ಶಾಲೆಯೊಳಗೇ ಪ್ರಿನ್ಸಿಪಾಲ್‌ ಕಗ್ಗೊಲೆ


Team Udayavani, Oct 15, 2018, 12:43 PM IST

shaleyola.jpg

ಬೆಂಗಳೂರು: ಜಮೀನು ಒತ್ತುವರಿ ವಿಚಾರವಾಗಿ ಮನೆ ಕೆಡವಿಸಿದ ಕಾರಣಕ್ಕೆ ಅಗ್ರಹಾರ ದಾಸರಹಳ್ಳಿಯಲ್ಲಿರುವ ಹಾವನೂರು ಪಬ್ಲಿಕ್‌ ಶಾಲೆ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಪ್ರಾಂಶುಪಾಲರನ್ನು ಇಬ್ಬರು ಸಹೋದರರು ಐದಾರು ಮಂದಿ ದುಷ್ಕರ್ಮಿಗಳ ಜತೆ ಸೇರಿ ಶಾಲಾ ಆವರಣದಲ್ಲೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.

ರಂಗನಾಥ್‌ (62) ಕೊಲೆಯಾದ ಪ್ರಾಂಶುಪಾಲರು. ಕೃತ್ಯವೆಸಗಿದ ಆರೋಪಿಗಳ ಪೈಕಿ ರೌಡಿಶೀಟರ್‌ ಬಬ್ಲಿ ಅಲಿಯಾಸ್‌ ಮುನಿರಾಜುವನ್ನು ಸಂಜೆ ಗುಂಡಿನ ದಾಳಿ ನಡೆಸಿ ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಸಹೋದರರಾದ ಮಹೇಶ, ಪ್ರಸಾದ್‌ ಮತ್ತು  ಶ್ರೀನಿವಾಸ್‌ ಹಾಗೂ ಇತರೆ ಆರೋಪಿಗಳ ಪತ್ತೆಗಾಗಿ ಮೂರು ತಂಡ ರಚಿಸಲಾಗಿದೆ.

ಅಗ್ರಹಾರ ದಾಸರಹಳ್ಳಿಯಲ್ಲಿರುವ ಹಾವನೂರು ಪಬ್ಲಿಕ್‌ ಶಾಲೆ ಮತ್ತು ಕಾಲೇಜಿಗೆ ಸೇರಿದ ಜಮೀನನ್ನು 30 ವರ್ಷಗಳ ಹಿಂದೆ ಗಂಗಮ್ಮ ಎಂಬುವರು ಖರೀದಿಸಿದ್ದರು. ಈ ವೇಳೆ ಗಂಗಮ್ಮ 10 ಅಡಿ ಜಾಗವನ್ನು ಒತ್ತುವರಿ ಮಾಡಿಕೊಂಡು ಮನೆ ನಿರ್ಮಾಣ ಮಾಡಿಕೊಂಡಿದ್ದಾರೆ. ಮೂರು ವರ್ಷಗಳ ಹಿಂದೆ ಗಂಗಮ್ಮ ಅನಾರೋಗ್ಯ ಕಾರಣ ಮೃತಪಟ್ಟಿದ್ದರು.

ಬಳಿಕ ಇವರ ಮಕ್ಕಳಾದ ಪ್ರಸಾದ್‌ ಮತ್ತು ಮಹೇಶ್‌ ಇದೇ ಮನೆಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದಾರೆ. ಈ ಮಧ್ಯೆ ಶಾಲಾ ಮಂಡಳಿ ಅಧ್ಯಕ್ಷ ರಂಗನಾಥ್‌, ಒಂದೂವರೆ ವರ್ಷದ ಹಿಂದೆ ಅತಿಕ್ರಮ ಪ್ರವೇಶದ ವಿರುದ್ಧ ಕೋರ್ಟ್‌ ಮೊರೆ ಹೋಗಿದ್ದರು. ಈ ಸಂಬಂಧ ಕೋರ್ಟ್‌ ಸಹೋದರರಿಗೆ ಬಾರಿ ಖುದ್ದು ಹಾಜರಾಗುವಂತೆ ಐದಾರು ಬಾರಿ ನೋಟಿಸ್‌ ಜಾರಿ ಮಾಡಿದ್ದರು. ಆದರೆ, ಆರೋಪಿಗಳು ಗೈರಾಗಿದ್ದರು.

ಈ ಹಿನ್ನೆಲೆಯಲ್ಲಿ ಕೋರ್ಟ್‌ ಸೂಚನೆ ಮೇರೆಗೆ ಅ.12ರಂದು ಅತಿಕ್ರಮ ಪ್ರವೇಶದ ಜಾಗದಲ್ಲಿ ನಿರ್ಮಿಸಿದ್ದ ಆರೋಪಿಗಳ ಮನೆಯನ್ನು ಬಿಡಿಎ ಅಧಿಕಾರಿಗಳು ಪೊಲೀಸ್‌ ಭದ್ರತೆಯಲ್ಲಿ ಕೆಡವಿದ್ದರು. ಈ ವೇಳೆ ಆರೋಪಿಗಳಾದ ಮಹೇಶ್‌ ಮತ್ತು ಪ್ರಸಾದ್‌, ಯಾವುದೇ ನೋಟಿಸ್‌ ಕೊಡದೆ ಈ ರೀತಿ ಮನೆ ಕೆಡವುತ್ತಿರುವುದು ಸರಿಯಲ್ಲ. ಹತ್ತಾರು ವರ್ಷಗಳಿಂದ ಇದೇ ಮನೆಯಲ್ಲಿ ವಾಸವಾಗಿದ್ದೇವೆ.

ನಿಮ್ಮ ದೌರ್ಜನ್ಯದಿಂದ ಮನೆಯವರು ಬೀದಿಗೆ ಬರಬೇಕಾಗಿದೆ. ಜಾಗದ ಮೊತ್ತ ನಿಗದಿ ಮಾಡಿದ್ದರೆ ನಾವೇ ಕೊಟ್ಟು ಖರೀದಿ ಮಾಡುತ್ತಿದ್ದೆವು ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ್ದ ರಂಗನಾಥ್‌, ಕೋರ್ಟ್‌ಗೆ ಹಾಜರಾಗಿ ದಾಖಲೆಗಳನ್ನು ಸಲ್ಲಿಸಿದ್ದರೆ ಯಾವುದೇ ಸಮಸ್ಯೆ ಬರುತ್ತಿರಲಿಲ್ಲ. ಕೋರ್ಟ್‌ ಸೂಚನೆ ಮೇರೆಗೆ ಮನೆ ಕೆಡವಲಾಗಿದೆ ಎಂದಷ್ಟೇ ಹೇಳಿ ಸ್ಥಳದಿಂದ ಹೋಗಿದ್ದರು ಎಂದು ಪೊಲೀಸರು ತಿಳಿಸಿದರು.

ಶಾಲೆಗೇ ಕರೆಸಿಕೊಂಡಿದ್ದರು: ಶನಿವಾರ ಕೂಡ ರಂಗನಾಥ್‌ ಜತೆ ಚರ್ಚಿಸಿದ್ದ ಆರೋಪಿಗಳು ಈಗಲೂ ನೀವು ಮನಸ್ಸು ಮಾಡಿ, ಕೆಡವಿರುವ ಮನೆ ಮತ್ತು ಕಾಂಪೌಂಡನ್ನು ನಾವೇ ಕಟ್ಟಿಕೊಳ್ಳುತ್ತೇವೆ ಎಂದು ಮನವಿ ಮಾಡಿದ್ದರು. ಆದರೆ, ಇದಕ್ಕೆ ಶಾಲಾ ಆಡಳಿತ ಮಂಡಳಿ ನಿರಾಕರಿಸಿತ್ತು. ಭಾನುವಾರ ಶಾಲೆ ರಜೆಯಿದ್ದರಿಂದ ರಂಗನಾಥ್‌ ಅವರೇ ಬೆಳಗ್ಗೆ 10 ಗಂಟೆ ಸುಮಾರಿಗೆ ಶಾಲಾ ಕಚೇರಿಗೆ ಬರುವಂತೆ ಆರೋಪಿಗಳಿಳನ್ನು ಕರೆದಿದ್ದರು.

ಈ ಸಂಬಂಧ ಬೆಳಗ್ಗೆ 10.30ಕ್ಕೆ ಶಾಲಾ ಕಚೇರಿಗೆ ಆಗಮಿಸಿದ ಆರೋಪಿತ ಸಹೋದರರು, ಬರುವಾಗಲೇ ಸಹಚರರನ್ನು ಕರೆತಂದಿದ್ದರು. ಅಲ್ಲದೆ ಎಲ್ಲರೂ ಡ್ರ್ಯಾಗರ್‌, ಚಾಕು ತಂದಿದ್ದರು. ಈ ವೇಳೆ ರಂಗನಾಥ್‌ 10 ಅಡಿ ಜಾಗ ಬೇಕೆಂದರೆ 1 ಕೋಟಿ ರೂ. ಕೊಡುವಂತೆ ಕೇಳಿದ್ದರು ಎಂದು ಹೇಳಲಾಗಿದೆ. ಇದಕ್ಕೆ ನಿರಾಕರಿಸಿದ ಆರೋಪಿಗಳು, 35 ಲಕ್ಷ ರೂ. ಕೊಡುವುದಾಗಿ ಹೇಳಿದ್ದರು.

ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಒಂದು ಹಂತದಲ್ಲಿ ಆಕ್ರೋಶಗೊಂಡ ಆರೋಪಿಗಳು, ಮಾರಕಾಸ್ತ್ರಗಳಿಂದ ರಂಗನಾಥ್‌ ಅವರ ಎದೆ, ಕುತ್ತಿಗೆ ಮತ್ತು ಹೊಟ್ಟೆಗೆ ಇರಿದಿದ್ದಾರೆ. ತೀವ್ರ ರಕ್ತಸ್ರಾವದಿಂದ ಕುಳಿತ ಕುರ್ಚಿಯಲ್ಲೇ ರಂಗನಾಥ್‌ ಪ್ರಾಣ ಬಿಟ್ಟಿದ್ದಾರೆ. ಘಟನೆ ವೇಳೆ ರಂಗನಾಥ್‌ ಜತೆಗಿದ್ದ ಶಾಲೆಯ ಇಬ್ಬರು ಸಿಬ್ಬಂದಿ ರಕ್ಷಣೆಗೆ ಕೂಗಿಕೊಳ್ಳುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರು ಹೇಳಿದರು.

ಆರ್‌ಬಿಐ ನಿವೃತ್ತ ನೌಕರ: ಹತ್ಯೆಯಾದ ರಂಗನಾಥ್‌ ಭಾರತೀಯ ರಿಸರ್ವ್‌ ಬ್ಯಾಂಕ್‌ನಲ್ಲಿ ಸಹಾಯಕ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸಿದ್ದು, ಕೆಲ ವರ್ಷಗಳ ಹಿಂದಷ್ಟೇ ನಿವೃತ್ತಿ ಹೊಂದಿದ್ದರು. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ರಂಗನಾಥ್‌ 2003ರಲ್ಲಿ ಅಗ್ರಹಾರ ದಾಸರಹಳ್ಳಿಯಲ್ಲಿರುವ ಹಾವನೂರು ಪಬ್ಲಿಕ್‌ ಶಾಲೆಯನ್ನು ಖರೀದಿಸಿದ್ದರು. ಅಂದಿನಿಂದ ಶಾಲೆಯ ಪ್ರಾಂಶುಪಾಲರಾಗಿ, ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದರು.

ರೌಡಿಶೀಟರ್‌ಗೆ ಗುಂಡೇಟು: ಘಟನೆ ನಂತರ ವಿಜಯನಗರ ಎಸಿಪಿ ಪರಮೇಶ್ವರ್‌ ಹೆಗಡೆ ಅವರು ಆರೋಪಿಗಳ ಪತ್ತೆಗಾಗಿ, ಮಾಗಡಿ ರಸ್ತೆ ಮತ್ತು ಕೆ.ಪಿ.ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್‌ಗಳ ನೇತೃತ್ವದಲ್ಲಿ ತಂಡ ರಚಿಸಿದ್ದರು. ಈ ಹಿನ್ನೆಲೆಯಲ್ಲಿ ಕ್ಷೀಪ್ರ ಕಾರ್ಯಾಚರಣೆ ನಡೆಸಿದ ಮಾಗಡಿ ರಸ್ತೆ ಠಾಣಾಧಿಕಾರಿ ಹೇಮಂತ್‌ ಕುಮಾರ್‌, ಘಟನೆ ನಡೆದ ಕೆಲ ಗಂಟೆಗಳಲ್ಲೇ ಪ್ರಕರಣದ ಆರೋಪಿಗಳ ಪೈಕಿ ರೌಡಿಶೀಟರ್‌ ಬಬ್ಲಿ ಅಲಿಯಾಸ್‌ ಮುನಿರಾಜು (26) ಎಂಬಾತನನ್ನು, ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಪ್ರಮುಖ ಆರೋಪಿಗಳಾದ ಪ್ರಸಾದ್‌, ಮಹೇಶ್‌, ಶ್ರೀನಿವಾಸ್‌ ಸೇರಿ ಕೆಲ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳ ಪೈಕಿ ಮುನಿರಾಜು ಮಹಾಲಕ್ಷ್ಮೀ ಲೇಔಟ್‌ ಠಾಣೆ ವ್ಯಾಪ್ತಿಯ ಕಿರ್ಲೋಸ್ಕರ್‌ ಪೌಲಿó ರಸ್ತೆಯಲ್ಲಿ ಇರುವ ಬಗ್ಗೆ ಮಧ್ಯಾಹ್ನ 3.30ರ ಸುಮಾರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಆರೋಪಿಯನ್ನು ಬಂಧಿಸಲು ತಂಡ ತೆರಳಿತ್ತು.

ಈ ವೇಳೆ ಆರೋಪಿ ಮಾರಕಾಸ್ತ್ರದಿಂದ ಕಾನ್ಸ್‌ಟೆಬಲ್‌ಗ‌ಳಾದ ನವೀನ್‌ ಮತ್ತು ಶ್ರೀನಿವಾಸ್‌ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಕೂಡಲೇ ಎಚ್ಚೆತ್ತ ಇನ್ಸ್‌ಪೆಕ್ಟರ್‌ ಹೇಮಂತ್‌, ಕುಮಾರ್‌ ಮೂರು ಸುತ್ತು ಗುಂಡು ಹಾರಿಸಿದ್ದು, ಆರೋಪಿ ಕಾಲಿಗೆ ಗುಂಡು ತಗುಲಿದೆ. ಆರೋಪಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈತನ ವಿರುದ್ಧ ಮಾಗಡಿ ರಸ್ತೆ ಠಾಣೆಯಲ್ಲಿ ರೌಡಿಪಟ್ಟಿ ತೆರೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.