ಐಎಂಎ ಪ್ರಕರಣ ಸಿಬಿಐಗೆ ಒಪ್ಪಿಸಲು ಒತ್ತಾಯಿಸಿ ಧರಣಿ


Team Udayavani, Jun 16, 2019, 3:06 AM IST

im-prak

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು, ಇದೇ ರೀತಿಯಲ್ಲಿ ಈ ಹಿಂದೆ ನಡೆದಿರುವ ವಿವಿಧ ವಂಚನೆ ಪ್ರಕರಣಗಳನ್ನೂ ಕೂಡಲೇ ತನಿಖೆ ಮಾಡಬೇಕು ಎಂದು ಒತ್ತಾಯಿಸಿ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯಿಂದ ಶನಿವಾರ ಟೌನ್‌ಹಾಲ್‌ನ ಮುಂದೆ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ವೇದಿಕೆಯ ಅಧ್ಯಕ್ಷ ರವಿಕೃಷ್ಣ ರೆಡ್ಡಿ, ಬಡವರು ಹಣ ಕಳೆದುಕೊಂಡರೆ ಅದಕ್ಕೆ ಬೆಲೆಯೇ ಇಲ್ಲ ಎನ್ನುವಂತಾಗಿದೆ. ಐಎಂಎ ಮಾಲೀಕ ಮನ್ಸೂರ್‌ ಖಾನ್‌ನನ್ನು ಕೂಡಲೇ ಬಂಧಿಸಬೇಕು. ಬಡವರ ಹಣ ಮತ್ತೆ ಅವರಿಗೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.

“ಈ ಹಿಂದೆಯೂ ಇದೇ ರೀತಿಯಲ್ಲಿ ಹಲವು ಕಂಪನಿಗಳು ಬಡವರ ಹಣವನ್ನು ದೋಚಿವೆ. ಆದರೆ, ಇಲ್ಲಿಯವರೆಗೆ ಯಾರಿಗೂ ಶಿಕ್ಷೆ ಆಗಿಲ್ಲ. ಇಂತಹ ವಂಚನೆಯ ಪ್ರಕರಣಗಳ ತನಿಖೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಬೇಕು. ಪೊಲೀಸರು ಐಎಂಎ ವಂಚನೆ ಪ್ರಕರಣದ ಸಂಪೂರ್ಣ ಮಾಹಿತಿಯನ್ನು ನ್ಯಾಯಾಲಯಕ್ಕೆ ಕೂಡಲೇ ಸಲ್ಲಿಸಬೇಕು’ ಎಂದರು.

“ಅಯೋಗ್ಯ ರಾಜಕಾರಣಿಗಳಿಂದ ನ್ಯಾಯ ಸಿಗುವುದಿಲ್ಲ. ಇಷ್ಟು ದೊಡ್ಡ ವಂಚನೆ ನಡೆಯುವವರೆಗೆ ಗುಪ್ತಚರ ಇಲಾಖೆಯ ಅಧಿಕಾರಿಗಳು ಕತ್ತೆ ಕಾಯುತ್ತಿದ್ದರು. ಆ ಕತ್ತೆಗಳು ಯಾರು ಎಂದರೆ ರಾಜಕಾರಣಿಗಳು. ಈಗ ಮೋಸ ಹೋದವರಿಂದ ಬನ್ನಿ ಎಫ್ಐಆರ್‌ ದಾಖಲಿಸಿ ಎಂದು ಪೊಲೀಸರು ಹೇಳುತ್ತಿದ್ದಾರೆ’ಎಂದು ಆಕ್ರೋಶ ವ್ಯಕ್ತಪಡಿಸಿದರು.

ಐಎಂಎ ಜ್ಯುವೆಲ್ಸ್‌ ಮಾಲೀಕನ ಬಂಧನಕ್ಕೆ ಆಗ್ರಹ
ಬೆಂಗಳೂರು: ವಂಚಿಸಿ ತಲೆಮರಿಸಿಕೊಂಡಿರುವ ಐಎಂಎ ಜ್ಯುವೆಲ್ಸ್‌ ಮಾಲೀಕ ಮನ್ಸೂರ್‌ ಖಾನ್‌ನನ್ನು ಕೂಡಲೇ ಬಂಧಿಸಿ ಹೂಡಿಕೆದಾರರಿಗೆ ನ್ಯಾಯ ಒದಗಿಸಬೇಕೆಂದು ಆಲ್‌ ಇಂಡಿಯಾ ಮಜಿಸೆ-ಇತ್ತೆಹದುಲ್‌ ಮುಸ್ಲಿಮೀನ್‌ ಸಂಘಟನೆಯ ಅಧ್ಯಕ್ಷ ಮಹಮದ್‌ ಇಬ್ರಾಹಿಂ ಒತ್ತಾಯಿಸಿದರು.

ಶನಿವಾರ ಪ್ರಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾವಿರಾರು ಮಂದಿ ಬಡವರು, ಅನಕ್ಷರಸ್ತರು ತಾವು ಕಷ್ಟ ಪಟ್ಟು ದುಡಿದ ಗಣವನ್ನು ಹೆಚ್ಚಿನ ಬಡ್ಡಿ ಸಿಗುತ್ತದೆ ಎಂದು ಐಎಂಎಯಲ್ಲಿ ಹೂಡಿಕೆ ಮಾಡಿದ್ದರು. ಆದರೆ, ಮನ್ಸೂನ್‌ ಖಾನ್‌ ಅವರೆಲ್ಲರ ನಂಬಿಕೆಗೂ ಮೋಸ ಮಾಡಿ ಪರಾರಿಯಾಗಿದ್ದಾನೆ. ಆತನನ್ನು ಕೂಡಲೇ ಬಂಧಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.

ಹಣ ಕಳೆದುಕೊಂಡವರ ಪೈಕಿ ಕೆಲವು ಕುಟುಂಬಗಳು ಮನನೊಂದು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಹೂಡಿಕೆ ಕುರಿತು ಪತಿ, ಪತ್ನಿಯರಲ್ಲಿ ಬಿರುಕು ಉಂಟಾಗಿ ವಿಚೇಧನವಾಗುತ್ತಿವೆ. ಇನ್ನು ಮೌಲ್ವಿಗಳು ಧಾರ್ಮಿಕ ಚಿಂತನೆಗಳ ಕುರಿತು ಜಾಗೃತಿ ಮೂಡಿಸಬೇಕೆ ಹೊರತು, ಒಂದು ಕಂಪನಿ ಪರ ನಿಲ್ಲುವುದು ಅಲ್ಲಿ ಹಣ ಹೂಡುವಂತೆ ಹೇಳುವುದು ಸರಿಯಲ್ಲ ಎಂದು ಕಿಡಿಕಾರಿದ ಅವರು ರಾಜಕಾರಣಿ ಒಳಗೊಂಡಂತೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.