ಪ್ರಿಯಾ ಸಾವು: ಮೂವರ ವಿರುದ್ಧ ಕೇಸ್‌


Team Udayavani, Aug 14, 2017, 12:04 PM IST

priya-death.jpg

ಕೆ.ಆರ್‌.ಪುರ: ಕೆ.ಆರ್‌.ಪುರದ ಆಕಾಶ್‌ ನಗರದ ಎಂಇಜಿ ಬಡಾವಣೆಯ ಬಿಬಿಎಂಪಿ ಪಾರ್ಕ್‌ನಲ್ಲಿ ಕಬ್ಬಿಣದ ಸಲಾಕೆ ಬಿದ್ದು ಪ್ರಿಯಾ ಎಂಬ ಬಾಲಕಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಹದೇವಪುರ ಪೊಲೀಸ್‌ ಠಾಣೆಯಲ್ಲಿ ಸ್ಥಳೀಯ ಇಂಜಿನಿಯರ್‌, ಪಾರ್ಕ್‌ ಉಸ್ತುವಾರಿ ಮತ್ತು ಸೆಕ್ಯುರಿಟಿ ಗಾರ್ಡ್‌ ವಿರುದ್ಧ ನಿರ್ಲಕ್ಷ್ಯ ಪ್ರಕರಣ ದಾಖಲಾಗಿದೆ.

ಅವಘಡ ಸಂಭವಿಸಿದ್ದ ಪಾರ್ಕ್‌ಗೆ ಭಾನುವಾರ ಭೇಟಿ ನೀಡಿದ್ದ ಬಿಬಿಎಂಪಿಯ ಮಹದೇವಪುರ ವಲಯ ಜಂಟಿ ಆಯುಕ್ತೆ ವಾಸಂತಿ ಅಮರ್‌, ಪಾಲಿಕೆ ಸದಸ್ಯ ಎಸ್‌.ಜಿ.ನಾಗರಾಜ್‌, ಹೆಚ್ಚುವರಿ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಸ್ಥಳ ಪರಿಶೀಲನೆ ನಡೆಸಿದರು. ಇದೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ಚುವರಿ ಪೊಲೀಸ್‌ ಆಯುಕ್ತ ಸೀಮಾಂತ್‌ಕುಮಾರ್‌ ಸಿಂಗ್‌, “ಘಟನೆಯ ಸಂಬಂಧ ಮಹದೇವಪುರ ಪೊಲೀಸ್‌ ಠಾಣೆಯಲ್ಲಿ ಮೂವರ ವಿರುದ್ಧ ನಿರ್ಲಕ್ಷ್ಯ ಪ್ರಕರಣ ದಾಖಲಾಗಿದೆ. ನಿರ್ಲಕ್ಷ್ಯ ದೃಢಪಟ್ಟಲ್ಲಿ ಕ್ರಮ ಕೈಗೊಳ್ಳಲಾಗುವುದು,’ ಎಂದರು. 

ಮಹದೇವಪುರದ ಕೃಷ್ಣಪ್ಪ ಲೇಔಟ್‌ನಲ್ಲಿನಲ್ಲಿರುವ ಪ್ರಿಯಾಳ ಮನೆಯ ಬಳಿ ಮೃತ ದೇಹವನ್ನು ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿತ್ತು. ಅಂತಿಮ ದರ್ಶನಕ್ಕೆ ಆಗಮಿಸಿದ್ದ ಶಾಸಕ ಬಸವರಾಜ್‌ ಪೋಷಕರಿಗೆ ಸಾಂತ್ವಾನ ಹೇಳಿದರು. “ಪ್ರಿಯಾ ಭದ್ರತಾ ಸಿಬ್ಬಂದಿಯೊಂದಿಗೆ ಜಗಳವಾಡಿ ಪಾರ್ಕ್‌ನಲ್ಲಿ ಆಡಲು ಹೋಗಿದ್ದಳು. ಈ ವೇಳೆ ದುರ್ಘ‌ಟನೆ ಸಂಭವಿಸಿದೆ ಎಂದು ಪಾಲಿಕೆ ಆಯುಕ್ತ ಮಂಜುನಾಥ್‌ ಪ್ರಸಾದ್‌ ಅವರು ನೀಡಿದ ಹೇಳಿಕೆಯನ್ನು ಖಂಡಿಸಿದ ಪೋಷಕರು ಶಾಸಕರ ಬಳಿ ಅಸಮಾಧಾನ ವ್ಯಕ್ತಪಡಿಸಿದರು. 

ಎಂಇಜಿ ಬಡಾವಣೆಯಲ್ಲಿ ಪಾಲಿಕೆಯ ಉದ್ಯಾನವನ ನವೀಕರಣಗೊಳ್ಳುತ್ತಿದ್ದು ಸಾರ್ವಜನಿಕರಿಗೆ ಇನ್ನೂ ಸಮರ್ಪಣೆಯಾಗಿಲ್ಲ. ಈ ನಡುವೆ ಅವಘಡ ಸಂಭವಿಸಿದೆ. ಕಾಮಗಾರಿ ನಡೆಸುವ ವೇಳೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಘಟನೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದಲ್ಲಿ ಕ್ರಮಕ್ಕೆ ಸೂಚಿಸಲಾಗುವುದು ಎಂದು ಶಾಸಕರು ಪೋಷಕರಿಗೆ ತಿಳಿಸಿದರು. 

ಹೋಗಬಾರದು ಎಂದಿದ್ದರೆ ಹೋಗುತ್ತಿರಲಿಲ್ಲ 
“ನಾನು, ಪ್ರಿಯಾ ಮತ್ತು ನಯನಾ ಪಾರ್ಕ್‌ನಲ್ಲಿ ಆಡಲು ತೆರಳಿದ್ದಾಗ ಪಾರ್ಕ್‌ನ ಗೇಟ್‌ ತೆರದಿತ್ತು. ಮಕ್ಕಳ ಪಾರ್ಕ್‌ನಲ್ಲಿ ಕೆಲಸ ನಡೆಯುತ್ತಿತ್ತು. ಅದಕ್ಕೆ ಸೆಕ್ಯೂರಿಟಿ ಗಾರ್ಡ್‌ ಆಗಲೀ ಫ‌ಲಕವಾಗಲಿ ಇರಲಿಲ್ಲ. ಹೋಗಬಾರದು ಎಂಬ ಬೋರ್ಡ್‌ ಇದ್ದಿದ್ದರೆ ನಾವು ಆಟವಾಡಲು ಹೋಗುತ್ತಿರಲಿಲ್ಲ. ಮಕ್ಕಳೆಲ್ಲ ಆಟವಾಡುತ್ತಿದ್ದರಿಂದ ನಾವು ಕೂಡ ಹೋಗಿದ್ದೆವು. ನಾವು ಯಾರೊದಿಂಗೂ ಜಗಳ ಮಾಡಲಿಲ್ಲ,’ ಎಂದು ಪ್ರಿಯಾಳ ಗೆಳತಿ ಸುಭೀಕ್ಷಾ ಹೇಳಿದ್ದಾಳೆ. 

ರಕ್ತದ ಮಡುವಿನಲ್ಲಿದ್ದಳ ಪ್ರಿಯಾಳ ವಿಡಿಯೋ ತೆಗೆದಯುತ್ತಿದ್ದರು
ತಲೆಗೆ ಪೆಟ್ಟು ಬಿದ್ದು ರಕ್ತದ ಮಡುವಲ್ಲಿದ್ದ ಬಾಲಕಿಯನ್ನು ಸ್ಥಳೀಯರು ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದರು. ಆಕೆಯನ್ನು ಆಸ್ಪತ್ರೆಗೆ ಸೇರಿಸದೇ ಕಾಲಹರಣ ಮಾಡಿದ್ದಾರೆ. ಇದು ತೀರ ವಿಷಾದನೀಯ ಸಂಗತಿ. ಕೂಡಲೆ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರೆ ಪ್ರಾಣ ಉಳಿಸಬಹುದಿತ್ತು. ಅವಘಡಗಳು ಸಂಭವಿಸಿದ ವೇಳೆ ಸಾರ್ವಜನಿಕರು ಪೂರ್ವ ಪೀಡಿತ ಭಯಬಿಟ್ಟು ಮಾನವೀಯತೆ ಮೆರೆದರೆ ಜೀವಗಳನ್ನು ಉಳಿಸಬಹುದು ಎಂದು ಹೆಚ್ಚುವರಿ ಪೊಲೀಸ್‌ ಆಯುಕ್ತ ಸೀಮಾಂತ್‌ಕುಮಾರ್‌ ಸಿಂಗ್‌ ಹೇಳಿದ್ದಾರೆ. 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.