ಬೆಂಗಳೂರಿನ ಕಸ.. ರಾಮನಗರಕ್ಕೆ ಪರಿಹಾರ?

ಮಾಗಡಿ, ದೇವನಹಳ್ಳಿ, ನೆಲಮಂಗಲಕ್ಕೂ ಅನುದಾನ , ನಗರದ ತ್ಯಾಜ್ಯದಿಂದ ಹಳ್ಳಿಗಳಿಗೆ ಸಮಸ್ಯೆ ಆಗಿದೆಯೇ?

Team Udayavani, Oct 6, 2020, 11:55 AM IST

BNG-TDY-3

ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಂಗಳೂರಿನಲ್ಲಿ ಉತ್ಪತ್ತಿಯಾಗುತ್ತಿರುವ ತ್ಯಾಜ್ಯಕ್ಕೂ ದೂರದ ರಾಮನಗರಕ್ಕೂ ಸಂಬಂಧ ಇದೆಯಾ? ಇಲ್ಲಿನ ಕಸದಿಂದ ಅಲ್ಲಿನ ಗ್ರಾಮಗಳು ಬಾಧಿತವಾಗುತ್ತಿವೆಯೇ?

– “ಹೌದು’ ಸಂಬಂಧ ಇದೆ ಹಾಗೂ ನಗರ ತ್ಯಾಜ್ಯದಿಂದ ರಾಮನಗರ ಮಾತ್ರವಲ್ಲ; ಮಾಗಡಿ, ದೇವನಹಳ್ಳಿ, ನೆಲಮಂಗಲ ಸೇರಿದಂತೆ ಜೆಡಿಎಸ್‌ಶಾಸಕರು ಪ್ರತಿನಿಧಿಸುವ ಈ ವಿಧಾನಸಭಾ ಕ್ಷೇತ್ರಗಳ ಗ್ರಾಮಗಳೂ ಬಾಧಿತವಾಗುತ್ತಿದೆ ಎನ್ನುತ್ತದೆ ಸರ್ಕಾರದ ಆದೇಶ!

ಅಚ್ಚರಿ, ಆದರೂ ಸತ್ಯ. ಬೆಂಗಳೂರಿನ ಘನತ್ಯಾಜ್ಯ ವಿಲೇವಾರಿಯಿಂದಾಗಿ ರಾಮನಗರ, ಮಾಗಡಿ, ದೇವನಹಳ್ಳಿ ಮತ್ತು ನೆಲಮಂಗಲ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿನ ಕೆಲವು ಗ್ರಾಮಗಳು ಬಾಧಿತಗೊಂಡಿವೆ. ಅವುಗಳ ಅಭಿವೃದ್ಧಿ ನೆಪದಲ್ಲಿ ಸರ್ಕಾರವು 2018-19, 2019-20 ಹಾಗೂ 2020-21ನೇ ಸಾಲಿನ “ನವ ಬೆಂಗಳೂರು ಯೋಜನೆ’ ಅಡಿ ಈಚೆಗೆ ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ.

ಈ ಮೊದಲು ಉದ್ದೇಶಿತ ಕ್ಷೇತ್ರಗಳಿಗೆ ಬಿಡುಗಡೆಯಾಗಿದ್ದ ಅನುದಾನವನ್ನು ತಡೆಹಿಡಿಯಲಾಗಿತ್ತು. ಆದರೆ, ಈಚೆಗೆ ತಡೆಯನ್ನು ತೆರವುಗೊಳಿಸಿ ಕ್ರಿಯಾಯೋಜನೆಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. 50 ಕೋಟಿ ರೂ.ಗಳಲ್ಲಿ ರಾಮನಗರಕ್ಕೆ 20 ಕೋಟಿ ಹಾಗೂ ಉಳಿದ ಮೂರೂ ವಿಧಾನಸಭಾ ಕ್ಷೇತ್ರಗಳಿಗೆ ತಲಾ ಹತ್ತು ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು ಸಹಮತಿಸಿದೆ. ಘನತ್ಯಾಜ್ಯ ವಿಲೇವಾರಿಗೆ ಸಂಬಂಧವೇ ಇಲ್ಲದ ಕ್ಷೇತ್ರಗಳಿಗೆ ನವ ಬೆಂಗಳೂರು ಯೋಜನೆ ಅಡಿ ಅನುದಾನ ನೀಡಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

ವಾಸ್ತವವಾಗಿ ಇರುವ ಘಟಕಗಳು: “ಸಾಮಾನ್ಯವಾಗಿ ನಗರದ ಘನತ್ಯಾಜ್ಯ ಯಶವಂತಪುರ ವಿಧಾನಸಭಾ ಕ್ಷೇತ್ರದ ಸುಬ್ಬರಾಯನಪಾಳ್ಯ, ಲಿಂಗಧೀರನಹಳ್ಳಿ, ದೊಡ್ಡಬಿದರಕಲ್ಲು, ಸೀಗೇಹಳ್ಳಿ, ಮಹದೇವಪುರದ ಮಿಟ್ಟಿಗಾನಹಳ್ಳಿ, ಮಂಡೂರು, ಬೊಮ್ಮನಹಳ್ಳಿಯ ಕೆಸಿಡಿಸಿ, ಬೆಂಗಳೂರು ದಕ್ಷಿಣದ ಚಿಕ್ಕನಾಗಮಂಗಲ, ಬ್ಯಾಟರಾಯನಪುರದ ಬೆಳ್ಳಳ್ಳಿ ಘಟಕಗಳಿಗೆ ವಿಲೇವಾರಿ ಆಗುತ್ತದೆ. ಹೆಚ್ಚೆಂದರೆ ಸುತ್ತಲಿನ ನಾಲ್ಕಾರು ಕಿ.ಮೀ. ವ್ಯಾಪ್ತಿಯಲ್ಲಿ ದುರ್ವಾಸನೆ ಬರಬಹುದು. ಈ ಘಟಕಗಳ ಆಸುಪಾಸು ಬಾಧಿತಗೊಂಡ ಗ್ರಾಮಗಳ ಅಭಿವೃದ್ಧಿ ಕಾಮಗಾರಿಗಳಿಗೆ “ನವ ನಗರೋತ್ಥಾನ’ ಅಡಿ 517.24 ಕೋಟಿ ಹಾಗೂ “ಶುಭ್ರ ಬೆಂಗಳೂರು ಯೋಜನೆ’ ಅಡಿ 100 ಕೋಟಿ ರೂ. ಸೇರಿ ಒಟ್ಟು 617.24ಕೋಟಿ ರೂ. ನೀಡಿದೆ.

ಹೀಗಿರುವಾಗ, ರಾಮ ನಗರ, ಮಾಗಡಿ ಸೇರಿದಂತೆ ನಾಲ್ಕು ವಿಧಾನಸಭಾಕ್ಷೇತ್ರ ಗಳಿಗೆ ಇದೇ ಘನತ್ಯಾಜ್ಯ ವಿಲೇವಾರಿಯಿಂದ ಬಾಧಿತ ಗ್ರಾಮಗಳ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಿರುವುದು ಎಷ್ಟು ಸರಿ? ವಾಸ್ತವವಾಗಿ ಈ ಕ್ಷೇತ್ರಗಳಲ್ಲಿನ ಹಳ್ಳಿಗಳಿಗೆ ನಗರದ ತ್ಯಾಜ್ಯದಿಂದ ಸಮಸ್ಯೆ ಆಗಿರಲು ಸಾಧ್ಯವೇ’ ಎಂಬ ಪ್ರಶ್ನೆಕೇಳಿಬರುತ್ತಿದೆ. ಒಂದು ವೇಳೆ “ನವ ಬೆಂಗಳೂರು ಯೋಜನೆ’ ಅಡಿ ಅನುದಾನ ನೀಡಿದರೆ, ನಗರದ ಸುತ್ತಲಿರುವ ‌ ಉಳಿದ ವಿಧಾನಸಭಾ ಕ್ಷೇತ್ರಗಳಿಂದಲೂ ಇಂತಹದ್ದೇ ಬೇಡಿಕೆ ಇಡಬಹುದು. ಆಗ, ನಿರಾಕರಿಸಲು ಕಷ್ಟ ವಾಗುತ್ತದೆ. ಅಷ್ಟಕ್ಕೂ ಹೀಗೆ ಸಂಬಂಧವೇ ಇಲ್ಲದ ಕ್ಷೇತ್ರಗಳಿಗೆ ಅನುದಾನ ನೀಡುವುದು ಸಮಂಜಸವಲ್ಲ ಎಂಬ ಅಭಿಪ್ರಾಯ ಅಧಿಕಾರಿಗಳ ವಲಯದಿಂದಲೇ ಕೇಳಿಬರುತ್ತಿದೆ. ಈ ಕುರಿತು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌ ಅವರನ್ನು ಪ್ರಶ್ನಿಸಿದಾಗ, “ಈ ಬಗ್ಗೆ ಸದ್ಯಕ್ಕೆ ನನ್ನ ಗಮನಕ್ಕೆ ಬಂದಿಲ್ಲ. ನಾನು ಪರಿಶೀಲಿಸಿ, ನಂತರ ಪ್ರತಿಕ್ರಿಯಿಸುತ್ತೇನೆ’ ಎಂದ‌ಷ್ಟೇ ಹೇಳಿದರು.

 

ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.