ಪ್ರಿಯಾಂಕ್ ಖರ್ಗೆ ಅಸಂಬದ್ಧ ಹೇಳಿಕೆ ನೀಡುತ್ತಿದ್ದಾರೆ: ವೀರಯ್ಯ
Team Udayavani, Jun 29, 2019, 3:05 AM IST
ಬೆಂಗಳೂರು: “ರಾಜ್ಯದ ಎಲ್ಲ 7 ಮೀಸಲು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದ್ದು, ದಲಿತ ಸಮುದಾಯ ಬಿಜೆಪಿ ಬೆಂಬಲಿಸುತ್ತಿರುವುದು ಸ್ಪಷ್ಟವಾಗುತ್ತಿದ್ದಂತೆ ರಾಜಕೀಯ ಅಭದ್ರತೆಗೆ ಒಳಗಾಗಿರುವ ಸಚಿವ ಪ್ರಿಯಾಂಕ್ ಖರ್ಗೆ ಅಸಂಬದ್ಧ ಹೇಳಿಕೆ ನೀಡುತ್ತಿದ್ದಾರೆ’ ಎಂದು ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಡಿ.ಎಸ್.ವೀರಯ್ಯ ದೂರಿದರು.
ಬಿ.ಎಸ್.ಯಡಿಯೂರಪ್ಪ ಅವರು ದಲಿತರಲ್ಲಿ ಆತ್ಮವಿಶ್ವಾಸ ಮೂಡಿಸುವ ಪ್ರಾಮಾಣಿಕ ಕಳಕಳಿಯಿಂದ ದಲಿತರ ಮನೆಗಳಿಗೆ ಭೇಟಿ ನೀಡಿ ಉಪಾಹಾರ, ಭೋಜನ ಸೇವಿಸಿದ್ದಾರೆ. ಆದರೆ ಒಮ್ಮೆಯೂ ದಲಿತರ ಕೇರಿಗೆ ಹೋಗದ, ದಲಿತರ ಮನೆಯ ಊಟವನ್ನೇ ಸೇವಿಸದ ಪ್ರಿಯಾಂಕ್ ಖರ್ಗೆಯವರು ಯಡಿಯೂರಪ್ಪ ಅವರನ್ನು ಟೀಕಿಸುವ ಮೂಲಕ ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಡಿಯೂರಪ್ಪ ಅವರು ದಲಿತರ ಮನೆಗಳಿಗೆ ಭೇಟಿ ನೀಡಿದಾಗ ಹೋಟೆಲ್ನಿಂದ ಉಪಾಹಾರ, ಊಟ ತರಿಸಿ ಸೇವಿಸುತ್ತಿದ್ದರು ಎಂಬುದಾಗಿ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿರುವುದು ಅತ್ಯಂತ ಬಾಲಿಶ. ಯಡಿಯೂರಪ್ಪ ಅವರು ದಲಿತರ ಮನೆಗಳಿಗೆ ಭೇಟಿ ನೀಡಿದಾಗ ನಾನೂ ಅವರೊಂದಿಗಿದ್ದೆ. ದಲಿತರ ಕುಟುಂಬದಲ್ಲಿ ಸಿದ್ಧಪಡಿಸಿದ ಊಟವನ್ನೇ ಸೇವಿಸಿದ್ದಾರೆಯೇ ಹೊರತು ಹೋಟೆಲ್ನಿಂದ ತರಿಸಿದ ಆಹಾರ ಸೇವಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಿಯಾಂಕ್ ಖರ್ಗೆಯವರು ಯಡಿಯೂರಪ್ಪ ಅವರ ದಲಿತ ಪರ ಕಾಳಜಿಯನ್ನು ಗುರುತಿಸಿ ಅವರ ಹಿರಿತನಕ್ಕೆ ಗೌರವ ನೀಡುವುದನ್ನು ಕಲಿಯಬೇಕು. ಬಾಲಿಶ ಹೇಳಿಕೆ ನೀಡುವ ಮೂಲಕ ದಲಿತರನ್ನು ದಾರಿ ತಪ್ಪಿಸಬಾರದು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ