ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ವಿಳಂಬ ಖಂಡಿಸಿ ಧರಣಿ
Team Udayavani, Sep 20, 2021, 2:28 PM IST
ಬೆಂಗಳೂರು: ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ವಿಳಂಬ ಖಂಡಿಸಿ ಮತ್ತು ಇನ್ನಿತರ ಬೇಡಿಕೆಗಳಿಗೆ ಒತ್ತಾಯಿಸಿ ನೂರಾರು ಉಪನ್ಯಾಸಕರು ಪದವಿ ಪೂರ್ವ ಇಲಾಖೆ ಕಛೇರಿ ಮುಂದಿನ ರಸ್ತೆಯಲ್ಲಿ ಕುಳಿತು ಧರಣಿ ನಡೆಸಿದರು.
ಧರಣಿ ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ, ಎಸ್.ವಿ. ಸಂಕನೂರ್, ಬೋಜೇಗೌಡ, ಹನುಮಂತಪ್ಪ ನಿರಾಣಿ ಮೊದಲಾದವರು ಧರಣಿಯ ಸ್ಥಳಕ್ಕೆ ಬಂದು ಉಪನ್ಯಾಸಕರನ್ನು ಉದ್ದೇಶಿಸಿ ಮಾತನಾಡಿ, ಸದನದಲ್ಲಿ ವಿಷಯ ಪ್ರಸ್ತಾಪಿಸುವ ಭರವಸೆ ನೀಡಿದರು.
ಇದೇ ವೇಳೆ ಕಛೇರಿಗೆ ಆಗಮಿಸುತ್ತಿದ್ದ ನಿರ್ದೇಶಕಿ ಸ್ನೇಹಲ್ ಅವರು ಮುಖಾಮುಖಿಯಾದರು. ಕಚೇರಿಯ ಆವರಣಕ್ಕೆ ಉಪನ್ಯಾಸಕರನ್ನು ಬಿಡದೆ ಬೀದಿಯಲ್ಲಿ ಕುಳ್ಳಿರಿಸಿದ ಪೋಲೀಸ್ ಕ್ರಮಕ್ಕೆ ಉಪನ್ಯಾಸಕರು ಆಕ್ಷೇಪ ವ್ಯಕ್ತಪಡಿಸಿದರು.
ಉಪನ್ಯಾಸಕರ ಸಮಸ್ಯೆಗಳನ್ನು ಶ್ರೀಕಂಠೇಗೌಡ ಮತ್ತು ಸಂಕನೂರು ಅವರು ನಿರ್ದೇಶಕರಿಗೆ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!
CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ
Motivational: ಪಿಯುನಲ್ಲಿ 2 ಬಾರಿ ಫೇಲ್, ಯುಪಿಎಸ್ಸಿ ಪಾಸ್
Bike Theft: ಹಗಲಲ್ಲಿ ಫುಡ್ಡೆಲಿವರಿ ಕೆಲಸ, ರಾತ್ರಿ ಬೈಕ್ಗಳ ಕಳವು: ಆರೋಪಿ ಬಂಧನ