ರಾಷ್ಟ್ರಪತಿ ಚುನಾವಣೆಗೆ ಶಾಸಕರ ಹಕ್ಕು ಚಲಾವಣೆ


Team Udayavani, Jul 18, 2017, 4:50 AM IST

President-Election-17-7.jpg

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ರಾಜ್ಯ ವಿಧಾನಸಭೆಯ 222 ಶಾಸಕರು ಹಾಗೂ ಓರ್ವ ಸಂಸದ ಮತದಾನ ಮಾಡಿದ್ದಾರೆ. 224 ಶಾಸಕರ ಪೈಕಿ ಜೆಡಿಎಸ್‌ನ ವೈಎಸ್‌ವಿ ದತ್ತ ಹಾಗೂ ಬಂಡಾಯ ಶಾಸಕ ಚಲುವರಾಯಸ್ವಾಮಿ ಮತದಾನದಿಂದ ದೂರ ಉಳಿದಿದ್ದರು. ಸಂಸದ ಪ್ರಕಾಶ್‌ ಹುಕ್ಕೇರಿ ಮಾತ್ರ ಬೆಂಗಳೂರಿನಲ್ಲಿ ಮತ ಚಲಾಯಿಸಿದರು. ಬೆಳಿಗ್ಗೆ 10 ಆರಂಭವಾಗಿ ಸಂಜೆ 5 ರವರೆಗೂ ಮತದಾನ ನಡೆಯಿತು. ರಾಜ್ಯದ ಶಾಸಕರ ಪರವಾಗಿ ಬಿಜೆಪಿಯ ಸಿ.ಟಿ. ರವಿ ಮೊದಲ ಮತದಾನ ಮಾಡಿದರೆ, ಕಾಂಗ್ರೆಸ್‌ನ ಸತೀಶ್‌ ಜಾರಕಿಹೊಳಿ ಕೊನೆಯವರಾಗಿ ಮತ ಚಲಾಯಿಸಿದರು. ಜೆಡಿಎಸ್‌ ಬಂಡಾಯ ಶಾಸಕರು ಮತದಾನಕ್ಕೆ ಮುನ್ನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಗೆ ಹೋಗಿ ಅವರ ಜತೆ ಮಾತುಕತೆ ನಡೆಸಿ ಅನಂತರ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು. ಈ ಸಂದರ್ಭದಲ್ಲಿ ಚೆಲುವರಾಯಸ್ವಾಮಿ ಗೈರು ಕುರಿತು ಮುಖ್ಯಮಂತ್ರಿಯವರು ಅಸಮಾಧಾನ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ.


ಬಿಜೆಪಿ ನೇತೃತ್ವದ ಎನ್‌.ಡಿ.ಎ ಅಭ್ಯರ್ಥಿ ರಾಮನಾಥ ಕೋವಿಂದ್‌ ಅವರ ಚುನಾವಣಾ ಏಜೆಂಟ್‌ ಆಗಿ ಬಿಜೆಪಿ ಮುಖ್ಯ ಸಚೇತಕ ಸುನಿಲ್‌ ಕುಮಾರ್‌, ಕಾಂಗ್ರೆಸ್‌ ನೇತೃತ್ವದ ಯುಪಿಎ ಬೆಂಬಲಿತ ಅಭ್ಯರ್ಥಿ ಮೀರಾ ಕುಮಾರ್‌ಗೆ ವಿಧಾನ ಪರಿಷತ್‌ ಸದಸ್ಯ ಎನ್‌.ಎಸ್‌. ಬೊಸರಾಜ್‌ ಏಜೆಂಟ್‌ ಆಗಿ ಕೆಲಸ ನಿರ್ವಹಿಸಿದರು. ಚುನಾವಣೆ ನಡೆದ ಹಿನ್ನೆಲೆಯಲ್ಲಿ ಮೂರು ರಾಜಕೀಯ ಪಕ್ಷಗಳು ಅನೌಪಚಾರಿಕ ಶಾಸಕಾಂಗ ಸಭೆ ನಡೆಸಿದವು. ಮಧ್ಯಾಹ್ನ 1 ಗಂಟೆಯ ಹೊತ್ತಿಗೆ ಬಿಜೆಪಿಯ 44 ಜನ ಸದಸ್ಯರು ಮತ ಚಲಾಯಿಸಿದ್ದರು.


ಸಂಜೆ ಮತದಾನ ಮುಕ್ತಾಯವಾದ ಅನಂತರ ಸಹಾಯಕ ಚುನಾವಣಾಧಿಕಾರಿ ಎಸ್‌. ಮೂರ್ತಿ ಮಾತನಾಡಿ, ಪಾರದರ್ಶಕ ಮತ್ತು ಶಾಂತಿಯುತ ಮತದಾನ ನಡೆದಿದೆ. 222 ಶಾಸಕರು ಮತ್ತು ಓರ್ವ ಸಂಸದರು ಮತ ಚಲಾಯಿಸಿದ್ದಾರೆ. ಇಬ್ಬರು ಶಾಸಕರು ಮತದಾನ ಮಾಡಿಲ್ಲ. ಮತ ಪೆಟ್ಟಿಗೆಗಳನ್ನು ಇಂದೇ ವಿಮಾನದ ಮೂಲಕ ಕೇಂದ್ರ ಚುನಾವಣಾ ಆಯೋಗಕ್ಕೆ ಬಿಗಿ ಭದ್ರತೆಯಲ್ಲಿ ತೆಗೆದುಕೊಂಡು ಹೋಗಲಾಗುವುದು. ಮತಪೆಟ್ಟಿಗೆಯೊಂದಿಗೆ ವಿಧಾನಸಭೆ ಸಚಿವಾಲಯದ ಮೂವರು ಹಿರಿಯ ಅಧಿಕಾರಿಗಳು ತೆರಳುತ್ತಿರುವುದಾಗಿ ಅವರು ಹೇಳಿದರು.


ರಾಷ್ಟ್ರಪತಿ ಚುನಾವಣೆಯಲ್ಲಿ ಆತ್ಮಸಾಕ್ಷಿಯ ಮತ ಹಾಕುವಂತೆ ಮನವಿ ಮಾಡಿದ್ದೇವೆ. ಮೀರಾ ಕುಮಾರ್‌ ಕೂಡ ಅದೇ ಮನವಿ ಮಾಡಿದ್ದಾರೆ. ಹಿಂದೆ ಇಂತಹದೇ ಸನ್ನಿವೇಶದಲ್ಲಿ ವಿವಿ ಗಿರಿಯವರು ಆಯ್ಕೆಯಾಗಿದ್ದರು.
– ಡಾ| ಜಿ.ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ

ಎನ್‌ಡಿಎ ಅಭ್ಯರ್ಥಿ ರಾಮನಾಥ ಕೋವಿಂದ ಪರವಾಗಿ ನಾವೆಲ್ಲ ಮತದಾನ ಮಾಡಿದ್ದೇವೆ. ಮುಂದೆ ರಾಷ್ಟ್ರಪತಿಯಾಗಿ ರಾಮನಾಥ ಕೋವಿಂದ್‌ ಆಯ್ಕೆಯಾಗುವುದು ಬಹುತೇಕ ಖಚಿತ. ರಾಮನಾಥ ಕೋವಿಂದ್‌ ಸಜ್ಜನ ಮತ್ತು ಸರಳ ವ್ಯಕ್ತಿಯಾಗಿಯಾಗಿದ್ದಾರೆ. ಅವರನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ.
– ಜಗದೀಶ್‌ ಶೆಟ್ಟರ್‌, ವಿಪಕ್ಷ ನಾಯಕ

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.