ಎಲೆಕ್ಟ್ರಿಕ್ ಆಟೋ ಬಳಕೆಗೆ ಉತ್ತೇಜನ
Team Udayavani, Jul 29, 2018, 12:02 PM IST
ಬೆಂಗಳೂರು: ವಾಯು ಮಾಲಿನ್ಯ ನಿಯಂತ್ರಿಸುವ ನಿಟ್ಟಿನಲ್ಲಿ ಪೆಟ್ರೋಲ…, ಡೀಸೆಲ… ಚಾಲಿತ ಆಟೋ ರಿಕ್ಷಾಗಳ ಬದಲಿಗೆ ವಿದ್ಯುತ್ ಚಾಲಿತ ಆಟೋರಿಕ್ಷಾ ಬಳಕೆಗೆ ಹೆಚ್ಚು ಪರವಾನಗಿ ನೀಡಲಾಗುವುದು ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಶನಿವಾರ ಪಾಲ್ಗೊಂಡು ಮಾತನಾಡಿದ ಅವರು, ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಯು ಮಾಲಿನ್ಯ ಪ್ರಮಾಣ ಹೆಚ್ಚಾಗುತ್ತಿದೆ. ಇದರಿಂದ ಅನಾರೋಗ್ಯಕ್ಕೆ ಈಡಾಗುವವರು ಮತ್ತು ಗಂಭೀರ ಅನಾರೋಗ್ಯ ಸಮಸ್ಯೆಗಳಿಂದ ಮೃತಪಡುವವರ ಸಂಖ್ಯೆ ಹೆಚ್ಚಾಗಿದೆ.
ಇತ್ತೀಚಿನ ವರದಿ ಪ್ರಕಾರ ನಗರದಲ್ಲಿ ಪ್ರತಿ ವರ್ಷ 4 ಸಾವಿರಕ್ಕೂ ಅಧಿಕ ನಾಗರಿಕರು ಮಾಲಿನ್ಯದ ದುಷ್ಪರಿಣಾಮದಿಂದಲೇ ಮೃತಪಟ್ಟಿದ್ದಾರೆ. ನಗರದಲ್ಲಿ ಮಾಲಿನ್ಯ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ವಿದ್ಯುತ್ ಎಲೆಕ್ಟ್ರಿಕ್ ಆಟೋ ರಿಕ್ಷಾಗಳಿಗೆ ಉತ್ತೇಜನ ನೀಡಲಾಗುವುದು ಎಂದು ಹೇಳಿದರು.
ಡೀಸೆಲ್ ಆಟೋಗಳಿಗೆ ಅನುಮತಿ ನೀಡಬೇಕೆ, ಬೇಡವೇ ಎಂಬ ವಿಷಯ ಚರ್ಚೆ ಹಂತದಲ್ಲಿದೆ. ಹೀಗಾಗಿ, ಎಲೆಕ್ಟ್ರಿಕ್ ಆಟೋಗಳನ್ನು ಬಳಸಲು ಮುಂದಾದರೆ ಈಗ ಬೇಡಿಕೆಯಿರುವ 30 ಸಾವಿರ ಅರ್ಜಿಗಳ ಜತೆಗೆ ಹೆಚ್ಚುವರಿ ಆಟೋಗಳಿಗೆ ತಕ್ಷಣವೇ ಪರವಾನಗಿ ನೀಡಲು ಸರ್ಕಾರ ಸಿದ್ಧವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ