ರಾಜ್ಯದಲ್ಲಿ 1,443 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳು ಖಾಲಿ: ಸಿಎಂ
Team Udayavani, Mar 24, 2017, 3:45 AM IST
ವಿಧಾನಪರಿಷತ್ತು: ರಾಜ್ಯದಲ್ಲಿ ಗೆಜೆಟೆಡ್ ಪ್ರೊಬೇಷನರ್ನ 636 ಎ ಮತ್ತು 807 ಬಿ ಗ್ರೂಪ್ ಸೇರಿ ಒಟ್ಟು 1,443 ಹುದ್ದೆಗಳು ಖಾಲಿ ಇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿಯ ಕೋಟಾ ಶ್ರೀನಿವಾಸ ಪೂಜಾರಿ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಯವರು, ಖಾಲಿ ಇರುವ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಭರ್ತಿಗೆ ಕಾಲಕಾಲಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. 2011ನೇ ಸಾಲಿನ ಹುದ್ದೆಗಳ ಪೊಲೀಸ್ ಹಾಗೂ ವೈದ್ಯಕೀಯ ಪರಿಶೀಲನೆ ನಡೆಯುತ್ತಿದೆ. 2014ನೇ ಸಾಲಿನ 464 ಹುದ್ದೆಗಳ ನೇಮಕಾತಿಗೆ ಸಂದರ್ಶನ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದರು.
ಖಾಲಿ ಇರುವ ಗೆಜೆಟೆಡ್ ಪ್ರೊಬೇಷನರ್ ಎ ಮತ್ತು ಬಿ ಗ್ರೂಪ್ನ ಒಟ್ಟು ಹುದ್ದೆಗಳ ಪೈಕಿ ಅತಿ ಹೆಚ್ಚು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಕೆಎಎಸ್ (ಹಿರಿಯ ಶ್ರೇಣಿ) 289, ವಾಣಿಜ್ಯ ತೆರಿಗೆ ಇಲಾಖೆಯ ವಾಣಿಜ್ಯ ತೆರಿಗೆ ಅಧಿಕಾರಿಗಳ 208 ಹಾಗೂ ಸಹಾಯಕ ಆಯುಕ್ತರ 157, ಕಂದಾಯ ಇಲಾಖೆಯ ತಹಶೀಲ್ದಾರ್ ಗ್ರೇಡ್-2ನ 153, ನಗರಾಭಿವೃದ್ಧಿ ಇಲಾಖೆಯ ಮುಖ್ಯಾಧಿಕಾರಿಗಳ 138 ಹುದ್ದೆಗಳು ಖಾಲಿ ಇವೆ.
ಗೆಜೆಟೆಡ್ ಹುದ್ದೆಗಳ ನೇಮಕಾತಿಯನ್ನು ಕರ್ನಾಟಕ ಲೋಕಸೇವಾ ಆಯೋಗದಿಂದ ಕಾಲಮಿತಿಯೊಳಗೆ ನಡೆಸಲು ಹಾಗೂ ಪರೀಕ್ಷಾ ಮತ್ತು ಸಂದರ್ಶನ ಪ್ರಕ್ರಿಯೆಯಲ್ಲಿ ಸಮಗ್ರ ಸುಧಾರಣೆ ತರಲು ಪಿ.ಸಿ. ಹೋಟಾ ಸಮಿತಿ ರಚಿಸಲಾಗಿತ್ತು. ಸಮಿತಿಯ ಶೇ.90ರಷ್ಟು ಶಿಫಾರಸುಗಳನ್ನು ಜಾರಿಗೆ ತರಲಾಗಿದ್ದು, ಕೆಲವೊಂದು ಶಿಫಾರಸುಗಳಿಗೆ ಬದಲಾವಣೆ ಮಾಡಲಾಗಿದೆ ಎಂದು ಹೇಳಿದರು.
ಪರಿಶೀಲನೆ
ಗೆಜೆಟೆಡ್ ಪ್ರಬೋಷನರ್ ಹುದ್ದೆಗಳ ಭರ್ತಿ ವೇಳೆ ಕೇಂದ್ರ ಲೋಕಸೇವಾ ಆಯೋಗ ಎಸ್ಸಿ, ಎಸ್ಟಿ ಹಾಗೂ ಅಂಗವಿಕಲ ಆಭ್ಯರ್ಥಿಗಳಿಗೆ ಪೂರ್ಣ ಪ್ರಮಾಣದ ಅರ್ಜಿ ಶುಲ್ಕ ವಿನಾಯ್ತಿ ನೀಡಲು ಯೋಚಿಸಿದೆ. ಅದರಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸು ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸುವ ಎಸ್ಸಿ, ಎಸ್ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಪೂರ್ಣ ಅರ್ಜಿ ಶುಲ್ಕ ವಿನಾಯ್ತಿ ನೀಡಬೇಕು ಎಂಬ ಕೋಟಾ ಶ್ರೀನಿವಾಸ ಪೂಜಾರಿ ಪ್ರಸ್ತಾವನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು