![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಕೆರೆ ಸಂರಕ್ಷಿಸಲು ಒತ್ತಾಯಿಸಿ ಪ್ರತಿಭಟನೆ
Team Udayavani, Aug 20, 2018, 12:41 PM IST
![protest.jpg](https://www.udayavani.com/wp-content/uploads/2018/08/20/protest.jpg)
ಬೆಂಗಳೂರು: ಸುತ್ತಮುತ್ತಲ ಕಾರ್ಖಾನೆಗಳು ಹಾಗೂ ಅಪಾರ್ಟ್ಮೆಂಟ್ಗಳಿಂದ ಹರಿದು ಬರುತ್ತಿರುವ ತ್ಯಾಜ್ಯ ನೀರಿನಿಂದ ಪುಟ್ಟೇನಹಳ್ಳಿ ಕೆರೆ ಮಾಲಿನ್ಯವಾಗುತ್ತಿದ್ದು, ಸರ್ಕಾರ ಅಗತ್ಯ ಕ್ರಮ ಕೈಗೊಂಡು ಕೆರೆ ರಕ್ಷಿಸಬೇಕು ಎಂದು ಒತ್ತಾಯಿಸಿ ಪುಟ್ಟೇನಹಳ್ಳಿ ಕೆರೆ ಮತ್ತು ಪಕ್ಷಿ ಸಂರಕ್ಷಣಾ ಟ್ರಸ್ಟ್ ಭಾನುವಾರ ಪ್ರತಿಭಟನೆ ನಡೆಸಿತು.
ಟ್ರಸ್ಟ್ ಮುಂದಾಳತ್ವದಲ್ಲಿ ಸ್ಥಳೀಯರು, ವಿದ್ಯಾರ್ಥಿಗಳು ಯಲಹಂಕ-ದೊಡ್ಡಬಳ್ಳಾಪುರ ಮುಖ್ಯರಸ್ತೆಯಲ್ಲಿ ಮಾನವ ಸರಪಳಿ ನಿರ್ಮಿಸಿ ಕೆರೆ ಉಳಿಸಿ, ಪರಿಸರ ಸಂರಕ್ಷಿಸಿ ಘೋಷಣೆ ಕೂಗಿದರು. ಪ್ರತಿಭಟನಾನಿರತರನ್ನು ಉದ್ದೇಶಿಸಿ ಟ್ರಸ್ಟ್ನ ಸದಸ್ಯ ಟಿ.ಕೆ.ಪುಟ್ಟಸ್ವಾಮಿ ಮಾತನಾಡಿ, ಸುತ್ತಮುತ್ತಲಿನ ಪ್ರದೇಶದ ಅಪಾರ್ಟ್ಮೆಂಟ್ ಹಾಗೂ ಕಾರ್ಖಾನೆಗಳಿಂದ ಕೊಳಚೆ ನೀರು ಬಂದು ಕೆರೆಗೆ ಸೇರುತ್ತಿದೆ.
ಇದರಿಂದ ಕೆರೆ ತುಂಬಾ ತ್ಯಾಜ್ಯ ನೀರು ತುಂಬಿ ಕೆರೆ ಸಂಪೂರ್ಣ ಮಲಿನವಾಗಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳೀಯರು ಹಾಗೂ ಸಂಘ-ಸಂಸ್ಥೆಗಳ ಸದಸ್ಯರು ಬಿಬಿಎಂಪಿ, ಬೆಂಗಳೂರು ಜಲಮಂಡಳಿ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಗೆ ಹಲವು ಬಾರಿ ಮನವಿ ನೀಡಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಆಶ್ವಾಸನೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಟ್ರಸ್ಟ್ನ ಮುಖ್ಯಸ್ಥ ಡಾ.ಸಂಗುನ್ನಿ ಮಾತನಾಡಿ, ಕೆರೆ ದಡದಲ್ಲಿರುವ ಜಲಮಂಡಳಿಯ ತ್ಯಾಜ್ಯ ಸಂಸ್ಕರಣಾ ಘಟಕ ದುರಸ್ಥಿಗೆ ಬಂದಿದ್ದು, ಕೊಳಚೆ ನೀರು ಸಂಸ್ಕರಣೆಯಾಗದೆ ನೇರವಾಗಿ ಕೆರೆ ಸೇರುತ್ತಿದೆ. ಹೀಗಾಗಿ, ಕೆರೆಗೆ ವಲಸೆ ಬರುವ ಪಕ್ಷಿಗಳ ಸಂಖ್ಯೆ ಕಡಿಮೆಯಾಗಿದೆ. ಜತೆಗೆ ತ್ಯಾಜ್ಯ ನೀರು ಸುತ್ತಮುತ್ತಲ ಪ್ರದೇಶಗಳಲ್ಲಿ ಇಂಗಿ ಹೋಗಿ ಅಂತರ್ಜಲವೂ ಕಲುಷಿತಗೊಂಡು ಕೊಳವೆ ಬಾವಿಗಳಲ್ಲಿ ಮಲಿನ ನೀರು ಕಾಣಿಸಿಕೊಳ್ಳುತ್ತಿದೆ. ಹೀಗೆಯೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಬಹುದು ಎಂದರು.
ಪ್ರತಿಭಟನಾನಿರತರ ಮನವಿಯನ್ನು ಸ್ವೀಕರಿಸಿದ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್, ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಕೆರೆಯ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದೆ. ಬಿಬಿಎಂಪಿ ಹಾಗೂ ಜಲಮಂಡಳಿಯ ಸಮನ್ವಯದ ಕೊರತೆಯಿಂದಾಗಿ ಕಾಮಗಾರಿ ವಿಳಂಬವಾಗಿದೆ. ಕೂಡಲೇ ಸಂಸ್ಕರಣಾ ಘಟಕವನ್ನು ದುರಸ್ಥಿಗೊಳಿಸಲು ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.