ನಾಯಿಗಳ ಉಪಟಳ: ಬಿಬಿಎಂಪಿಗೆ ಹೈ ತರಾಟೆ
Team Udayavani, Dec 10, 2021, 12:00 PM IST
Representative Image used
ಬೆಂಗಳೂರು: ಕಬ್ಬನ್ಪಾರ್ಕ್ ಒಳಗಡೆ ನಾಯಿ ಗಳ ಉಪಟಳ ತಡೆಯಲು ಬಿಬಿಎಂಪಿ ತಾನಾ ಗಿಯೇ ಕ್ರಮ ಕೈಗೊಳ್ಳಬೇಕು, ಇಲ್ಲವಾದರೆ ನ್ಯಾಯಾಲಯವೇ ನೋಟಿಸ್ ಜಾರಿ ಮಾಡ ಬೇಕಾಗುತ್ತದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಚ್ಚರಿಕೆ ನೀಡಿದ್ದಾರೆ.
ಕಬ್ಬನ್ ಪಾರ್ಕ್ಗೆ ಸೇರಿದ ಜಾಗವನ್ನು ವಿವಿಧ ಸಂಸ್ಥೆಗಳು ಅತಿಕ್ರಮಿಸಿ ಕಟ್ಟಡ ನಿರ್ಮಾಣ ಮಾಡಿವೆ ಎಂದು ಆರೋಪಿಸಿ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ಇದನ್ನೂ ಓದಿ:- ಜ.ಬಿಪಿನ್ ರಾವತ್ ನಿಧನದ ಬಗ್ಗೆ ಅವಹೇಳನಕಾರಿ ಫೇಸ್ ಬುಕ್ ಪೋಸ್ಟ್; ವ್ಯಕ್ತಿ ಬಂಧನ
ಈ ವೇಳೆ ಕಬ್ಬನ್ಪಾರ್ಕ್ ಒಳಗೆ ನಾಯಿಗಳ ಉಪಟಳ ವಿಚಾರವನ್ನು ಪ್ರಸ್ತಾಪಿಸಿದ ಮುಖ್ಯನ್ಯಾಯಮೂರ್ತಿಗಳು, ಕಬ್ಬನ್ ಪಾರ್ಕ್ ಒಳಗೆ ನಾಯಿಗಳನ್ನು ಬಿಡಲಾಗುತ್ತಿದೆ. ಬೆಳಗಿನ ಸಮಯದಲ್ಲಿ ನಾಯಿಗಳನ್ನು ಪಾರ್ಕ್ ಒಳಗೆ ಬಿಡುವುದಕ್ಕೆ ನಿರ್ಬಂಧ ಇಲ್ಲವೇ? ನಾಯಿಗಳನ್ನು ಒಳಬಿಡಲು ಶುಲ್ಕ ನಿಗದಿಪಡಿಸಿಲ್ಲವೇ? ಸಾರ್ವಜನಿಕ ಪ್ರದೇಶದಲ್ಲಿ ಹೇಗೆ ಈ ನಾಯಿಗಳ ಪ್ರವೇಶಕ್ಕೆ ಅನುಮತಿಸಲಾಗಿದೆ? ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ
Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?
Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!
ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ