ಅಪಘಾತ ಹೆಚ್ಚಳ ತಡೆಗೆ ರಾತ್ರಿ ವಾಹನ ತಪಾಸಣಿ
9 ಗಂಟೆಯಿಂದ ತಡರಾತ್ರಿ 1 ಗಂಟೆವರೆಗೂ ವಾಹನಗಳ ತಪಾಸಣೆ: ಪೊಲೀಸ್ ಆಯುಕ್ತ ಕಮಲ್ ಪಂತ್
Team Udayavani, Oct 10, 2021, 11:30 AM IST
ಬೆಂಗಳೂರು: ಇತ್ತೀಚೆಗೆ ತಡರಾತ್ರಿ ಮತ್ತು ನಸುಕಿನಲ್ಲಿಯೇ ಅಪಘಾತಗಳು ಹೆಚ್ಚಾಗುತ್ತಿವೆ. ಹೀಗಾಗಿ ರಾತ್ರಿ 9 ಗಂಟೆಯಿಂದ ತಡರಾತ್ರಿ 1 ಗಂಟೆವರೆಗೂ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದರು.
ಸಂಚಾರ ಸಂಪರ್ಕ ದಿವಸ ಸಂಬಂಧ ಶನಿವಾರ ಹುಳಿಮಾವು ಸಂಚಾರ ಪೊಲೀಸ್ ಠಾಣೆ ಆವರಣದಲ್ಲಿ ಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಪಾಲ್ಗೊಂಡು ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿದರು. ಸಾರ್ವಜನಿಕರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಮದ್ಯ ಸೇವನೆ ಮಾಡಿರುವವರಿಗೆ ಭಾರಿ ಮೊತ್ತದೆ ದಂಡ ವಿಧಿಸುವುದರ ಜತೆ ಚಾಲನ ಪರವಾನಿಗೆ ರದ್ದು ಮಾಡಲು ಸೂಚಿಸಲಾಗುವುದು.
ಜಾಲಿ ರೈಡ್ ಮಾಡುವವರು ಹಾಗೂ ಸಂಚಾರ ನಿಯಮ ಉಲ್ಲಂಘಿಸುವವರ ಮೇಲೆ ಪೊಲೀಸರು ನಿಗಾವಹಿಸಿದ್ದಾರೆ ಎಂದರು. ಸಭೆಯಲ್ಲಿ ಭಾಗಿಯಾಗಿದ್ದ ನೂರಾರು ಮಂದಿ ಹುಳಿಮಾವು ನಿವಾಸಿಗಳು, ರಸ್ತೆ ದುರಸ್ತಿಗೊಂಡು ಭಾರಿ ಗುಂಡಿಗಳು ಬಿದ್ದಿವೆ. ಮಳೆ ಬಂದು ನೀರು ತುಂಬಿದರೆ ಗುಂಡಿ ಇರುವುದೇ ತಿಳಿಯದೇ ದ್ವಿಚಕ್ರವಾಹನ ಸವಾರರು ಗುಂಡಿಯಲ್ಲಿ ಬಿದ್ದು ಮೃತಪಡುತ್ತಿದ್ದಾರೆ. ಈ ಬಗ್ಗೆ ಕ್ರಮವಹಿಸಬೇಕು ಎಂದು ದೂರಿದರು.
ಇದನ್ನೂ ಓದಿ;- ಒಳ ರಸ್ತೆ ಅಭಿವೃದ್ಧಿಗೆ 5 ಕೋಟಿ ರೂ. ಅನುದಾನ
ಅದಕ್ಕೆ ಪ್ರತಿಕ್ರಿಯೆಸಿದ ಆಯುಕ್ತರು, ರಸ್ತೆ ದುರಸ್ತಿ ಹಾಗೂ ಗುಂಡಿ ಮುಚ್ಚುವುದು ಬಿಬಿಎಂಪಿ ಕೆಲಸ. ಸಾರ್ವಜನಿಕರ ಪರವಾಗಿ ಪೊಲೀಸ್ ಇಲಾಖೆ ಬಿಬಿಎಂಪಿ ಆಯುಕ್ತರ ಗಮನಕ್ಕೆ ತರುತ್ತದೆ ಎಂದರು. ಪಾರ್ಕಿಂಗ್ ಸಮಸ್ಯೆ ಪ್ರಶ್ನೆಗೆ ಉತ್ತರಿಸಿದ ಆಯುಕ್ತರು, ಎಲ್ಲೆಡೆ ಪಾರ್ಕಿಂಗ್ಗೆ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ. ಅದರಿಂದ ಸಂಚಾರಕ್ಕೆ ತೊಂದರೆಯಾಗುತ್ತದೆ.
ಹೀಗಾಗಿ ಸ್ಥಳ ನೋಡಿಕೊಂಡು ಪಾರ್ಕಿಂಗ್ಗೆ ಅಧಿ ಸೂಚನೆ ಹೊರಡಿಸುತ್ತೇವೆ. ವಿನಃಕಾರಣ ಜನರಿಗೆ ತೊಂದರೆ ನೀಡುವುದು ಸಂಚಾರಕ್ಕೆ ತೊಂದರೆಯಾಗದಂತೆ ಕೆಲವು ನಿಯಮಗಳನ್ನು ಪಾಲಿಸುವುದು ಅನಿವಾರ್ಯ ಎಂದು ಹೇಳಿದರು.
ಸಮೀಪದ ಆರ್ಟಿಓ ಕಚೇರಿಗೆ ಬರುವ ವಾಹನಗಳಿಂದ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ ಎಂಬ ಸ್ಥಳೀಯರ ದೂರಿಗೆ ಉತ್ತರಿಸಿದ ಅವರು, ವಾಹನ ನೋಂದಣಿಗೆ ಬರುವುದನ್ನು ನಿಯಂತ್ರಿಸುವುದು ಕಷ್ಟ. ಆದರೆ, ರಸ್ತೆಗಳಲ್ಲಿ ಬೇಕಾಬಿಟ್ಟಿ ನಿಲ್ಲಿಸಿದರೆ ಕ್ರಮಕೈಗೊಳ್ಳುತ್ತೇವೆ ಎಂದು ಹೇಳಿದರು.
ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ ಬಿ.ಆರ್.ರವಿಕಾಂತೇಗೌಡ, ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಮಹದೇವ್ ಜೋಶಿ, ಪೂರ್ವ ಸಂಚಾರ ವಿಭಾಗದ ಡಿಸಿಪಿ ಕೆ.ಎಂ.ಶಾಂತರಾಜು, ಆಗ್ನೇಯ ಉಪವಿಭಾಗ ಎಸಿಪಿ ಶಿವಶಂಕರ್ ರೆಡ್ಡಿ, ಹುಳಿಮಾವು ಸಂಚಾರ ಠಾಣೆ ಇನ್ಸ್ಪೆಕ್ಟರ್ ಕೆ.ಆರ್.ರವಿಕುಮಾರ್ ಇದ್ದರು.
ಟೋಯಿಂಗ್ ಸಿಬ್ಬಂದಿ ವಿರುದ್ಧ ಮತ್ತೆ ಆರೋಪ-
ಟೋಯಿಂಗ್ ಸಿಬ್ಬಂದಿ ವಿರುದ್ಧ ಆರೋಪಿಸಿದ ಸಾರ್ವಜನಿಕರಿಗೆ ಉತ್ತರಿಸಿದ ಆಯುಕ್ತರು, ನೋ ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದ ವಾಹನಗಳನ್ನು ನಿಯಮ ಪಾಲನೆ ಮೂಲಕ ಟೋಯಿಂಗ್ ಮಾಡಲಾಗುತ್ತಿದೆ. ಇನ್ನು ವಾಹನಗಳನ್ನು ಟೋಯಿಂಗ್ ಮಾಡುವಾಗ ಕೆಲವು ನಿಯಮಗಳ ಪಾಲಿಸುವಂತೆ ಎಲ್ಲ ಸಂಚಾರ ಪೊಲೀಸರು ಹಾಗೂ ಟೋಯಿಂಗ್ ಸಿಬ್ಬಂದಿಗೆ ಸೂಚಿಸಲಾಗಿದೆ. ಅದನ್ನು ಮೀರಿ ವಾಹನ ಟೋಯಿಂಗ್ ಮಾಡಿದರೆ, ಸಮೀಪದ ಪೊಲೀಸ್ ಠಾಣೆಯಲ್ಲಿ ದೂರು ನೀಡಬಹುದು ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ