ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ವಿವಿಧ ಸೇವಾ ಕಾರ್ಯ


Team Udayavani, Sep 18, 2017, 6:35 AM IST

17BNP-(12).jpg

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ 67ನೇ ಹುಟ್ಟುಹಬ್ಬ ನಿಮಿತ್ತ ರಾಜ್ಯದ ವಿವಿಧೆಡೆ ಸಮಾಜಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳುವ ಮೂಲಕ  ಶುಭ ಕೋರಲಾಯಿತು. ಬೆಂಗಳೂರಿನಲ್ಲಿ  ಬಿಜೆಪಿ ವತಿಯಿಂದ ಸ್ವತ್ಛತಾ ಆಂದೋಲನ, ಪ್ರತಿಮೆಗಳ ಸ್ವತ್ಛತೆ, ಇತ್ತೀಚೆಗೆ ಬಿದ್ದ ಮಳೆಯಿಂದ ಸಂತ್ರಸ್ತರಾದ ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ ಸೇರಿದಂತೆ ವಿವಿಧ ಸೇವಾ ಕಾರ್ಯಗಳು ನಡೆದವು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಅನಂತಕುಮಾರ್‌ ಸೇರಿದಂತೆ ಪಕ್ಷದ ಶಾಸಕರು, ವಿವಿಧ ಮೋರ್ಚಾ ಪದಾಧಿಕಾರಿಗಳು, ಮುಖಂಡರು ಸೇರಿದಂತೆ ಸಾವಿರಾರು ಕಾರ್ಯಕರ್ತರು  ಪಾಲ್ಗೊಂಡಿದ್ದರು. ಆಯಾ ಜಿಲ್ಲೆಗಳಲ್ಲಿ ಪಕ್ಷದ ಅಧ್ಯಕ್ಷರು, ಪದಾಧಿಕಾರಿಗಳು ನೇತೃತ್ವ ವಹಿಸಿದ್ದರು.
ಕೋಲಾರ ಜಿಲ್ಲೆ ಶ್ರೀನಿವಾಸಪುರ, ಬಾಗೇಪಲ್ಲಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಯಲಹಂಕ,  ತಿ.ನರಸೀಪುರ, ಹೊಳೆನರಸೀಪುರಗಳಲ್ಲಿ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕೋಲಾರ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.

ತುಮಕೂರು ಜಿಲ್ಲೆ  ಕೊರಟಗೆರೆ, ಹಾಸನದ ಹೊಳೆನರಸೀಪುರ, ದೇವನಹಳ್ಳಿ, ಬಂಗಾರಪೇಟೆಗಳಲ್ಲಿನ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಬ್ರೆಡ್‌ ಮತ್ತು ಹಣ್ಣನ್ನು ವಿತರಿಸಲಾಯಿತು.

ಚಾಮರಾಜನಗರದ ಮಹದೇಶ್ವರ ಬಡಾವಣೆಯ ಮಕ್ಕಳಿಗೆ ಉಚಿತವಾಗಿ ಶಾಲಾ ಬ್ಯಾಗ್‌ಗಳನ್ನು ವಿತರಿಸಲಾಯಿತು. ತಿ.ನರಸೀಪುರ ಖಾಸಗಿ ಬಸ್‌ ನಿಲ್ದಾಣ ವೃತ್ತದಲ್ಲಿ ಮೋದಿಗೆ ಯುವಮೋರ್ಚಾದಿಂದ ಶುಭ ಕೋರುವ ಸಹಿ ಅಭಿಯಾನ ನಡೆಸಲಾಯಿತು. ರಾಮನಗರದ ಅಂಬೇಡ್ಕರ್‌ ಕಾಲೋನಿಯಲ್ಲಿ 15ಕ್ಕೂ ಹೆಚ್ಚು ಪೌರ ಕಾರ್ಮಿಕ ಕುಟುಂಬಗಳಿಗೆ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಕುಕ್ಕರ್‌ಗಳನ್ನು ವಿತರಿಸಿದರು.

ವ್ಯಾಪಾರಸ್ಥರಿಗೆ ಕೊಡೆ ವಿತರಣೆ:
ಮೋದಿ ಅವರ 67ನೇ ಜನ್ಮದಿನವನ್ನು ಕುಷ್ಟಗಿಯ ನರೇಂದ್ರ ಮೋದಿ ಅಭಿಮಾನಿ ಬಳಗದವರು ಬೀದಿ ಬದಿ ವ್ಯಾಪಾರಸ್ಥರಿಗೆ ಕೊಡೆಗಳನ್ನು ಕೊಡುಗೆಯಾಗಿ ನೀಡುವುದರ ಮೂಲಕ ಆಚರಿಸಿದರು. ಬೀದಿ ಬದಿ ವ್ಯಾಪಾರಸ್ಥರು, ಬಿಸಿಲು-ಮಳೆಯೆನ್ನದೆ ವ್ಯಾಪಾರದಲ್ಲಿ ನಿರತರಾಗಿರುತ್ತಾರೆ. ಹೀಗಾಗಿ, ಅವರಿಗೆ ಕೊಡೆಗಳನ್ನು ನೀಡುತ್ತಿರುವುದಾಗಿ ನರೇಂದ್ರ ಮೋ ದಿ ಅಭಿಮಾನಿ ಬಳಗದ ದೊಡ್ಡಪ್ಪ ಸುಂಕದ ಹೇಳಿದರು.

ನಿವೃತ್ತ ಯೋಧರಿಗೆ ಸನ್ಮಾನ
ಗಂಗಾವತಿ
: ಬಿಜೆಪಿ ಯುವ ಮುಖಂಡ ಎಚ್‌.ಆರ್‌.ಚನ್ನಕೇಶವ ಅಭಿಮಾನಿಗಳ ಸಂಘದ ಆಶ್ರಯದಲ್ಲಿ ಮೋದಿಯವರ 67ನೇ ಜನ್ಮದಿನವನ್ನು ನಿವೃತ್ತ ಸೈನಿಕರನ್ನು ಸನ್ಮಾನಿಸುವ ಮೂಲಕ ಆಚರಿಸಲಾಯಿತು ನಿವೃತ್ತ ಸೈನಿಕರಾದ ಹುಸೇನಸಾಬ, ವೆಂಕಟೇಶ, ಕಿಶನ್‌, ರವಿ, ಫಕೀರಪ್ಪ ಹಾಗೂ ಪ್ರಗತಿಪರ ರೈತ ಶೇಷರಾವ್‌ ಗೂಗಿ ಬಂಡಿಕ್ಯಾಂಪ್‌ ಇವರನ್ನು ಸನ್ಮಾನಿಸಲಾಯಿತು. ಬಳಿಕ, ಸರಕಾರಿ ಆಸ್ಪತೆಯಲ್ಲಿ ರೋಗಿಗಳಿಗೆ ಹಾಲು, ಹಣ್ಣು, ಬ್ರೇಡ್‌ ವಿತರಿಸಲಾಯಿತು.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.