ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ


Team Udayavani, Nov 27, 2019, 3:06 AM IST

shikshana

ಬೆಂಗಳೂರು: ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ಅಂಬೇಡ್ಕರ್‌ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಉಲ್ಲೇಖೀಸಲಾಗಿದ್ದು ಈ ಮೂಲಕ ಸುಳ್ಳೊಂದನ್ನು ಮಕ್ಕಳ ತಲೆಗೆ ತುಂಬುವ ಷಡ್ಯಂತ್ರ ಮಾಡಲಾಗಿದೆ ಎಂದು ಸಂವಿಧಾನ ಸಂರಕ್ಷಣ ಐಕ್ಯತಾ ಸಮಿತಿ ಆರೋಪಿಸಿದೆ.

ಸಂವಿಧಾನ ಸಂರಕ್ಷಣ ಐಕ್ಯತಾ ಸಮಿತಿ ನೇತೃತ್ವದಲ್ಲಿ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ಬೃಹತ್‌ ರ್ಯಾಲಿ ನಡೆಸಿ, ಸುತ್ತೋಲೆ ಹೊರಡಿಸಿದ ಇಲಾಖೆ ಅಧಿಕಾರಿಗಳು ಹಾಗೂ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಲಾಯಿತು.

ಇತ್ತೀಚಿಗೆ ಶಿಕ್ಷಣ ಇಲಾಖೆ ರಾಜ್ಯದ ಎಲ್ಲಾ ಶಾಲೆಗಳಿಗೆ ಸಂವಿಧಾನ ದಿನ ಆಚರಿಸುವ ಸಂಬಂಧ ಸುತ್ತೋಲೆ ಹೊರಡಿಸಿದೆ. ಸಿಎಂಸಿಎ ಎಂಬ ಖಾಸಗಿ ಸಂಸ್ಥೆ ಕೈಪಿಡಿ ಸಿದ್ಧಪಡಿದ್ದು, ಈ ಕೈಪಿಡಿಯಲ್ಲಿರುವ ಅಂಶಗಳಂತೆಯೇ ಸಂವಿಧಾನ ದಿನ ಆಚರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಈ ಕೈಪಿಡಿಯಲ್ಲಿ ಅಂಬೇಡ್ಕರ್‌ ಒಬ್ಬರೇ ಸಂವಿಧಾನ ಬರೆದಿಲ್ಲ. ವಿವಿಧ ಸಮಿತಿ ಅಂಶ ಪಡೆದು ಕರಡು ಸಿದ್ಧಪಡಿಸಿದ್ದಾರೆ ಎಂದು ಉಲ್ಲೇಖೀಸಿದೆ.

ಇದು ಅಂಬೇಡ್ಕರ್‌ ಹಾಗೂ ಸಂವಿಧಾನಕ್ಕೆ ಮಾಡಿದ ಅಪಮಾನ ಎಂದು ಆರೋಪಿಸಿದರು. ದಲಿತ ಮುಖಂಡ ಮಹೇಶ್‌ ಮಾತನಾಡಿ, ಮಕ್ಕಳ ಮೂಲಕ ಸಂವಿಧಾನವನ್ನು ಅಂಬೇಡ್ಕರ್‌ ರಚಿಸಿಲ್ಲ ಎಂಬ ಹಸಿ ಸುಳ್ಳನ್ನು ಹರಿಬಿಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಇದು ಅತ್ಯಂತ ಕ್ರೂರ ಮನಸ್ಥಿತಿ. ಇದನ್ನು ನಾವೆಲ್ಲರೂ ಒಕ್ಕೊರಲಿನಿಂದ ಖಂಡಿಸುತ್ತೇವೆಂದರು.

ಮೈಸೂರಿನ ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ, ಭಾರತದ ಅಖಂಡತೆಯನ್ನು ಗಟ್ಟಿಯಾಗಿ ಹಿಡಿದಿರುವ ಏಕೈಕ ಧರ್ಮಗ್ರಂಥ ಸಂವಿಧಾನ. ನಾವೆಲ್ಲರೂ ಅದರ ಅಡಿಯಾಳುಗಳು. ಆದರೆ, ಇಂದು ಕೆಲವರು ಅದನ್ನೇ ನಾಶಮಾಡಲು ಮುಂದಾಗಿದ್ದಾರೆಂದು ದೂರಿದರು. ಪ್ರತಿಭಟನೆಗೆ ಬೆಂಗಳೂರು ವಿವಿ ವಿದ್ಯಾರ್ಥಿಗಳು, ದಲಿತ ಸಂಘಟನೆಗಳು ಬೆಂಬಲ ಸೂಚಿಸಿದ್ದವು.

ಪ್ರತಿಭಟನಾ ರ್ಯಾಲಿಯಿಂದ ವಾಹನ ದಟ್ಟಣೆ: ಸಂವಿಧಾನ ಸಂರಕ್ಷಣ ಐಕ್ಯತಾ ಸಮಿತಿ ಹಾಗೂ ದಲಿತ ಸಂಘಟನೆಗಳು ಮಂಗಳವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ಪ್ರತಿಭಟನಾ ರ್ಯಾಲಿ ನಡೆಸಿದ್ದು, ಇದರಿಂದ ಸುತ್ತಲಿನ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಯಿತು.

ಪ್ರತಿಭಟನಾಕಾರರು ಮಧ್ಯಾಹ್ನ 11.45ಕ್ಕೆ ಸಂಗೊಳ್ಳಿ ರೈಲು ನಿಲ್ದಾಣದಿಂದ ರ್ಯಾಲಿ ಆರಂಭಿಸಿದ್ದು, ಸ್ವಾತಂತ್ರ್ಯ ಉದ್ಯಾನವರೆಗಿನ ರಸ್ತೆಯು ವಾಹನ ದಟ್ಟಣೆಯಿಂದ ಕೂಡಿತ್ತು. ಮೌರ್ಯ ಸರ್ಕಲ್‌, ಆನಂದರಾವ್‌ ವೃತ್ತ, ಶಿವಾನಂದ ಸರ್ಕಲ್‌, ಓಕಳಿಪುರ ರಸ್ತೆ, ಮಹಾರಾಣಿ ಕಾಲೇಜು ರಸ್ತೆ ಸೇರಿ ಹಲವು ರಸ್ತೆಗಳಲ್ಲಿ ವಾಹನಗಳು ಸ್ತಬ್ಧವಾಗಿದ್ದವು. ಮಧ್ಯಾಹ್ನ 1ಗಂಟೆವರೆಗೂ ಸಂಚಾರ ಅಸ್ತವ್ಯಸ್ತವಾಯಿತು.

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.