ಹಣ ಬಿಡಿಸಿಕೊಂಡು ಬರುವುದಾಗಿ ಎಸ್ಕೇಪ್‌ ಆಗಿದ್ದ ಕೈದಿ!


Team Udayavani, Sep 20, 2019, 9:36 AM IST

Udayavani Kannada Newspaper

ಬೆಂಗಳೂರು: ಅನಾರೋಗ್ಯ ಕಾರಣದಿಂದ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದ ಅತ್ಯಾಚಾರ ಪ್ರಕರಣದ ಕೈದಿ ತಪ್ಪಿಸಿಕೊಂಡ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಆತ ಜಯದೇವ ಆಸ್ಪತ್ರೆ ಬಳಿಯಿಂದ ತಪ್ಪಿಸಿಕೊಂಡಿದ್ದ ಎಂದು ಹೇಳಿದ್ದ ಪೊಲೀಸರು ಈಗ ಎಂ.ಎಸ್‌. ಬಿಲ್ಡಿಂಗ್‌ ಬಳಿಯಿಂದ ತಪ್ಪಿಸಿಕೊಂಡಿರುವುದಾಗಿ ವರದಿ ನೀಡಿದ್ದಾರೆ. ಸೆ.4ರಂದು ತಪ್ಪಿಸಿಕೊಂಡಿರುವ ಕೈದಿ ಬಸವರಾಜ ಕಳಕಯ್ಯ ಕರಡಗಿ ಮಠ, ಬೆಂಗಾವಲಿಗೆ ಇದ್ದ ಪೊಲೀಸರಿಗೆ ಕಟ್ಟು ಕತೆ ಹೇಳಿ ಎಂ.ಎಸ್‌ ಬಿಲ್ಡಿಂಗ್‌ನಿಂದ ಪರಾರಿಯಾಗಿದ್ದಾನೆ ಎಂಬುದು ಪೊಲೀಸರ ತನಿಖೆಯಿಂದ ಪತ್ತೆಯಾಗಿದೆ.

ಹೃದಯ ಶಸ್ತ್ರಚಿಕಿತ್ಸೆಗೆ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದ ಕೈದಿ ಬಸವರಾಜನನ್ನು ಸೆ.4ರಂದು ಡಿಸಾcರ್ಜ್‌ ಮಾಡಲಾಗಿತ್ತು. ಬಳಿಕ ಜೈಲಿಗೆ ಕರೆದೊಯ್ಯುವಾಗ ತಮ್ಮನ್ನು ತಳ್ಳಿ ಪರಾರಿಯಾಗಿದ್ದ ಎಂದು ಬೆಂಗಾವಲು ಕರ್ತವ್ಯದಲ್ಲಿದ್ದ ಸಶಸ್ತ್ರ ಮೀಸಲು ಪಡೆ ಎಎಸ್‌ಐ ಶಿವಮೂರ್ತಿ, ತಿಲಕ್‌ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿ ದ್ದರು. ಆದರೆ, ಕೈದಿ ಪರಾರಿಯಾಗಿದ್ದು ಜಯದೇವ ಆಸ್ಪತ್ರೆಯಿಂದ ಅಲ್ಲ, ಎಂ. ಎಸ್‌.ಬಿಲ್ಡಿಂಗ್‌ನಿಂದ ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ. ಆಸ್ಪತ್ರೆಯಿಂದ ಡಿಸಾcರ್ಜ್‌ ಆದ ಕೈದಿ ಬಸವರಾಜ, ನನಗೆ ಔಷಧ ಮತ್ತಿತರ ಖರ್ಚಿಗೆ ಹಣ ಬೇಕು ಹೀಗಾಗಿ ಎಂ.ಎಸ್‌.ಬಿಲ್ಡಿಂಗ್‌ನಲ್ಲಿರುವ ಬ್ಯಾಂಕ್‌ಗೆ ತೆರಳಿ ಹಣ

ಬಿಡಿಸಿಕೊಳ್ಳುತ್ತೇನೆ ಎಂದು ಬೆಂಗಾವಲು ಕರ್ತವ್ಯಕ್ಕಿದ್ದ ಎಎಸ್‌ಐ ಶಿವಮೂರ್ತಿ ಹಾಗೂ ಪೇದೆಯನ್ನು ನಂಬಿಸಿದ್ದ. ಆತನ ಮಾತು ನಂಬಿದ ಎಎಸ್‌ಐ ಹಾಗೂ ಪೇದೆ, ಆತನನ್ನು ಎಂ.ಎಸ್‌ ಬಿಲ್ಡಿಂಗ್‌ ಬಳಿ ಕರೆತಂದಿದ್ದಾರೆ. ಈ ವೇಳೆ ಕೈಯಲ್ಲಿದ್ದ ಕೊಳ ತೆಗೆಸಿಕೊಳ್ಳಲು ಮತ್ತೂಂದು ನಾಟಕ ಶುರು ಮಾಡಿದ ಬಸವರಾಜ, ಕೈಯಲ್ಲಿ ಕೋಳವಿದ್ದರೆ ಬ್ಯಾಂಕ್‌ ಒಳಗೆ ಬಿಡುವುದಿಲ್ಲ. ಕೋಳ ತೆಗೆಯಿರಿ ಎಂದು ಹೇಳಿ ಕೇಳಿಕೊಂಡಿದ್ದಾನೆ. ಕೋಳ ತೆಗೆಯುತ್ತಿದ್ದಂತೆ ಬ್ಯಾಂಕ್‌ಗೆ ಹೋದಂತೆ ನಟಿಸಿ, ಕೆಲವೇ ಕ್ಷಣಗಳಲ್ಲಿ ಪರಾರಿಯಾಗಿದ್ದ ಎಂದು ಹಿರಿಯ ಅಧಿಕಾರಿ ವಿವರಿಸಿದರು.

ಘಟನೆ ಎಂ.ಎಸ್‌.ಬಿಲ್ಡಿಂಗ್‌ನಲ್ಲಿ ನಡೆದಿರುವುದರಿಂದ ಅ ಪ್ರದೇಶ ವ್ಯಾಪ್ತಿಗೆ ಸೇರುವ ವಿಧಾನಸೌಧ ಠಾಣೆ ಪೊಲೀಸರಿಗೆ ಪ್ರಕರಣ ವರ್ಗಾಯಿಸಲಾಗಿದೆ. 2018ರಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಬಸವರಾಜ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಎಂದು ಅಧಿಕಾರಿ ಹೇಳಿದರು.

 

● ಮಂಜುನಾಥ ಲಘುಮೇನಹಳ್ಳಿ

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.