ವದಲ್ಲಿ ಶನಿವಾರ ನಡೆದ ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಕೇಂದ್ರಗಳ ತಪಾಸಣೆ ಕಾರ್ಯದ ಬಳಿಕ ಅವರು ಮಾತನಾಡಿದರು.

ಮತ ಎಣಿಕೆಗೆ ಈಗಾಗಲೇ ಸಿಬ್ಬಂದಿ ನಿಯೋಜಿಸಿದ್ದು, ಮೇ 16ರಂದು ಮೊದಲ ಹಂತದಲ್ಲಿ ಹಾಗೂ ಮೇ 21ರಂದು ಎರಡನೇ ಹಂತದಲ್ಲಿ ಅವರಿಗೆ ತರಬೇತಿ ನೀಡಲಾಗುತ್ತಿದೆ. ಯಾರನ್ನು ಯಾವ ಕ್ಷೇತ್ರದ ಮತ ಎಣಿಕೆ ಕೇಂದ್ರಕ್ಕೆ ನಿಯೋಜಿಸಲಾಗಿದೆ ಎಂದು ಮೇ 22ರಂದು ತಿಳಿಸಲಾಗುತ್ತದೆ. ಮೇ 23ರಂದು ಯಾವ ವಿಧಾಸಭಾ ಕ್ಷೇತ್ರದ ಕೊಠಡಿಗೆ ನಿಯೋಜನೆಗೊಂಡಿದ್ದಾರೆ ಎಂಬ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಿದರು.

ನಗರದ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ತಲಾ 8 ವಿಧಾನಸಭಾ ಕ್ಷೇತ್ರಗಳಿವೆ. ಅಲ್ಲಿನ ಮತಯಂತ್ರಗಳನ್ನು ಪ್ರತ್ಯೇಕವಾಗಿ ಇಡಲಾಗಿದ್ದು, ಪ್ರತ್ಯೇಕವಾಗಿಯೇ ಮತ ಎಣಿಕೆ ನಡೆಯಲಿದೆ. ಮತಯಂತ್ರ ಇಟ್ಟಿರುವ ಸ್ಟ್ರಾಂಗ್‌ ರೂಂ ಪಕ್ಕದಲ್ಲೇ ಮತ ಎಣಿಕೆಗೆ ಕೊಠಡಿ ನಿಗದಿ ಮಾಡಲಾಗಿದೆ. ಪ್ರತಿ ಕೊಠಡಿಗೆ 15 ಟೇಬಲ್‌ಗ‌ಳನ್ನು ಹಾಕಲಾಗುತ್ತದೆ. ಕೊಠಡಿಗೆ ಒಬ್ಬ ಮತ ಎಣಿಕೆ ರಿಟರ್ನಿಂಗ್‌ ಅಧಿಕಾರಿ, ಒಬ್ಬ ಸಹಾಯಕ ರಿಟರ್ನಿಂಗ್‌ ಅಧಿಕಾರಿ ಹಾಗೂ ಸೂಕ್ಷ್ಮವೀಕ್ಷಕರಾಗಿ ಕೇಂದ್ರ ಸರ್ಕಾರದ ಒಬ್ಬ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಕಾರ್ಯಚಟುವಟಿಕೆ ಹೇಗಿರಲಿದೆ?: ಮತ ಎಣಿಕೆ ದಿನ ಬೆಳಗ್ಗೆ 8 ಗಂಟೆಗೆ ಅಂಚೆ ಮತಪತ್ರ ಎಣಿಕೆಯಾಗಲಿದೆ. 11ರಿಂದ 12 ಗಂಟೆಯೊಳಗೆ ಇವಿಎಂ ಮತಗಳ ಎಣಿಕೆ ಕೆಲಸ ಮುಕ್ತಾಯವಾಗಲಿದ್ದು, ಆ ಬಳಿಕೆ ಲಾಟರಿ ಮೂಲಕ ಆಯ್ದ 5 ಮತಗಟ್ಟೆಗಳ ವಿವಿ ಪ್ಯಾಟ್‌ನ ಮತಚೀಟಿ ಎಣಿಕೆ ಮಾಡಲಾಗುತ್ತದೆ. ಸಂಜೆ 4 ಗಂಟೆಗೆ ಅಂತಿಮ ಫ‌ಲಿತಾಂಶ ಹೊರಬೀಳಬಹುದು.

ಇನ್ನು ಗೆಲುವಿನ ಅಂತರ ಅಂಚೆ ಮತಗಳಿಗಿಂತ ಕಡಿಮೆ ಇದ್ದರೆ ಮತ್ತೂಮ್ಮೆ ಅಂಚೆ ಮತಪತ್ರ ಎಣಿಕೆ ಮಾಡಲಾಗುವುದು. ಮತ ಎಣಿಕೆ ವೇಳೆ ಆ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕೊಠಡಿಯ ಸ್ಥಳಾವಕಾಶದ ಆಧಾರದ ಮೇಲೆ ಚುನಾವಣಾ ಅಭ್ಯರ್ಥಿಯ ಏಜೆಂಟ್‌ಗಳಿಗೆ ಸ್ಥಳಾವಕಾಶ ಮಾಡಿಕೊಡಲಾಗುತ್ತದೆ. ಮೊದಲಿಗೆ ರಾಷ್ಟ್ರೀಯ ಪಕ್ಷದ ಏಜೆಂಟ್‌, ನಂತರ ರಾಜ್ಯ ಹಾಗೂ ಸ್ಥಳೀಯ ಪಕ್ಷಗಳಿಗೆ, ಪಕ್ಷೇತರರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ಲಾಟರಿ ಮೂಲಕ ಆಯ್ದ ವಿವಿ ಪ್ಯಾಟ್‌ಗಳ ಮತಚೀಟಿ ಎಣಿಕೆ: ಇವಿಎಂ ಮತಗಳ ಎಣಿಕೆ ಮುಗಿದ ನಂತರ, ಸುಪ್ರೀಂಕೋರ್ಟ್‌ ನಿರ್ದೇಶನದಂತೆ ಇವಿಎಂ ಫ‌ಲಿತಾಂಶದೊಂದಿಗೆ ವಿವಿ ಪ್ಯಾಟ್‌ ಚೀಟಿಗಳ ಫ‌ಲಿತಾಂಶ ತಾಳೆ ಮಾಡಿ ನೋಡಲಾಗುತ್ತದೆ. ಇದಕ್ಕಾಗಿ ವಿಧಾನಸಭಾ ಕ್ಷೇತ್ರವಾರು ತಲಾ 5 ಮತಗಟ್ಟೆಗಳ ಮತಯಂತ್ರಗಳನ್ನು ಎಲ್ಲಾ ಪಕ್ಷ ಏಜೆಂಟ್‌ಗಳ ಸಮ್ಮುಖದಲ್ಲಿಯೇ ಲಾಟರಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇವಿಎಂಗಳಲ್ಲಿನ ಮತಗಳು ವಿವಿ ಪ್ಯಾಟ್‌ನ ಮತಗಳ ನಡುವೆ ವ್ಯಾತ್ಯಾಸ ಬಂದರೆ ಅಂತಿಮವಾಗಿ ವಿವಿ ಪ್ಯಾಟ್‌ಗಳಲ್ಲಿನ ಮತಗಳನ್ನೇ ಪರಿಗಣಿಸಲಾಗುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದರು.

ಮತ ಏಣಿಕೆ ವಿಡಿಯೋ ಸಿಡಿ ಅಭ್ಯರ್ಥಿಗಳಿಗೆ: ಚುನಾವಣಾ ಆಯೋಗದ ನಿರ್ದೇಶನದಂತೆ ಈ ಬಾರಿ ಮತ ಎಣಿಕೆ ಸಂದರ್ಭದಲ್ಲಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರವಾರು ಮತ ಎಣಿಕೆ ಕೊಠಡಿಗಳ ಕಾರ್ಯಚಟುವಟಿಕೆಯನ್ನು ಸಂಪೂರ್ಣವಾಗಿ ವಿಡಿಯೋ ರೆಕಾರ್ಡ್‌ ಮಾಡಲಾಗುತ್ತದೆ. ಫ‌ಲಿತಾಂಶದ ಬಳಿಕ ಅದನ್ನು ಸಿ.ಡಿ ಮಾಡಿಸಿ, ಆ ಕ್ಷೇತ್ರದಿಂದ ಸ್ಪರ್ಧಿಸಿರುವ ಪ್ರತಿಯೊಬ್ಬ ಅಭ್ಯರ್ಥಿಗೂ ತಲುಪಿಸಲಾಗುತ್ತದೆ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.