ಎಲಿವೇಟೆಡ್‌ ಕಾರಿಡಾರ್‌ ವಿರೋಧಿಸಿ ಪ್ರತಿಭಟನೆ


Team Udayavani, Mar 15, 2019, 6:15 AM IST

elivated.jpg

ಬೆಂಗಳೂರು: ರಾಜ್ಯ ಸರ್ಕಾರ ಕೈಗೊಳ್ಳಲು ಉದ್ದೇಶಿಸಿರುವ ಎಲಿವೇಟೆಡ್‌ ಕಾರಿಡಾರ್‌ ಯೋಜನೆ ರದ್ದುಗೊಳಿಸುವಂತೆ ಒತ್ತಾಯಿಸಿ ಸಿಟಿಜನ್‌ ಫಾರ್‌ ಬೆಂಗಳೂರು ಫೋರಂ ವತಿಯಿಂದ ಮಾ.16ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ನಗರದಲ್ಲಿ ಎಲಿವೇಟೆಡ್‌ ಕಾರಿಡಾರ್‌ ಯೋಜನೆ ಪೂರ್ಣಗೊಳ್ಳಬೇಕಾದರೆ 3 ಸಾವಿರಕ್ಕೂ ಅಧಿಕ ಮರಗಳನ್ನು ಬಲಿಕೊಡಬೇಕಾಗುತ್ತದೆ.

ಪ್ರಮುಖ ಕೆರೆಗಳ ಒತ್ತುವರಿಯಾಗುತ್ತವೆ ಹೀಗಾಗಿ ರಾಜ್ಯ ಸರ್ಕಾರ ಎಲಿವೇಟೆಡ್‌ ಕಾರಿಡಾರ್‌ ಯೋಜನೆ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಶನಿವಾರ ಮೌರ್ಯ ವೃತ್ತದ ಬಳಿ ಬೆಳಗ್ಗೆ 10 ಗಂಟೆಗೆ ವಿವಿಧ ಸಂಘಟನೆಗಳೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಸಿಟಿಜನ್‌ ಫಾರ್‌ ಬೆಂಗಳೂರು ಫೋರಂನ ತಾರಾ ಕೃಷ್ಣಸ್ವಾಮಿ ತಿಳಿಸಿದರು.

ಎಲಿವೇಟೆಡ್‌ ಕಾರಿಡಾರ್‌ ಯೋಜನೆಯನ್ನು ಕೈಬಿಟ್ಟು ಸಮೂಹ ಸಾರಿಗೆ ಕಡೆಗೆ ಹೆಚ್ಚು ಗಮನ ನೀಡಬೇಕು. ಉಪನಗರ ರೈಲು, ಬಸ್‌ ಸಂಪರ್ಕ ವ್ಯವಸ್ಥೆ, ಮೆಟ್ರೋ ರೈಲು ಯೋಜನೆಗಳನ್ನು ಮತ್ತಷ್ಟು ವಿಸ್ತರಿಸಬೇಕು. “ಕಾಂಕ್ರೀಟ್‌ ಸಾಕು, ಸಮೂಹ ಸಾರಿಗೆ ಬೇಕು’ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರನ್ನು ಆಗ್ರಹಿಸಿದರು.

ಈ ಯೋಜನೆಯಿಂದ ಕಬ್ಬನ್‌ ಉದ್ಯಾನವನದಲ್ಲಿ 120 ಮರಗಳು, ಜಯಮಹಲ್‌ ಪ್ಯಾಲೇಸ್‌ನಲ್ಲಿ 356 ಮರಗಳು, ಕೋಲ್ಸ್‌ ಪಾರ್ಕ್‌ನಲ್ಲಿ 47 ಮರಗಳು, ಐಐಎಸ್‌ಸಿ ಕ್ಯಾಂಪಸ್‌ ಹಾಗೂ ಸಿ.ವಿ.ರಾಮನ್‌ ರಸ್ತೆಯಲ್ಲಿ 195 ಮರಗಳು ಮತ್ತು ರಾಜಾರಾಮ್‌ ಮೋಹನ್‌ರಾಯ್‌ ರಸ್ತೆಯಲ್ಲಿ 108 ಮರಗಳನ್ನು ಕಡಿಯಬೇಕಾಗುತ್ತದೆ ಎಂದು ತಿಳಿಸಿದರು.

ಹೆಬ್ಟಾಳ ಕೆರೆ, ಹಲಸೂರು ಕೆರೆ, ವರ್ತೂರು ಕೆರೆ ಮತ್ತು ವೃಷಾಭವತಿ ಕೆರೆಯ 5 ಮೀಟರ್‌ ವ್ಯಾಪ್ತಿ, ಕೆ.ಆರ್‌.ಪುರ ಕೆರೆ ಮತ್ತು ಸರ್ವಜ್ಞನಗರ ಕೆರೆಯ 20 ಮೀಟರ್‌ ವ್ಯಾಪ್ತಿ, ಅಗರ ಕೆರೆ ಮತ್ತು ಚಳ್ಳಕೆರೆಯ 30 ಮೀಟರ್‌ ವ್ಯಾಪ್ತಿ, ಬಾಣಸವಾಡಿ ರಾಜಕಾಲುವೆ ಹಾಗೂ ಶಾಂತಿನಗರ ರಾಜಕಾಲುವೆಯ 1 ಮೀಟರ್‌ ವ್ಯಾಪ್ತಿ ಯೋಜನೆಗೆ ಬಲಿಯಾಗಲಿದೆ ಎಂದು ಮಾಹಿತಿ ನೀಡಿದರು.

ರಂಗಕರ್ಮಿ ಪ್ರಕಾಶ್‌ ಬೆಳವಾಡಿ ಮಾತನಾಡಿ, ಕಾವೇರಿ ನೀರು ಸರಬರಾಜು ಮಾಡುವಾಗ ಶೇ.48ರಷ್ಟು ನೀರು ಪೋಲಾಗುತ್ತದೆ. ಅದನ್ನು ತಡೆಯಲು 26 ಸಾವಿರ ಕೋಟಿ ರೂ. ಅಗತ್ಯವಿದೆ. ನಗರದ ಮೂಲ ಸೌಕರ್ಯದ ಸಮಸ್ಯೆ ನಿವಾರಿಸಲು ಸರ್ಕಾರದ ಬಳಿ ಹಣವಿಲ್ಲ. ಆದರೆ ಶ್ರೀಮಂತರ ಪರವಾಗಿರುವ ಎಲಿವೇಟೆಡ್‌ ಕಾರಿಡಾರ್‌ ಯೋಜನೆ ರೂಪಿಸಲು ಸರ್ಕಾರದ ಬಳಿ 35 ಸಾವಿರ ಕೋಟಿ ರೂ. ಹಣ ಇದೆ ಎಂದು ಟೀಕಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.