ಆಸ್ತಿ ತೆರಿಗೆ ಬಾಕಿ: ಟಾಪ್‌ ಲಿಸ್ಟ್‌ ಸಿದ್ಧ


Team Udayavani, Feb 5, 2020, 3:06 AM IST

bbmp3

ಬೆಂಗಳೂರು: ಪಾಲಿಕೆ ವ್ಯಾಪ್ತಿಯ ಎಂಟು ವಲಯಗಳಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಟಾಪ್‌ 20 ಆಸ್ತಿ ಮಾಲೀಕರ ಪಟ್ಟಿಯನ್ನು ಬಿಬಿಎಂಪಿಯ ಕಂದಾಯ ವಿಭಾಗದ ಅಧಿಕಾರಿಗಳು ಸಿದ್ಧಪಡಿಸಿಕೊಂಡಿದ್ದಾರೆ. ಪ್ರತಿ ವಲಯದ ಪ್ರಮುಖ 20 ಆಸ್ತಿ ಮಾಲೀಕರಿಂದಲೇ ಪಾಲಿಕೆಗೆ 52.20 ಕೋಟಿ ರೂ. ಮೊತ್ತ ಬಾಕಿ ಬರಬೇಕಾಗಿದೆ. ಈ ಮೊತ್ತವನ್ನು ಪಾಲಿಕೆ ವಸೂಲಿ ಮಾಡಿದರೆ ತನ್ನ ತ್ತೈಮಾಸಿಕ ಆಡಳಿತಾತ್ಮಕ ವೆಚ್ಚವನ್ನು ಸರಿದೂಗಿಸಬಹುದಾಗಿದೆ.

ಪಾಲಿಕೆ ಸಿದ್ಧಪಡಿಸಿಕೊಂಡಿರುವ ಪಟ್ಟಿಯಲ್ಲಿ ಪೊಲೀಸ್‌ ಕ್ವಾಟ್ರಸ್‌, ಕರ್ನಾಟಕ ರಾಜ್ಯ ರಸ್ಥೆ ಸಾರಿಗೆ ನಿ. (ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ), ಭಾರತೀಯ ಆಹಾರ ನಿಗಮ, ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌, ಮಾನ್ಯತಾ ರಿಯಾಲಿಟಿ, ಜಿಲ್ಲಾ ಶಸಸ್ತ್ರ ಪೊಲೀಸ್‌ ಮೀಸಲು ಪಡೆ ಅಗ್ರ ಸ್ಥಾನದಲ್ಲಿದ್ದು, ಇವುಗಳಿಂದಲೇ ಪಾಲಿಕೆಗೆ ಕೋಟ್ಯಂತರ ರೂ. ಬಾಕಿ ಇದೆ. ಈ ಬಗ್ಗೆ ಪಾಲಿಕೆಯ ಅಧಿಕಾರಿಗಳು ಸಂಬಂಧ ಪಟ್ಟ ಸಂಸ್ಥೆ ಗಳಿಗೆ ನೋಟಿಸ್‌ ನೀಡಿ ಕೈ ತೊಳೆದುಕೊಂಡಿದ್ದಾರೆ.

ಪಾಲಿಕೆಗೆ ಒಟ್ಟು ಅಂದಾಜು 1,450 ಕೋಟಿ ರೂ. (ಬಡ್ಡಿ ಮತ್ತು ಅಸಲು ಸೇರಿ) ಬಾಕಿಯಿದ್ದು, ಇದರಲ್ಲಿ ಪ್ರಮುಖ 20 ಆಸ್ತಿ ತೆರಿಗೆ ಬಾಕಿ ಮೊತ್ತವನ್ನು ಆದ್ಯತೆಯ ಮೇಲೆ ವಸೂಲಿ ಮಾಡಲಾಗುವುದು ಎಂದು ಪಾಲಕೆಯ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಆಸ್ತಿ ಮಾಲೀಕರು ಕಳೆದ 10 ವರ್ಷ ಗಳಿಂದಲೂ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದರೂ ಪಾಲಿಕೆ ನೋಟಿಸ್‌ ನೀಡುವುದನ್ನು ಬಿಟ್ಟು ಮುಂದಕ್ಕೆ ಸಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರ ಮೇಲೆ ಪಾಲಿಕೆ ಯಾವ ಕ್ರಮ ಕೈಗೊಳ್ಳಬೇಕು ಎಂಬ ಪ್ರಶ್ನೆ ಎದ್ದಿದೆ.

10 ವರ್ಷಗಳಿಂದಲೂ ನೋಟಿಸ್‌: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಕೆಲವು ಮಾಲೀಕರಿಗೆ ಪಾಲಿಕೆಯ ಅಧಿಕಾರಿಗಳು ಕಳೆದ 10 ವರ್ಷ ಗಳಿಂದಲೂ ನೋಟಿಸ್‌, ವಾರೆಂಟ್‌ ಜಾರಿ ಮಾಡುತ್ತಿದ್ದಾರೆ. ಆದರೆ, ಆಸ್ತಿ ಮಾಲೀಕರು ಪಾಲಿಕೆಯ ನೋಟಿಸ್‌ಗಳಿಗೆ ಕ್ಯಾರೇ ಎನ್ನುತ್ತಿಲ್ಲ. ಪಾಲಿಕೆಯ ಅಧಿಕಾರಿಗಳು ತೆರಿಗೆ ಬಾಕಿ ಉಳಿಸಿಕೊಂಡಿರುವ ಸಂಸ್ಥೆಗಳಿಂದ ಚರ ಆಸ್ತಿ ವಶಪಡಿಸಿಕೊಂಡು ಬಿಸಿ ಮುಟ್ಟಿಸುವ ಕೆಲಸ ಮಾಡಿಲ್ಲ. ಆಸ್ತಿ ಮಾಲೀಕರು ನೋಟಿಸ್‌ಗೆ ಸ್ಪಂದಿಸದೆ ಅಸಲು ಮತ್ತು ಬಡ್ಡಿ ಉಳಿಸಿಕೊಂಡಿದ್ದಾರೆ.

ಒಂದೆಡೆ ಆಸ್ತಿ ಮಾಲೀಕರಿಂದ ತೆರಿಗೆ ಸಂಗ್ರಹ ಮಾಡುವುದು ಸವಾಲಾಗಿದ್ದರೆ, ಇನ್ನೊಂದೆಡೆ ಸರ್ಕಾರಿ ಹಾಗೂ ಪ್ರತಿಷ್ಠಿತ ಸಂಸ್ಥೆಗಳು ಪಾಲಿಕೆಗೆ ಆಸ್ತಿ ತೆರಿಗೆ ಪಾವತಿ ಮಾಡುತ್ತಿಲ್ಲ. ಇದೂ ಪಾಲಿಕೆಯ ಅಧಿಕಾರಿಗಳಿಗೆ ಕಬ್ಬಿಣದ ಕಡಲೆಯಾಗಿದೆ. ಇನ್ನು ಕೆಲವು ಸಂಸ್ಥೆಗಳು ಈಗಾಗಲೇ ದಿವಾಳಿಯಾಗಿದ್ದು, ಮುಚ್ಚಲ್ಪಟ್ಟಿವೆ. ಇದರಿಂದಲೂ ಪಾಲಿಕೆಗೆ ಕೋಟ್ಯಂತರ ರೂ. ಬಾಕಿ ಇದೆ.

ವಲಯ ಪ್ರಸಕ್ತ ವರ್ಷ ಒಟ್ಟು ಬಾಕಿ (ಕೋಟಿ ರೂ.ಗಳಲ್ಲಿ)
ಮಹದೇವಪುರ 2.84 14.27
ಬೊಮ್ಮನಹಳ್ಳಿ 1.01 3.53
ಪೂರ್ವ 1.34 5.82
ಯಲಹಂಕ 38.68 (ಲಕ್ಷ) 1.79
ರಾಜರಾಜೇಶ್ವರಿ ನಗರ 3.17 12.42
ದಕ್ಷಿಣ 2.05(ಲಕ್ಷ) 18 (ಲಕ್ಷ)
ಪಶ್ಚಿಮ 2.13 8.96
ದಾಸರಹಳ್ಳಿ 10 (ಲಕ್ಷ) 5.23
ಒಟ್ಟು 8.88 52.20

ಈಗಾಗಲೇ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಆಸ್ತಿ ಮಾಲೀಕರಿಗೆ ನೋಟಿಸ್‌ ನೀಡಲಾಗುತ್ತಿದ್ದು, ವಾರೆಂಟ್‌ ಸಹ ಜಾರಿ ಮಾಡಲಾಗುವುದು. ವಾರೆಂಟ್‌ ಜಾರಿ ಮಾಡಿದ ಮೇಲೂ ಆಸ್ತಿ ತೆರಿಗೆ ಪಾವತಿ ಮಾಡದೆ ಇದ್ದಲ್ಲಿ, ಆಸ್ತಿ ಮಾಲೀಕರ ಚರ ಆಸ್ತಿ (ಪಿಠೊಪಕರಣ)ಯನ್ನು ಜಪ್ತಿ ಮಾಡಲಾಗುವುದು.
-ಬಸವರಾಜ್‌, ವಿಶೇಷ ಆಯುಕ್ತ (ಕಂದಾಯ), ಬಿಬಿಎಂಪಿ

* ಹಿತೇಶ್‌ ವೈ

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.