ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಸರಣಿ ಪ್ರತಿಭಟನೆ
Team Udayavani, Jun 10, 2021, 5:23 PM IST
ಬೆಂಗಳೂರು: ಪೆಟ್ರೋಲ್, ಡೀಸೆಲ್ದರ ಏರಿಕೆ ವಿರೋಧಿಸಿ ಕಾಂಗ್ರೆಸ್ವತಿಯಿಂದ ರಾಜ್ಯಾದ್ಯಂತ ಜೂ.11ರಿಂದ 15 ರವರೆಗೆ ಐದು ಸಾವಿರಪೆಟ್ರೋಲ್ ಬಂಕ್ಗಳ ಬಳಿ ಸರಣಿಧರಣಿ ನಡೆಸಲು ತೀರ್ಮಾನಿಸಲಾಗಿದೆ.
ಬುಧವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿ ನೇತೃತ್ವದ ಕೇಂದ್ರಸರ್ಕಾರ ಪೆಟ್ರೋಲ್ ಬೆಲೆ ಏರಿಕೆಮೂಲಕ ಜನರ ಜೇಬು ಲೂಟಿ ಮಾಡುತ್ತಿದೆ. ಇದನ್ನು ಖಂಡಿಸಿ ರಾಜ್ಯದಲ್ಲಿ 5ದಿನ 5 ಸಾವಿರ ಪೆಟ್ರೋಲ್ ಬಂಕ್ ಗಳಲ್ಲಿ”100 ನಾಟೌಟ್’ ಅಭಿಯಾನ ಆರಂಭಿಸುತ್ತಿರುವುದಾಗಿ ಹೇಳಿದರು.
11 ರಂದುಎಲ್ಲ ಜಿಲ್ಲಾ ಕೇಂದ್ರ, 12 ರಂದುತಾಲೂಕು ಕೇಂದ್ರ, 13 ರಂದು ಜಿಲ್ಲಾಪಂಚಾಯಿತಿ ಹಾಗೂ ಹೋಬಳಿ ಕೇಂದ್ರಗಳಲ್ಲಿ, 14 ರಂದು ಗ್ರಾಮ ಪಂಚಾಯ್ತಿವ್ಯಾಪ್ತಿ ಪೆಟ್ರೋಲ್ ಬಂಕ್ಗಳಲ್ಲಿ, 15ರಂದು ಪ್ರಮುಖ ಪೆಟ್ರೋಲ್ ಬಂಕ್ಗಳಲ್ಲಿ ಪ್ರತಿಭಟನೆ ಮಾಡಲಾಗುವುದುಎಂದು ವಿವರಿಸಿದರು.
ಪ್ರತೀ ಜಿಲ್ಲೆಗಳ ಉಸ್ತುವಾರಿಗೆಒಬ್ಬೊಬ್ಬ ನಾಯಕರನ್ನು ನೇಮಿಸಲಾಗುತ್ತಿದೆ. ಈ ಉಸ್ತುವಾರಿ ಹೊತ್ತಿರುವನಾಯ ಕರು ಜೂಮ್ ಮೂಲಕ ಪ್ರತಿಭಟನೆ ವೀಕ್ಷಿಸಬೇಕು. ಪ್ರತಿಭಟನೆಯ 1ನಿಮಿಷದ ವಿಡಿಯೊ ಮಾಡಿ, ಪಕ್ಷದ ಐಟಿಸೆಲ್ ಹಾಗೂ ಸಾಮಾಜಿಕ ಜಾಲತಾಣವಿಭಾಗಕ್ಕೆ ಕಳುಹಿಸಬೇಕು. ಅದನ್ನುಎಐಸಿಸಿಗೂ ಕಳುಹಿಸಲಾಗುವುದುಎಂದು ತಿಳಿಸಿದರು. ಮಾಜಿ ಸಚಿವಪ್ರಿಯಾಂಕ್ ಖರ್ಗೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ