ಸಂಪುಟ ಸಭೆಗೆ ಹಾಜರು, ಅರ್ಧಕ್ಕೇ ನಿರ್ಗಮನ
Team Udayavani, Nov 20, 2018, 6:00 AM IST
ಬೆಂಗಳೂರು: ಕಳೆದ ನಾಲ್ಕು ಸಚಿವ ಸಂಪುಟ ಸಭೆಗೆ ಗೈರು ಹಾಜರಾಗಿದ್ದ ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ
ಸೋಮವಾರದ ಸಂಪುಟ ಸಭೆಗೆ ಹಾಜರಾಗಿದ್ದರು. ಆದರೆ, ಸಂಪುಟ ಸಭೆಯ ನಡುವೆಯೇ ಮುಖ್ಯಮಂತ್ರಿಯವರ ಮಾತಿನಿಂದ ಅಸಮಾಧಾನಗೊಂಡು ಅರ್ಧಕ್ಕೇ ಎದ್ದು ಹೋದರು.
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬೆಲ್ಲ ವದಂತಿಗಳು ಹರಡಿದ್ದವು. ಕಬ್ಬು ಬೆಳೆಗಾರರ ಬಾಕಿ ಪಾವತಿ ವಿಚಾರ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿದ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ, ನಿಮ್ಮ ಕಾರ್ಖಾನೆಯಿಂದಲೂ ರೈತರಿಗೆ ಹಣ ಪಾವತಿಯಾಗಬೇಕಿದೆ.
ಜಿಲ್ಲಾ ಉಸ್ತುವಾರಿ ಸಚಿವರಾಗಿ ನೀವು ರೈತರ ಪ್ರತಿಭಟನೆ ತಡೆಯಬಹುದಿತ್ತು.ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಬಹುದಿತ್ತು ಎಂದು ಹೇಳಿದರು. ಇದರಿಂದ ಬೇಸರಗೊಂಡ ರಮೇಶ ಜಾರಕಿಹೊಳಿ ಸಂಪುಟ ಸಭೆಯಿಂದ ನಿರ್ಗಮಿಸಿದರು. ನಂತರ ತಮ್ಮ ರಾಜೀನಾಮೆ ಪತ್ರ ನೀಡಿದ್ದಾರೆಂಬ ಮಾತುಗಳು ಕೇಳಿಬಂದವು. ಆದರೆ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಮೇಶ ಜಾರಕಿಹೊಳಿ ರಾಜೀನಾಮೆ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.
ರಮೇಶ ಜಾರಕಿಹೊಳಿ ಸಹ ನಾನ್ಯಾಕೆ ರಾಜೀನಾಮೆ ನೀಡಲಿ ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು. ಮೂಲಗಳ ಪ್ರಕಾರ ಕಳೆದ ನಾಲ್ಕು ಸಂಪುಟ ಸಭೆಗೆ ರಮೇಶ್ ಜಾರಕಿಹೊಳಿ ಗೈರು ಹಾಜರಾಗಿದ್ದರು. ಸತತ ಐದು ಬಾರಿ ಗೈರು ಹಾಜರಾದರೆ ಸಂಪುಟದಿಂದ ತೆಗೆಯಲು ಅವಕಾಶವಿದೆ. ಆರ್ಟಿಐ ಕಾರ್ಯಕರ್ತರೊಬ್ಬರು ಈ ಬಗ್ಗೆ ಮಾಹಿತಿ ಸಹ ಪಡೆದು ಕಾನೂನು ಹೋರಾಟ ನಡೆಸುವುದಾಗಿ ಹೇಳಿದ್ದರು.
ಹೀಗಾಗಿ, ಸೋಮವಾರದ ಸಭೆಗೆ ರಮೇಶ ಜಾರಕಿಹೊಳಿ ಹಾಜರಾದರು. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಸಂಪುಟ ಸಭೆಗೆ ಹಾಜರಾಗುವಂತೆ ಸೂಚಿಸಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?