ಬಡ್ತಿ ಮೀಸಲು; ಮತ್ತೆ ಮುಖಭಂಗ


Team Udayavani, Dec 12, 2017, 6:00 AM IST

Shri-Vajubhai-Vala,-Governo.jpg

ಬೆಂಗಳೂರು: ಮಹತ್ವಾಕಾಂಕ್ಷೆಯ ಮತ್ತು ವಿವಾದಕ್ಕೆ ಕಾರಣವಾಗಿರುವ ಎಸ್‌ಸಿ, ಎಸ್‌ಟಿ ನೌಕರರ ಬಡ್ತಿ ಮೀಸಲಾತಿ ವಿಧೇಯಕಕ್ಕೆ ಅಂಕಿತ ಹಾಕುವಂತೆ ರಾಜ್ಯಪಾಲರ ಮನವೊಲಿಸಲು ಸರ್ಕಾರ ನಡೆಸಿದ ಪ್ರಯತ್ನ ವಿಫ‌ಲವಾಗಿದೆ.

ಬಡ್ತಿ ಮೀಸಲಾತಿಯನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದರೂ ಸರ್ಕಾರ ವಿಧೇಯಕ ರೂಪಿಸಿದ ಹಿನ್ನೆಲೆಯಲ್ಲಿ ಇದು ಕಾನೂನಿಗೆ ಸಂಬಂಧಿಸಿದ ವಿಚಾರ ಎಂಬ ಕಾರಣಕ್ಕೆ ವಿಧೇಯಕಕ್ಕೆ ಅಂಕಿತ ಹಾಕಲು ನಿರಾಕರಿಸಿರುವ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಕಳುಹಿಸಿಕೊಡಲು ನಿರ್ಧರಿಸಿದ್ದಾರೆ.

ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಎಸ್‌ಸಿ, ಎಸ್‌ಟಿ ಬಡ್ತಿ ಮೀಸಲು ವಿಧೇಯಕಕ್ಕೆ ಒಪ್ಪಿಗೆ ಪಡೆದು ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿತ್ತಾದರೂ ಅದಕ್ಕೆ ರಾಜ್ಯಪಾಲರು ಸಹಿ ಹಾಕದೆ ತಡೆಹಿಡಿದಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತಿ ಸಿದ್ದರಾಮಯ್ಯ ಹಾಗೂ ಕಾನೂನು ಸಚಿವ ಟಿ.ಬಿ.ಜಯಚಂದ್ರ ಸೋಮವಾರ ರಾಜ್ಯಪಾಲರನ್ನು ಭೇಟಿ ಮಾಡಿ, ವಿಧೇಯಕಕ್ಕೆ ಅಂಕಿತ ಹಾಕುವಂತೆ ಅವರ ಮನವೊಲಿಸಲು ಪ್ರಯತ್ನಿಸಿದರು.

ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಎಸ್‌ಸಿ, ಎಸ್‌ಟಿ ನೌಕರರ ಸ್ಥಿತಿಗತಿ ಅಧ್ಯಯನ ನಡೆಸಲು ಹಾಲಿ ಮುಖ್ಯಕಾರ್ಯದರ್ಶಿ ರತ್ನಪ್ರಭಾ ಅವರ ಅಧ್ಯಕ್ಷತೆಯಲ್ಲಿ ರಚಿಸಿದ್ದ ಸಮಿತಿ ನೀಡಿದ ವರದಿ ಆಧರಿಸಿಯೇ ಮೀಸಲಾತಿಯಲ್ಲಿ ಭಡ್ತಿ ನೀಡುವುದನ್ನು ಕಾಯ್ದುಕೊಳ್ಳಲು  ಸರ್ಕಾರ ತೀರ್ಮಾನಿಸಿದೆ ಎಂದು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸಿದರು. ಆದರೆ, ಸರ್ಕಾರದ ಈ ಸಮಜಾಯಿಷಿಗೆ ಒಪ್ಪದ ರಾಜ್ಯಪಾಲರು, ಇದು ಸುಪ್ರೀಂ ಕೋರ್ಟ್‌ ತೀರ್ಪಿಗೆ ಸಂಬಂಧಿಸಿದ್ದ ಪ್ರಕರಣವಾಗಿದ್ದರಿಂದ ವಿಧೇಯಕವನ್ನು ರಾಷ್ಟ್ರಪತಿಗಳಿಗೆ ಕಳುಹಿಸಲು ತೀರ್ಮಾನಿಸಿದ್ದಾರೆ.

ಇದೇ ವೇಳೆ ರಾಜ್ಯ ಸರ್ಕಾರ ವಿಧಾನಮಂಡಲದಲ್ಲಿ ಅಂಗೀಕರಿಸಿ ಕಳುಹಿಸಿಕೊಟ್ಟ ಇನ್ನೂ ಕೆಲವು ವಿಧೇಯಕಗಳ ಬಗ್ಗೆಯೂ ರಾಜ್ಯಪಾಲರೊಂದಿಗೆ ಚರ್ಚಿಸಿದ ಮುಖ್ಯಮಂತ್ರಿಗಳು ಹಾಗೂ ಕಾನೂನು ಸಚಿವರು, ಅವುಗಳಿಗೂ ಅಂಕಿತ ಹಾಕುವಂತೆ ಮನವಿ ಮಾಡಿದರು ಎನ್ನಲಾಗಿದೆ.

ರಾಜ್ಯಪಾಲರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಡ್ತಿ ಮೀಸಲು ವಿಧೇಯಕದ ಬಗ್ಗೆ ವಿವರಣೆ ನೀಡಲು ರಾಜ್ಯಪಾಲರನ್ನು ಭೇಟಿ ಮಾಡಲಾಗಿತ್ತು. ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿದ್ದ ರತ್ನಪ್ರಭಾ ಅವರಿಂದ ವರದಿ ಪಡೆದು ಬಡ್ತಿಯಲ್ಲಿ ಮೀಸಲಾತಿ ನೀಡಲು ಸುಗ್ರೀವಾಜ್ಞೆ ಹೊರಡಿಸಲಾಗಿತ್ತು. ಆದರೆ, ಆತುರ ಮಾಡದೇ ಎರಡೂ ಸದನದಲ್ಲಿಟ್ಟು ವಿಧೇಯಕ ಅಂಗೀಕರಿಸುವಂತೆ ರಾಜ್ಯಪಾಲರು ಸೂಚಿಸಿದ್ದರು. ಅದರಂತೆ ಬೆಳಗಾವಿ ಅಧಿವೇಶನದಲ್ಲಿ ಎರಡೂ ಸದನದಲ್ಲಿ ಚರ್ಚಿಸಿ ವಿಧೇಯಕ ಅಂಗಿಕಾರ ಪಡೆದು ಒಪ್ಪಿಗೆಗಾಗಿ ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿದೆ. ಆದರೆ, ಇದು ಸುಪ್ರೀಂ ಕೋರ್ಟ್‌ ತೀರ್ಪು ಆಧರಿಸಿದ ಕಾನೂನು ಆಗಿರುವುದರಿಂದ ರಾಜ್ಯಪಾಲರು ವಿಧೇಯಕವನ್ನು ರಾಷ್ಟ್ರಪತಿಗೆ ಕಳುಹಿಸುವುದಾಗಿ ಹೇಳಿರುವುದಾಗಿ ತಿಳಿಸಿದರು. ಅಲ್ಲದೆ, ವಿಧೇಯಕ ರಾಷ್ಟ್ರಪತಿಗಳಿಗೆ ರವಾನೆಯಾದ ಬಳಿಕ ಅವರನ್ನು ಭೇಟಿಯಾಗಿ ಅಂಗೀಕಾರಕ್ಕಾಗಿ ಮನವಿ ಸಲ್ಲಿಸುವುದಾಗಿ ಹೇಳಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.