ಒಕ್ಕಲಿಗರ ಸಂಘದ ಅಧ್ಯಕ್ಷ ಪದಚ್ಯುತಿ


Team Udayavani, Jul 31, 2018, 11:23 AM IST

blore-7.jpg

ಬೆಂಗಳೂರು: ದಿಢೀರ್‌ ಬೆಳವಣಿಗೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವಲ್ಲಿ ವಿಫ‌ಲರಾದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಡಿ.ಎನ್‌.ಬೆಟ್ಟೇಗೌಡ ಹಾಗೂ ಇತರ ಪದಾಧಿಕಾರಿಗಳು ಸೋಮವಾರ ಪದಚ್ಯುತಿಗೊಂಡಿದ್ದು, ಆ.7ರಂದು ಅಧ್ಯಕ್ಷ, ಪದಾಧಿಕಾರಿಗಳ ಆಯ್ಕೆ ನಡೆಯಲಿದೆ.

ನಾಲ್ಕೂವರೆ ವರ್ಷದ ಹಿಂದೆ ಒಕ್ಕಲಿಗರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಮೊದಲ ಮೂರು ವರ್ಷ ಡಾ.ಅಪ್ಪಾಜಿಗೌಡ
ಅಧ್ಯಕ್ಷರಾಗಿದ್ದರು. ಬಳಿಕ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಕೈಗೊಂಡ ಕಾರಣ 2017ರ ಜನವರಿಯಲ್ಲಿ ಡಿ.ಎನ್‌.ಬೆಟ್ಟೇಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಸದ್ಯ ಜಂಟಿ ಕಾರ್ಯದರ್ಶಿಯಾಗಿದ್ದ ನಾರಾಯಣ ಮೂರ್ತಿ ಅವರನ್ನು ಹಂಗಾಮಿ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.

ಒಕ್ಕಲಿಗರ ಸಂಘದ ಅಧೀನ ಸಂಸ್ಥೆಗಳಲ್ಲಿ ಅನಗತ್ಯವಾಗಿ ಸಾವಿರಾರು ಸಿಬ್ಬಂದಿಯನ್ನು ನೇಮಕ ಮಾಡುವ ಮೂಲಕ
ಅಭ್ಯರ್ಥಿಗಳಿಂದ ದೊಡ್ಡ ಮೊತ್ತದ ಹಣ ಸಂಗ್ರಹಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಅನಗತ್ಯ ಸಿಬ್ಬಂದಿ ಕೈಬಿಡಬೇಕು ಎಂದು ಒತ್ತಾಯಿಸಿ ರಾಜ್ಯ ಒಕ್ಕಲಿಗರ ಸಂಘದ ಅಧೀನದಲ್ಲಿರುವ 18 ಸಂಸ್ಥೆಗಳ ನೌಕರರು ಎರಡು ಸುತ್ತಿನ ಪ್ರತಿಭಟನೆ ನಡೆಸಿದ್ದರು. ಇದರಿಂದ ಕಿಮ್ಸ್‌ ಸೇರಿ ಇತರೆ ಆಸ್ಪತ್ರೆಗಳಲ್ಲಿ ಹೊರ ರೋಗಿ ಚಿಕಿತ್ಸೆಯಲ್ಲಿ ವ್ಯತ್ಯಯ ಉಂಟಾಗಿತ್ತು.

ಸಂಘದ ಸಂಸ್ಥೆಗಳ ಕಾಯಂ ನೌಕರರಿಗೆ ಸಕಾಲದಲ್ಲಿ ವೇತನ ನೀಡದ ಸ್ಥಿತಿ ಇರುವಾಗ ಅನಗತ್ಯ ಸಿಬ್ಬಂದಿ ನೇಮಕದ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಈ ಬಗ್ಗೆ ಸಂಘದ ನಿರ್ದೇಶಕರೂ ಆಕ್ಷೇಪ ವ್ಯಕ್ತಪಡಿಸಿದ್ದರು. ಕೆಲ ನಿರ್ದೇಶಕರು ನೌಕರರ ಸಂಘಕ್ಕೆ ಕುಮ್ಮಕ್ಕು ನೀಡಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂಬುದಾಗಿ ಪದಚ್ಯುತ ಅಧ್ಯಕ್ಷ ಬೆಟ್ಟೇಗೌಡ ಕೂಡ ಈ ಹಿಂದೆ ಆರೋಪಿಸಿದ್ದರು.

ಸಭೆ ಕರೆದಿರಲಿಲ್ಲ: ಈ ನಡುವೆ ಸಂಘದ ಅಧ್ಯಕ್ಷರಾಗಿದ್ದ ಬೆಟ್ಟೇಗೌಡ, ಪ್ರಧಾನ ಕಾರ್ಯದರ್ಶಿ ಎಂ.ನಾಗರಾಜ್‌, ಖಜಾಂಚಿ ಕಾಳೇಗೌಡ ವಿರುದ್ಧ ಸಂಘದ 35 ನಿರ್ದೇಶಕರ ಪೈಕಿ 19 ನಿರ್ದೇಶಕರು ಅವಿಶ್ವಾಸ ನಿರ್ಣಯ ಮಂಡಿಸಿ ನೋಟಿಸ್‌ ನೀಡಿದ್ದರು. ಅವಿಶ್ವಾಸ ನಿರ್ಣಯ ಮಂಡಿಸಿದ ಏಳು ದಿನದೊಳಗೆ ಅಧ್ಯಕ್ಷರು ವಿಶ್ವಾಸ ಮತ ಸಾಬೀತು
ಪಡಿಸಬೇಕು. ಆದರೆ 12 ದಿನ ಕಳೆದರೂ ಬೆಟ್ಟೇಗೌಡರು ಸಭೆ ಕರೆಯದ ಕಾರಣ ಉಪಾಧ್ಯಕ್ಷರಾಗಿದ್ದ ಶಿವಲಿಂಗಯ್ಯ ಎಲ್ಲ 35 ನಿರ್ದೇಶಕರಿಗೆ ನೋಟಿಸ್‌ ನೀಡಿ ಸೋಮವಾರ ಸಭೆ ಕರೆದಿದ್ದರು.

ಅವಿಶ್ವಾಸದ ಪರ 21 ಮತ: ಶಿವಲಿಂಗಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ 22 ನಿರ್ದೇಶಕರು
ಪಾಲ್ಗೊಂಡಿದ್ದರು. ಬೆಟ್ಟೇಗೌಡ ಸೇರಿ ಹಲವರು ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ. ಅವಿಶ್ವಾಸ ನಿರ್ಣಯದ ಪರ 21 ಮತ
ಚಲಾವಣೆಯಾದ ಹಿನ್ನೆಲೆಯಲ್ಲಿ ಅಧ್ಯಕ್ಷರಾಗಿದ್ದ ಬೆಟ್ಟೇಗೌಡ, ಪ್ರಧಾನ ಕಾರ್ಯದರ್ಶಿ ಎಂ.ನಾಗರಾಜ್‌, ಖಜಾಂಚಿ ಕಾಳೇಗೌಡ ಪದಚ್ಯುತಿಗೊಂಡರು. ಬಳಿಕ ಉಪಾಧ್ಯಕ್ಷರಾದ ಶಿವಲಿಂಗಯ್ಯ, ಪ್ರಸನ್ನ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜಂಟಿ ಕಾರ್ಯದರ್ಶಿಯಾಗಿದ್ದ ನಾರಾಯಣ ಮೂರ್ತಿ ಅವರನ್ನು ಕಾರ್ಯದರ್ಶಿಯನ್ನಾಗಿ ಸಭೆಯಲ್ಲಿ ನೇಮಕ ಮಾಡಲಾಗಿದೆ.

ಸಂಘದ ಮೇಲೆ ಆರ್ಥಿಕ ಹೊರೆ ಪದಚ್ಯುತ ಅಧ್ಯಕ್ಷ ಸೇರಿ ಮೂವರು ಪದಾಧಿಕಾರಿಗಳ ವಿರುದ್ಧ ಜು.18ರಂದು ಅವಿಶ್ವಾಸ ನಿರ್ಣಯ ಮಂಡಿಸಿದ್ದೆವು. ಆದರೆ ಸಭೆಯನ್ನೇ ಕರೆಯದ ಕಾರಣ ಉಪಾಧ್ಯಕ್ಷರಾಗಿದ್ದ ಶಿವಲಿಂಗಯ್ಯ ನೋಟಿಸ್‌ ನೀಡಿ ನಡೆಸಿದ ಸಭೆಯಲ್ಲಿ ಅವಿಶ್ವಾಸದ ಪರ 21 ಮತ ಚಲಾವಣೆಯಾಗಿವೆ. ಬೆಟ್ಟೇಗೌಡರ ಒಂದೂವರೆ ವರ್ಷದ ಆಡಳಿತಾವಧಿಯಲ್ಲಿ ಅನಗತ್ಯವಾಗಿ 1100 ಸಿಬ್ಬಂದಿ ನೇಮಕವಾಗಿದೆ. ಅನುದಾನ ಕಾಯ್ದಿರಿಸದೆ ಅನಗತ್ಯ ಹುದ್ದೆಗಳನ್ನು ನೇಮಕ ಮಾಡಿ ಸಂಘಕ್ಕೆ ಆರ್ಥಿಕ ಹೊರೆ ತಂದಿದ್ದಾರೆ. ಅತಿಗಣ್ಯರಿಗೆ ನೀಡಿದ್ದ ಸೀಟು ಹಂಚಿಕೆ ಸೇರಿದಂತೆ ಸಂಘದ ನಿರ್ದೇಶಕರ ವಿರುದ್ಧವೂ ಅನಗತ್ಯ ಆರೋಪ ಮಾಡಿ ಸಂಘದ ಘನತೆಗೆ ಚ್ಯುತಿ ತಂದಿದ್ದರು ಎಂದು ಸಂಘದ ಮಾಜಿ ಅಧ್ಯಕ್ಷ ಅಪ್ಪಾಜಿಗೌಡ ಹೇಳಿದರು.

ನಾನು ಕಾನೂನು ಹೋರಾಟಕ್ಕೆ ಮುಂದಾಗುವುದಿಲ್ಲ. ಆದರೆ ಈ ಹಿಂದೆ ಕೆಲವರು ಸಂಘಕ್ಕೆ 61 ಕೋಟಿ ರೂ. ನಷ್ಟ ಮಾಡಿದ್ದನ್ನು ಬಯಲು ಮಾಡಿದ್ದೆ. ಅದಕ್ಕೆ ಕಾರಣರಾದವರು ಅವಿಶ್ವಾಸ ನಿರ್ಣಯದಲ್ಲಿ ಪಾಲ್ಗೊಂಡಿದ್ದು, ಅವರ ಅಕ್ರಮ ಬಯಲು ಮಾಡುವೆ. ಅವರಿಂದಲೇ ನಷ್ಟ ಭರಿಸಲು ಹೋರಾಟ ನಡೆಸುವೆ. 
 ಡಿ.ಎನ್‌.ಬೆಟ್ಟೇಗೌಡ, ಪದಚ್ಯುತ ಅಧ್ಯಕ

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.