ಬಳ್ಳಾರಿ ನಂಟು ಬಿಡದ ಬಾಹ್ಯಾಕಾಶ ವಿಜ್ಞಾನಿ 


Team Udayavani, Jul 25, 2017, 6:30 AM IST

UR-RAO-BELLARy.jpg

ಬಳ್ಳಾರಿ: ವಿಶ್ವ ಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ ವಿಜ್ಞಾನಿ ಯು.ಆರ್‌.ರಾವ್‌ ಅವರು ಪ್ರೌಢ
ಹಾಗೂ ಇಂಟರ್‌ ಮೀಡಿಯಟ್‌ ಶಿಕ್ಷಣ ಪಡೆದಿದ್ದು ಬಳ್ಳಾರಿಯಲ್ಲಿ. ವಿದ್ಯಾರ್ಥಿಯಾಗಿದ್ದಾಗ ರಾವ್‌ ಅವರು ಇಲ್ಲಿನ ಶ್ರೀನಿವಾಸ ಆಚಾರ್‌ ಅವರ ಮನೆಯಲ್ಲಿ ಇದ್ದರು.

60-70ರ ದಶಕದಲ್ಲಿ ಬಹು ದೊಡ್ಡ ಹೆಸರು ಗಳಿಸಿದ್ದ ನಗರದ ಮೀನಾಕ್ಷಿ ಭವನದ ಮಾಲೀಕರಾಗಿದ್ದ ಮೀನಾಕ್ಷಿ ಸೀನಪ್ಪನವರು (ಶ್ರೀನಿವಾಸ ಆಚಾರ್‌ ) ಪ್ರೊ| ಯು.ಆರ್‌.ರಾವ್‌ ಅವರಿಗೆ ಬಳ್ಳಾರಿಯಲ್ಲಿ ಆಶ್ರಯ ಕಲ್ಪಿಸಿಕೊಟ್ಟಿದ್ದರು. ರಾವ್‌ ಅವರಿಂದ ಹಣ ಪಡೆಯದೇ 2 ವರ್ಷಗಳ ಕಾಲ ಊಟ- ತಿಂಡಿ ವ್ಯವಸ್ಥೆ ಕಲ್ಪಿಸಿದ್ದರು.

ಯು.ಆರ್‌.ರಾವ್‌ ಅವರ ತಂದೆ ಲಕ್ಷ್ಮಣ ಆಚಾರ್‌ ಪ್ರಸಿದಟಛಿ ಸಿಹಿ ತಿನಿಸಿನ ತಯಾರಕರಾಗಿದ್ದರು. ಈ ಸಂದರ್ಭ ರಾವ್‌ 1940ರ ದಶಕದಲ್ಲಿ ನಗರದ ವಾಡ್ಲಾì ಹೈಸ್ಕೂಲಿನಲ್ಲಿ ಎರಡು ವರ್ಷ ಅಭ್ಯಾಸ ಮಾಡಿದ್ದರು. ಕೆಲ ಕಾಲದ ನಂತರ ಬಳ್ಳಾರಿಗೆ ಮರಳಿದ್ದ ಪ್ರೊ| ರಾವ್‌ 1947ರಲ್ಲಿ ನಗರದ ವೀರಶೈವ ಕಾಲೇಜಿನಲ್ಲಿ ಭೌತಶಾಸ್ತ್ರ, ರಾಸಾಯನ ಶಾಸ್ತ್ರ ಹಾಗೂ ಗಣಿತ ಶಾಸ್ತ್ರಗಳಿದ್ದ ವಿಜ್ಞಾನ ಇಂಟರ್‌ ಮೀಡಿಯೇಟ್‌ ಓದಿದ್ದರು.

ಬಳ್ಳಾರಿಯಲ್ಲಿದ್ದ ಸಂದರ್ಭ ನಗರದ ಶ್ರೀ ಕನ್ಯಕಾ ಪರಮೇಶ್ವರಿ ದೇವಸ್ಥಾನದ ಹಿಂದಿನ ಬೀದಿಯಲ್ಲಿ ವಾಸಿಸುತ್ತಿದ್ದರು. ಆಗ ಅವರು ಮೀನಾಕ್ಷಿ ಸೀನಪ್ಪನವರ ಮನೆಗೆ ಹೋಗಿ ಬರುತ್ತಿದ್ದರು. ಅವರ ಮಕ್ಕಳೊಡನೆ ಬೆರೆಯುತ್ತಿದ್ದರು. ಮುಂದೆ ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆ ಮಾಡಿ ವಿಶ್ವ ಪ್ರಸಿದಟಛಿರಾಗಿದ್ದರೂ ಬಾಲ್ಯದಲ್ಲಿ ಆಶ್ರಯ ನೀಡಿದ್ದ ಬಳ್ಳಾರಿಯನ್ನು ಎಂದಿಗೂ ಮರೆತಿರಲಿಲ್ಲ.

ಬಳ್ಳಾರಿಯ ಬಗೆಗೆ ಸಾಕಷ್ಟು ಅಭಿಮಾನ, ಪ್ರೀತಿ ಇರಿಸಿಕೊಂಡಿದ್ದರು. ಬಾಹ್ಯಾಕಾಶ ವಿಜ್ಞಾನಿಯಾಗಿ ಮಹತ್ವದ ಸಂಶೋಧನೆಗಳ ಆನಂತರ ಬಳ್ಳಾರಿಗೆ ಕೆಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಪ್ರೊ| ರಾವ್‌, ತಮ್ಮ ಭಾಷಣಗಳಲ್ಲಿ ಬಳ್ಳಾರಿಯಲ್ಲಿ ಕಳೆದ ದಿನಗಳನ್ನು, ಮೀನಾಕ್ಷಿ ಸೀನಪ್ಪನವರ ಮನೆಯ ಆತಿಥ್ಯವನ್ನು, ಅವರ ಎರಡನೇ ಪುತ್ರ ಹಾಗೂ ಸ್ನೇಹಿತರಾಗಿದ್ದ ವಕೀಲ ಕೆ.ಸೀತಾರಾಮ್‌ ಅವರೊಂದಿಗಿನ ಗೆಳೆತನವನ್ನು ಪ್ರಸ್ತಾಪಿಸುತ್ತಿದ್ದರು. ಸೀನಪ್ಪನವರ ಹಿರಿಯ ಪುತ್ರ ಪ್ರಸ್ತುತ ಬೆಂಗಳೂರಿನಲ್ಲಿರುವ ಕೆ.ಕೃಷ್ಣಮೂರ್ತಿ, “ಯು.ಆರ್‌. ರಾವ್‌ ನನ್ನ ಆಪ್ತ ಮಿತ್ರರಾಗಿದ್ದರು. ಇತ್ತೀಚಿನವರೆಗೂ ನಾವಿಬ್ಬರೂ ಭೇಟಿಯಾಗುತ್ತಿದ್ದ ಸಂದರ್ಭಗಳಲ್ಲಿ ಹಳೆಯ ದಿನಗಳನ್ನು ಮೆಲುಕು ಹಾಕುತ್ತಿದ್ದೆವು. ನಮ್ಮ ವಿದ್ಯಾರ್ಥಿ ದೆಸೆಯಲ್ಲಿ ಇಬ್ಬರೂ ವಾಡ್ಲಾì ಹೈಸ್ಕೂಲಿನ ಮೈದಾನದಲ್ಲಿ ಫುಟ್‌ಬಾಲ್‌, ಕಬಡ್ಡಿ ಆಡುತ್ತಿದ್ದೆವು. ಅವರ ನಿಧನದಿಂದ ನನಗೆ ತುಂಬಾ ನೋವಾಗಿದೆ’ ಎಂದು ಸಂತಾಪ ಸೂಚಿಸಿದ್ದಾರೆ.

ರಾವ್‌ ಅವರೊಂದಿಗಿನ ಗೆಳೆತನದ ಕುರಿತು ಮಾತನಾಡಿರುವ ಸೀನಪ್ಪನವರ ಎರಡನೇ ಪುತ್ರ, ಬಳ್ಳಾರಿಯಲ್ಲಿರುವ ವಕೀಲ ಸೀತಾರಾಮ್‌, ಪ್ರೊ|ರಾವ್‌ ಅಷ್ಟು ದೊಡ್ಡ ವ್ಯಕ್ತಿಯಾಗಿದ್ದರೂ ಬಳ್ಳಾರಿಗೆ ಬಂದಾಗಲೆಲ್ಲಾ ನಮ್ಮ ಮನೆಗೆ ಊಟಕ್ಕೆ ಬರುತ್ತಿದ್ದರು. ಬಾಲ್ಯದಲ್ಲಿ ಹೇಗಿದ್ದರೋ ಅವರು ದೊಡ್ಡವರಾಗಿ ಬೆಳೆದಾಗಲೂ ಅದು ಮಾಸಿರಲಿಲ್ಲ. ಊಟ ಮಾಡುತ್ತಾ ಹಳೆಯ ದಿನಗಳ ನೆನಪನ್ನು ನೆನೆಯುತ್ತಾ ಅವರು ನಮ್ಮೊಂದಿಗೆ ಹರಟುತ್ತಿದ್ದರು ಎಂದು ಸ್ಮರಿಸಿದ್ದಾರೆ.

– ಎಂ.ಮುರಳಿಕೃಷ್ಣ

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.