ಹಾಲಿ, ಮಾಜಿ ಆಯುಕ್ತರ ವಿಚಾರಣೆ ಸಾಧ್ಯತೆ
Team Udayavani, Sep 29, 2019, 3:04 AM IST
ಬೆಂಗಳೂರು: ರಾಜ್ಯದ ಹಲವು ರಾಜಕಾರಣಿಗಳು, ಪೊಲೀಸ್ ಅಧಿಕಾರಿಗಳು, ಮಠಾಧೀಶರ ಫೋನ್ ಕರೆಗಳ ಕದ್ದಾಲಿಕೆ ಮಾಡಿರುವ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಬಿಐ, ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹಾಗೂ ಹಿಂದಿನ ಪೊಲೀಸ್ ಆಯುಕ್ತ ಟಿ.ಸುನೀಲ್ಕುಮಾರ್ ಅವರನ್ನು ವಿಚಾರಣೆಗೆ ಕರೆಯುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಟಿ.ಸುನೀಲ್ ಕುಮಾರ್ ಅವರ ಅಧಿಕಾರ ಅವಧಿಗೂ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಯುತ್ತಿದೆ. ಜತೆಗೆ, ಹಾಲಿ ಆಯುಕ್ತ ಭಾಸ್ಕರ್ ರಾವ್ ಅವರ ಫೋನ್ ಕದ್ದಾಲಿಕೆ ನಡೆದಿದೆ ಎಂಬ ವಿಚಾರವೂ ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರೂ ಅಧಿಕಾರಿಗಳನ್ನು ವಿಚಾರಣೆಗೆ ಕರೆಸಿ ಮಾಹಿತಿ ಪಡೆದುಕೊಳ್ಳಲು ಸಿಬಿಐ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಈ ಬೆಳವಣಿಗೆಗಳ ನಡುವೆಯೇ “ಸಿಬಿಐ ಅಧಿಕಾರಿಗಳು ವಿಚಾರಣೆಗೆ ಕರೆದರೆ ಹಾಜರಾಗುವೆ’ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ಶನಿವಾರ ಈ ಕುರಿತು ಪತ್ರಕರ್ತರ ಜತೆ ಮಾತನಾಡಿದ ಅವರು, “ಇದುವರೆಗೂ ನನಗೆ ಯಾವುದೇ ನೋಟಿಸ್ ಬಂದಿಲ್ಲ. ನೋಟಿಸ್ ಬಂದರೆ ವಿಚಾರಣೆಗೆ ಹೋಗುತ್ತೇನೆ’ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ