ನಾಮಪತ್ರ ಸಲ್ಲಿಕೆ ಕೇಂದ್ರಗಳ ಸುತ್ತ ನಿಷೇಧಾಜ್ಞೆ
Team Udayavani, Apr 17, 2018, 12:04 PM IST
ಬೆಂಗಳೂರು: ವಿಧಾನಸಭಾ ಚುನಾವಣೆ ಸ್ಪರ್ಧೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ “ನಾಮಪತ್ರ ಸಲ್ಲಿಕೆ ಕೇಂದ್ರಗಳ’ ಸುತ್ತಲಿನ 100 ಮೀ. ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಸೋಮವಾರ ಆದೇಶ ಹೊರಡಿಸಿದ್ದಾರೆ.
ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ನಿಗದಿಪಡಿಸಿರುವ ನಗರದ ಎಲ್ಲ ಕೇಂದ್ರಗಳ ಸುತ್ತಲ ಜಾರಿಗೊಳಿಸಿರುವ ನಿಷೇಧಾಜ್ಞೆ ಮಂಗಳವಾರ 6 ಗಂಟೆಯಿಂದ ಜಾರಿಗೆ ಬರಲಿದ್ದು, ಏ.24ರ ಸಂಜೆ 6 ಗಂಟೆಯವರೆಗೆ ಮುಂದುವರಿಯಲಿದೆ ಎಂದು ಆದೇಶದಲ್ಲಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಅಲ್ಲದೆ ನಿಷೇಧಾಜ್ಞೆ ಜಾರಿ ಹಿನ್ನೆಲೆಯಲ್ಲಿ ಆಯಾ ವಿಧಾನಸಭಾ ಕ್ಷೇತ್ರದ ನಾಮಪತ್ರ ಸಲ್ಲಿಕೆ ಕೇಂದ್ರದ 100 ಮೀಟರ್ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಉದ್ದೇಶದಿಂದ ಐದು ಅಥವಾ ಐದಕ್ಕಿಂತ ಹೆಚ್ಚು ಜನ ಒಂದೇ ಕಡೆ ಗುಂಪು ಸೇರುವುದನ್ನು ನಿರ್ಬಂಧಿಸಲಾಗಿದೆ. ಸ್ಫೋಟಕ ವಸ್ತುಗಳು, ಕಲ್ಲು, ಮಾರಕಾಸ್ತ್ರಗಳನ್ನು ಇಟ್ಟುಕೊಳ್ಳುವಂತಿಲ್ಲ.
ಜತೆಗೆ ಯಾವುದೇ ನಿರ್ದಿಷ್ಟ ವ್ಯಕ್ತಿ ವಿರುದ್ಧ ಪ್ರಚೋದನಕಾರಿ ಘೋಷಣೆ ಕೂಗುವುದು, ಹಾಡುವುದು, ಸಂಜ್ಞೆಗಳು, ಹಾಡುಗಾರಿಕೆಯನ್ನು, ಭಿತ್ತಿ ಪತ್ರ ಪ್ರದರ್ಶನ, ಸಂಗೀತ ನುಡಿಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ.ಒಂದು ವೇಳೆ ನಿಷೇಧಾಜ್ಞೆ ನಿಯಮಗಳನ್ನು ಪಾಲಿಸದಿದ್ದರೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತದೆ ಎಂದು ಆಯುಕ್ತರು ತಿಳಿಸಿದರು.
ಗುಪ್ತಚರ ವರದಿ: ನಾಮಪತ್ರ ಸಲ್ಲಿಕೆಗೆ ಆಗಮಿಸುವ ಅಭ್ಯರ್ಥಿಗಳ ಜತೆಗೆ ಅವರ ಬೆಂಬಲಿಗರು ಭಾರೀ ಸಂಖ್ಯೆಯಲ್ಲಿ ಆಗಮಿಸುವುದರಿಂದ ರಸ್ತೆ ತಡೆ, ಪ್ರತಿಭಟನೆಗಳು ಜರುಗುವ ಸಾಧ್ಯತೆಗಳಿರುವುದರಿಂದ ಸಂಚಾರ ದಟ್ಟಣೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರಲಿದೆ.
ಅಲ್ಲದೆ ಈ ಪರಿಸ್ಥಿತಿಗಳ ದುರ್ಲಾಭ ಪಡೆದುಕೊಂಡು ಸಮಾಜಘಾತುಕ ಶಕ್ತಿಗಳು ಹಾಗೂ ದುಷ್ಕರ್ಮಿಗಳು ಅಹಿತಕರ ಘಟನೆಗಳನ್ನು ನಡೆಸಿ, ಸಾರ್ವಜನಿಕರ ಆಸ್ತಿ ಪಾಸ್ತಿ ನಷ್ಟವುಂಟು ಮಾಡುವ ಸಾಧ್ಯತೆ ಬಗ್ಗೆ ಗುಪ್ತಚರ ವರದಿ ಆಧರಿಸಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲ್ವೆ ನಿಲ್ದಾಣದಲ್ಲಿ ನಾಯಿ ಮಾಂಸ ಗಲಾಟೆ
Bengaluru: ಬಾಡಿಗೆ ಮನೆಯಲಿದ್ದ ಗೆಳತಿಯನ್ನು ಪಿಜಿಗೆ ಕರೆತಂದಿದ್ದಕ್ಕೆ ಯುವತಿ ಹತ್ಯೆ?
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
MUST WATCH
ಹೊಸ ಸೇರ್ಪಡೆ
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!
Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.