ಉಚಿತ ಬಸ್ಪಾಸ್ಗೆ ಆಗ್ರಹಿಸಿ ಪ್ರತಿಭಟನೆ
Team Udayavani, Jul 19, 2018, 7:00 AM IST
ಬೆಂಗಳೂರು: ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡುವಂತೆ ಒತ್ತಾಯಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ಬುಧವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಯಿತು.
ಬೆಂಗಳೂರಿನಲ್ಲಿ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪರಿಶಿಷ್ಟ ಜಾತಿ ಮತ್ತು ಪಂಗಡ ಸೇರಿ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ಪಾಸ್ ನೀಡುವುದಾಗಿ ಈ ಹಿಂದೆ ಬಜೆಟ್ನಲ್ಲಿ ಘೋಷಿಸಲಾಗಿತ್ತು. ಆದರೆ, ಶಾಲೆ-ಕಾಲೇಜುಗಳು ಆರಂಭಗೊಂಡು ಎರಡು ತಿಂಗಳಾದರೂ ಸರ್ಕಾರ ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ಕೂಡಲೇ ಉಚಿತ ಪಾಸ್ ಘೋಷಿಸುವ ಮೂಲಕ ಸರ್ಕಾರವು ನುಡಿದಂತೆ ನಡೆಯಬೇಕು. ಈಗಾಗಲೇ ಘೋಷಿಸಿದ ಉಚಿತ ಬಸ್ ಪಾಸ್ ಎದುರು ನೋಡುತ್ತಿದ್ದೇವೆ. ಒಂದೂವರೆ ತಿಂಗಳಿಂದ ಈ ಸಂಬಂಧ ನಿರಂತರ ಹೋರಾಟ ಮಾಡಲಾಗುತ್ತಿದೆ. ಆದರೆ, ಸರ್ಕಾರದಿಂದ ಪೂರಕ ಸ್ಪಂದನೆ ಸಿಗುತ್ತಿಲ್ಲ. ಇದೇ ಧೋರಣೆ ಮುಂದುವರಿದರೆ ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಬಿವಿಪಿ ರಾಜ್ಯ ಘಟಕದ ಕಾರ್ಯದರ್ಶಿ ಹರ್ಷ ನಾರಾಯಣ ಮಾತನಾಡಿ, ಶಾಸಕರಿಗೆ ದುಬಾರಿ ಮೊತ್ತದ ಕಾರುಗಳನ್ನು ಖರೀದಿಸಲು, ಮೋಜು-ಮಸ್ತಿಗೆ ಸರ್ಕಾರದ ಬಳಿ ಹಣ ಇದೆ.ಆದರೆ, ಬಡ ವಿದ್ಯಾರ್ಥಿಗಳಿಗೆ ಪಾಸ್ ನೀಡಲು ಆರ್ಥಿಕ ಸಂಕಷ್ಟ ಎದುರಾಗುತ್ತದೆ. ಇದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ಮಂಡ್ಯದಲ್ಲಿ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು ಆವರಣದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು, ಸರ್ಕಾರದ ವಿರುದಟಛಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ, ಬೆಂಗಳೂರು- ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಚಿಕ್ಕಬಳ್ಳಾಪುರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ನೂರಾರು ವಿದ್ಯಾರ್ಥಿಗಳು ಬೃಹತ್ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸುವ ಮೂಲಕ ವಾಹನಕ್ಕೆ ಸಂಚಾರಕ್ಕೆ ಅಡ್ಡಿಪಡಿಸಿದರು. ಬಳಿಕ ನಗರದ ಮುಖ್ಯ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ತಾಲೂಕು ಕಚೇರಿಯ ಶಿರಸ್ತೇದಾರರಿಗೆ ಮನವಿ ಸಲ್ಲಿಸಿ, ಉಚಿತ ಬಸ್ ಪಾಸ್ಗೆ ಆಗ್ರಹಿಸಿದರು. ಇದೇ ವೇಳೆ, ಉಡುಪಿ,ಮೈಸೂರು, ಹುಬ್ಬಳ್ಳಿ, ಶಿವಮೊಗ್ಗ, ಕಲಬುರಗಿ,ಬೀದರ್, ರಾಯಚೂರು, ಬೆಳಗಾವಿ ಸೇರಿ ರಾಜ್ಯದ ಇತರೆಡೆಯೂ ಪ್ರತಿಭಟನೆಗಳು ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ