ಪ್ರಧಾನಿ ಮೋದಿ ಕ್ಷಮೆ ಕೇಳಲಿ
Team Udayavani, May 5, 2018, 7:00 AM IST
ನವದೆಹಲಿ: ಬೆಂಗಳೂರು ಹಾಗೂ ಸಿಲಿಕಾನ್ ವ್ಯಾಲಿಯ ಜನರನ್ನು ಸಿನ್ ವ್ಯಾಲಿ (ಪಾಪದ ಕಣಿವೆ)ಯವರು ಎಂದು ಹೇಳಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಕ್ಷಮೆ ಯಾಚಿಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.
ಪ್ರಧಾನಿ ಕೀಳು ಹೇಳಿಕೆ ನೀಡಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಿಂ Ì ಟೀಕಿಸಿದ್ದಾರೆ. ಕರ್ನಾಟಕದಲ್ಲಿ ಮತದಾನದ ದಿನ ಸಮೀಪಿಸುತ್ತಿದ್ದಂತೆಯೇ ಬಿಜೆಪಿಗೆ ಸೋಲಿನ ಭೀತಿ ಹೆಚ್ಚಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಭಜನೆಯ ವಾದ ಹರಡುತ್ತಿದ್ದಾರೆ ಎಂದು ದೂರಿದ್ದಾರೆ