ಯೋಧರಿಗೆ ಭೂಮಿ ನೀಡಲು ಪ್ರಸ್ತಾವನೆ


Team Udayavani, Jun 23, 2019, 3:05 AM IST

yodha

ಬೆಂಗಳೂರು: ದೇಶದ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಹಾಗೂ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಯೋಧರ ಕುಟುಂಬ ಸದಸ್ಯರಿಗೆ ಜಮೀನು ಅಥವಾ ನಿವೇಶನ ಹಂಚಿಕೆ ವಿಚಾರವಾಗಿ ಇಲಾಖೆಯಲ್ಲಿ ಅವಕಾಶಗಳಿದ್ದರೆ ಪರಿಶೀಲಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್‌ ಹೇಳಿದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಶನಿವಾರ ಸಂಸ್ಥೆಯ ಸರ್‌ ಎಂ.ವಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ “ಗಡಿ ಕಾಯ್ದ ಯೋಧರಿಗೆ ಗೌರವ ಸಮರ್ಪಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸೈನಿಕರು ಮತ್ತು ನಿವೃತ್ತ ಸೈನಿಕರಿಗೆ ಇಂತಿಷ್ಟು ವರ್ಷಗಳಲ್ಲಿ ನಿವೇಶನ ಅಥವಾ ಜಮೀನು ಹಂಚಿಕೆ ಮಾಡಬೇಕು ಎಂಬ ನಿಯಮಗಳಿವೆ. ಆದರೆ, ಆ ನಿಯಮಗಳು ಸಮರ್ಪಕವಾಗಿ ಅನುಷ್ಠಾನಕ್ಕೆ ಬರುತ್ತಿಲ್ಲ. ಯೋಧರು ಮತ್ತು ಅವರ ಕುಟುಂಬದವರು ಅದಕ್ಕಾಗಿ ಕಚೇರಿಗಳಿಗೆ ವರ್ಷಗಟ್ಟಲೆ ಅಲೆದಾಡಬೇಕಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ಸೈನಿಕರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳು ಕಾಲಮಿತಿಯೊಳಗೆ ಗೌರವಯುತವಾಗಿ ಸಿಗಬೇಕು. ಇದಕ್ಕಾಗಿ, ಚಾಲ್ತಿ ನಿಯಮಗಳಿಗೆ ಇಂದಿನ ಅಗತ್ಯತೆಗಳಿಗೆ ಅನುಗುಣವಾಗಿ ತಿದ್ದುಪಡಿ ತರುವ ಬಗ್ಗೆಯೂ ಆಲೋಚಿಸಬೇಕಾಗಿದೆ.

ಅಲ್ಲದೇ ಸೈನಿಕರು ಮತ್ತು ಯೋಧರ ಕುಟುಂಬದವರಿಗೆ ಜಮೀನು ಅಥವಾ ನಿವೇಶನ ಹಂಚಿಕೆಗೆ ಯಾವುದಾರರೂ ರೂಪದಲ್ಲಿ ನಮ್ಮ ಇಲಾಖೆಯಲ್ಲಿ ಅವಕಾಶಗಳಿದ್ದರೆ, ಆ ಬಗ್ಗೆ ಸರ್ಕಾರದ ಹಂತದಲ್ಲಿ ಪ್ರಸ್ತಾವನೆ ಸಲ್ಲಿಸಲು ಸಿದ್ಧ ಎಂದು ಖಾದರ್‌ ಹೇಳಿದರು.

ಕಾರ್ಪಸ್‌ ನಿಧಿಗೆ ನೆರವು: ದೇಶ ಬಲಿಷ್ಠವಾಗಬೇಕಾದರೆ ಆರ್ಥಿಕತೆ ಮತ್ತು ಸೇನೆ ಬಲಿಷ್ಠವಾಗಿರಬೇಕು. ವಾಣಿಜ್ಯ ಮತ್ತು ಕೈಗಾರಿಕಾ ವಿಷಯಗಳನ್ನು ನೋಡಿಕೊಳ್ಳುವ ಎಫ್ಕೆಸಿಸಿಐ ಯೋಧರಿಗೆ ಗೌರವ ಅರ್ಪಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅಪೂರ್ವ ಸಂಗಮವಾಗಿದೆ.

ಈ ಕಾರ್ಯಕ್ರಮ ನಿರಂತರವಾಗಿ ನಡೆದು ಇತರ ಸಂಘ-ಸಂಸ್ಥೆಗಳು ಮತ್ತು ಬೇರೆ ರಾಜ್ಯಗಳಿಗೂ ಮಾದರಿಯಾಗಬೇಕು. ಇದಕ್ಕಾಗಿ, ಸರ್ಕಾರದಿಂದ ಸಹಕಾರ ನೀಡಲು ಸಿದ್ಧ. ಯೋಧರ ಗೌರವ ಸಮರ್ಪಣೆ ಕಾರ್ಯಕ್ರಮಕ್ಕೆ ಎಫ್ಕೆಸಿಸಿಐ ನಿಗದಿತ ಮೊತ್ತದ “ಕಾರ್ಪಸ್‌ ನಿಧಿ’ ಸ್ಥಾಪಿಸಿದರೆ ಸರ್ಕಾರದಿಂದ ಅಷ್ಟೇ ಮೊತ್ತದ ನೆರವು ನೀಡುವ ಕುರಿತು ಮುಖ್ಯಮಂತ್ರಿ ಜತೆಗೆ ಚರ್ಚಿಸುತ್ತೇನೆ ಎಂದು ಖಾದರ್‌ ಭರವಸೆ ನೀಡಿದರು.

ಯೋಧರಿಗೆ ಗೌರವ ಅರ್ಪಣೆ: ಕಾರ್ಗಿಲ್‌ ಯುದ್ದದಲ್ಲಿ ದೇಶಕ್ಕಾಗಿ ಹೋರಾಟ ಮಾಡಿದ ಕ್ಯಾಪ್ಟನ್‌ ನವೀನ್‌ ನಾಗಪ್ಪ, ಇತ್ತಿಚಿಗೆ ನಡೆದ ಪುಲ್ವಾಮ ದಾಳಿಯಲ್ಲಿ ಹುತಾತ್ಮನಾದ ಜವಾನ್‌ ಎಚ್‌. ಗುರು ಸೇರಿದಂತೆ ಸೈನಿಕರು ಮತ್ತು ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಾಯಿತು. ಈ ವೇಳೆ ಕ್ಯಾ. ನವೀನ್‌ ನಾಗಪ್ಪ ಅವರು ಕಾರ್ಗಿಲ್‌ ಯುದ್ದದ ಅನುಭವಗಳನ್ನು ಹಂಚಿಕೊಂಡರು.

ಎಫ್ಕೆಸಿಸಿಐ ಅಧ್ಯಕ್ಷ ಸುಧಾರರ್‌ ಎಸ್‌. ಶೆಟ್ಟಿ, ಚುನಾಯಿತ ಹಿರಿಯ ಉಪಾಧ್ಯಕ್ಷ ಪೆರಿಕಲ್‌ ಎಂ. ಸುಂದರ್‌, ಸದಸ್ಯತ್ವ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಡಾ. ಬಿ. ಅಮರನಾಥ್‌, ನಿಕಟಪೂರ್ವ ಅಧ್ಯಕ್ಷ ಕೆ. ರವಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.