ಐಎಂಎ ಪ್ರಕರಣ ಸಿಬಿಐಗೆ ಒಪ್ಪಿಸಲು ಒತ್ತಾಯಿಸಿ ಧರಣಿ
Team Udayavani, Jun 16, 2019, 3:06 AM IST
ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು, ಇದೇ ರೀತಿಯಲ್ಲಿ ಈ ಹಿಂದೆ ನಡೆದಿರುವ ವಿವಿಧ ವಂಚನೆ ಪ್ರಕರಣಗಳನ್ನೂ ಕೂಡಲೇ ತನಿಖೆ ಮಾಡಬೇಕು ಎಂದು ಒತ್ತಾಯಿಸಿ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯಿಂದ ಶನಿವಾರ ಟೌನ್ಹಾಲ್ನ ಮುಂದೆ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ವೇದಿಕೆಯ ಅಧ್ಯಕ್ಷ ರವಿಕೃಷ್ಣ ರೆಡ್ಡಿ, ಬಡವರು ಹಣ ಕಳೆದುಕೊಂಡರೆ ಅದಕ್ಕೆ ಬೆಲೆಯೇ ಇಲ್ಲ ಎನ್ನುವಂತಾಗಿದೆ. ಐಎಂಎ ಮಾಲೀಕ ಮನ್ಸೂರ್ ಖಾನ್ನನ್ನು ಕೂಡಲೇ ಬಂಧಿಸಬೇಕು. ಬಡವರ ಹಣ ಮತ್ತೆ ಅವರಿಗೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.
“ಈ ಹಿಂದೆಯೂ ಇದೇ ರೀತಿಯಲ್ಲಿ ಹಲವು ಕಂಪನಿಗಳು ಬಡವರ ಹಣವನ್ನು ದೋಚಿವೆ. ಆದರೆ, ಇಲ್ಲಿಯವರೆಗೆ ಯಾರಿಗೂ ಶಿಕ್ಷೆ ಆಗಿಲ್ಲ. ಇಂತಹ ವಂಚನೆಯ ಪ್ರಕರಣಗಳ ತನಿಖೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಬೇಕು. ಪೊಲೀಸರು ಐಎಂಎ ವಂಚನೆ ಪ್ರಕರಣದ ಸಂಪೂರ್ಣ ಮಾಹಿತಿಯನ್ನು ನ್ಯಾಯಾಲಯಕ್ಕೆ ಕೂಡಲೇ ಸಲ್ಲಿಸಬೇಕು’ ಎಂದರು.
“ಅಯೋಗ್ಯ ರಾಜಕಾರಣಿಗಳಿಂದ ನ್ಯಾಯ ಸಿಗುವುದಿಲ್ಲ. ಇಷ್ಟು ದೊಡ್ಡ ವಂಚನೆ ನಡೆಯುವವರೆಗೆ ಗುಪ್ತಚರ ಇಲಾಖೆಯ ಅಧಿಕಾರಿಗಳು ಕತ್ತೆ ಕಾಯುತ್ತಿದ್ದರು. ಆ ಕತ್ತೆಗಳು ಯಾರು ಎಂದರೆ ರಾಜಕಾರಣಿಗಳು. ಈಗ ಮೋಸ ಹೋದವರಿಂದ ಬನ್ನಿ ಎಫ್ಐಆರ್ ದಾಖಲಿಸಿ ಎಂದು ಪೊಲೀಸರು ಹೇಳುತ್ತಿದ್ದಾರೆ’ಎಂದು ಆಕ್ರೋಶ ವ್ಯಕ್ತಪಡಿಸಿದರು.
ಐಎಂಎ ಜ್ಯುವೆಲ್ಸ್ ಮಾಲೀಕನ ಬಂಧನಕ್ಕೆ ಆಗ್ರಹ
ಬೆಂಗಳೂರು: ವಂಚಿಸಿ ತಲೆಮರಿಸಿಕೊಂಡಿರುವ ಐಎಂಎ ಜ್ಯುವೆಲ್ಸ್ ಮಾಲೀಕ ಮನ್ಸೂರ್ ಖಾನ್ನನ್ನು ಕೂಡಲೇ ಬಂಧಿಸಿ ಹೂಡಿಕೆದಾರರಿಗೆ ನ್ಯಾಯ ಒದಗಿಸಬೇಕೆಂದು ಆಲ್ ಇಂಡಿಯಾ ಮಜಿಸೆ-ಇತ್ತೆಹದುಲ್ ಮುಸ್ಲಿಮೀನ್ ಸಂಘಟನೆಯ ಅಧ್ಯಕ್ಷ ಮಹಮದ್ ಇಬ್ರಾಹಿಂ ಒತ್ತಾಯಿಸಿದರು.
ಶನಿವಾರ ಪ್ರಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾವಿರಾರು ಮಂದಿ ಬಡವರು, ಅನಕ್ಷರಸ್ತರು ತಾವು ಕಷ್ಟ ಪಟ್ಟು ದುಡಿದ ಗಣವನ್ನು ಹೆಚ್ಚಿನ ಬಡ್ಡಿ ಸಿಗುತ್ತದೆ ಎಂದು ಐಎಂಎಯಲ್ಲಿ ಹೂಡಿಕೆ ಮಾಡಿದ್ದರು. ಆದರೆ, ಮನ್ಸೂನ್ ಖಾನ್ ಅವರೆಲ್ಲರ ನಂಬಿಕೆಗೂ ಮೋಸ ಮಾಡಿ ಪರಾರಿಯಾಗಿದ್ದಾನೆ. ಆತನನ್ನು ಕೂಡಲೇ ಬಂಧಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.
ಹಣ ಕಳೆದುಕೊಂಡವರ ಪೈಕಿ ಕೆಲವು ಕುಟುಂಬಗಳು ಮನನೊಂದು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಹೂಡಿಕೆ ಕುರಿತು ಪತಿ, ಪತ್ನಿಯರಲ್ಲಿ ಬಿರುಕು ಉಂಟಾಗಿ ವಿಚೇಧನವಾಗುತ್ತಿವೆ. ಇನ್ನು ಮೌಲ್ವಿಗಳು ಧಾರ್ಮಿಕ ಚಿಂತನೆಗಳ ಕುರಿತು ಜಾಗೃತಿ ಮೂಡಿಸಬೇಕೆ ಹೊರತು, ಒಂದು ಕಂಪನಿ ಪರ ನಿಲ್ಲುವುದು ಅಲ್ಲಿ ಹಣ ಹೂಡುವಂತೆ ಹೇಳುವುದು ಸರಿಯಲ್ಲ ಎಂದು ಕಿಡಿಕಾರಿದ ಅವರು ರಾಜಕಾರಣಿ ಒಳಗೊಂಡಂತೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ