ಗೌರಿ ಲಂಕೇಶ್‌ ಹತ್ಯೆ ವಿರುದ್ಧ ಭುಗಿಲೆದ್ದ ಆಕ್ರೋಶ


Team Udayavani, Sep 7, 2017, 6:25 AM IST

journalist-Gauri-Lankesh.jpg

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆಗೆ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ದೇಶದೆಲ್ಲೆಡೆಯಿಂದ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಹತ್ಯೆ ಖಂಡಿಸಿ, ದೆಹಲಿ, ಚೆನ್ನೈ, ಮೈಸೂರು, ಬೆಂಗಳೂರು, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಬಾಗಲಕೋಟೆ ಸೇರಿ ದೇಶದ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿವೆ.

ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರಗತಿಪರ ಸಂಘಟನೆ, ದಲಿತ ಸಂಘಟನೆ, ರೈತ ಸಂಘಟನೆ, ಪತ್ರಕರ್ತರ ಸಂಘಟನೆಗಳು, ಬಹುತ್ವಕ್ಕಾಗಿ ಯುವಜನತೆ, ಕನ್ನಡಪರ ಸಂಘಟನೆ ಹಾಗೂ ಆಮ… ಆದ್ಮಿಪಕ್ಷ ಸೇರಿ ವಿವಿಧ ವಿದ್ಯಾರ್ಥಿ ಸಂಘಟನೆಗಳು ಬುಧವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದವು. 

ಪ್ರಗತಿಪರ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು ಕಾಲೇಜು ವಿದ್ಯಾರ್ಥಿಗಳು ಬುಧವಾರ ಬೆಳಗ್ಗೆಯಿಂದಲೇ ನಗರದ ಪುರಭವನದಲ್ಲಿ ಸೇರಿ, “ಐ ಆ್ಯಮ್‌ ಎ ಗೌರಿ’, “ಐ ಆ್ಯಮ್‌ ವಿಥ್‌ ಗೌರಿ’, “ಗೌರಿ ಜಿಂದಾಬಾದ್‌’, “ಬಂಧಿಸಿ..ಬಂಧಿಸಿ… ಹಂತಕರನ್ನು ಬಂಧಿಸಿ’, “ಹತ್ಯೆಯಿಂದ ವಿಚಾರ ಸಾಯೋದಿಲ್ಲ’…ಹೀಗೆ ಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿ, ಪ್ರಕರಣದ ತನಿಖೆಯನ್ನು ನ್ಯಾಯಾಲಯದ ಕಣ್ಗಾವಲಿನಲ್ಲಿ ಮಾಡಬೇಕು ಎಂದು ಒತ್ತಾಯಿಸಿದರು.

ಸಾಹಿತಿ ಬರಗೂರು ರಾಮಚಂದ್ರಪ್ಪ, ಮಾಜಿ ಅಡ್ವೋಟೇಕ್‌ ಜನರಲ್‌ ಪ್ರೊ.ರವಿವರ್ಮ ಕುಮಾರ್‌, ಸಾಹಿತಿ ಪ್ರೊ.ಮರುಳಸಿದ್ದಪ್ಪ, ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಾ.ನಲ್ಲೂರು ಪ್ರಸಾದ್‌, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಸೇರಿದಂತೆ ಹಲವರು ಮಾತನಾಡಿ, ಸಾಹಿತಿ, ವಿಚಾರವಾದಿಗಳು, ಪ್ರಗತಿಪರ ಚಿಂತಕರ ಹತ್ಯೆಯಿಂದ ಅವರು ಪ್ರತಿಪಾದಿಸಿದ ವಿಚಾರ ಅಥವಾ ಆಲೋಚನೆ ಸಾಯುವುದಿಲ್ಲ.

ಗೌರಿಯವರನ್ನು ಹತ್ಯೆ ಮಾಡಿದ್ದರಿಂದ ಅವರು ನೀಡಿದ ವಿಚಾರಧಾರೆ ಕೊನೆಯಾಗುತ್ತದೆ ಎಂದು ಯಾರಾದರೂ ಭಾವಿಸಿದ್ದರೆ ಅದು ಮೂರ್ಖತನದ ಪರಮಾವಧಿ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ರಾಜ್ಯದ ಇತರೆಡೆಯೂ ಪ್ರತಿಭಟನೆ: ಗದಗಿನಲ್ಲಿ ತೋಂಟದಾರ್ಯ ಶ್ರೀಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆದರೆ, ಮಂಡ್ಯ, ಮೈಸೂರು, ಬೆಳಗಾವಿಗಳಲ್ಲಿ ಪ್ರಗತಿಪರ ಮಹಿಳಾ ಬರಹಗಾರರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಕಲಬುರಗಿಯಲ್ಲಿ ಪ್ರಗತಿಪರ ಚಿಂತಕರು ಜಿಲ್ಲಾಧಿಕಾರಿ ಕಚೇರಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ಬೀದರ್‌ನಲ್ಲಿ ಅಂಬೇಡ್ಕರ್‌ ವೃತ್ತದ ಎದುರು ಪ್ರತಿಭಟನಾ ರ್ಯಾಲಿ ನಡೆಯಿತು.

ಪತ್ರಕರ್ತರ ಮೌನ ಪ್ರತಿಭಟನೆ: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರದ ಎದುರು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮೌನ ಪ್ರತಿಭಟನೆ ನಡೆಸಲಾಯಿತು. ನಂತರ ಘಟನೆ ಖಂಡಿಸಿ ಬೆಂಗಳೂರು ಪ್ರಸ್‌ಕ್ಲಬ್‌ ಹಾಗೂ ವರದಿಗಾರರ ಕೂಟದಿಂದ ಖಂಡನಾ ಸಭೆ ನಡೆಸಿ, ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಶೀಘ್ರ ಗತಿಯಲ್ಲಿ ಕೈಗೊಂಡು ಹಂತಕರ ಪತ್ತೆಗೆ ಕ್ರಮ ಕೈಗೊಳ್ಳಬೇಕು. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಲಾಯಿತು. ಮಾಧ್ಯಮ ಅಕಾಡೆಮಿ ಆಧ್ಯಕ್ಷ ಸಿದ್ದರಾಜು, ಹಿರಿಯ ಪತ್ರಕರ್ತರಾದ ಈಶ್ವರ ದೈತೋಟ, ಬಿ.ವಿ.ಮಲ್ಲಿಕಾರ್ಜುನಯ್ಯ, ವಾಸುಕಿ, ಜ್ಯೋತಿ ಇರ್ವತ್ತೂರು, ಮಂಜುನಾಥ ಅದ್ದೆ, ವೈ.ಗ.ಜಗದೀಶ್‌, ನಟಿ ವಸುಂಧರ ದಾಸ್‌, ಪ್ರೊ. ಅಶೋಕ್‌ಕುಮಾರ್‌, ಶಮಂತ, ಭಾನುತೇಜ್‌, ಬಸವ ರಾಜ ಹಿಟ್ನಾ ಲ್‌, ಆರ್‌.ಟಿ. ವಿಠಲ್‌ ಮೂರ್ತಿ, ಶಿವಾನಂದ ತಗ ಡೂರು,ರಾಜು,ಪ್ರಸ್‌ ಕ್ಲಬ್‌ ಅಧ್ಯಕ್ಷ ಸದಾ ಶಿವ ಶೆಣೈ ಮಾತನಾಡಿ ಘಟನೆ ಖಂಡಿಸಿ ಪತ್ರಕರ್ತರಿಗೆ ರಕ್ಷಣೆ ಒದಗಿಸುವಂತೆ ಒತ್ತಾಯಿಸಿದರು. ನಂತರ ನಿಯೋಗದಲ್ಲಿ ತೆರಳಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಅರ್ಪಿಸಲಾಯಿತು.ಇದೇ ವೇಳೆ, ಮೈಸೂರು, ರಾಯಚೂರು,  ಕಲಬುರಗಿ, ಹುಬ್ಬಳ್ಳಿ, ಕೊಪ್ಪಳ ಸೇರಿದಂತೆ ರಾಜ್ಯದ ಇತರೆಡೆಯೂ ಪತ್ರಕರ್ತರು ಪ್ರತಿಭಟನೆ ನಡೆಸಿ, ಹತ್ಯೆ ಖಂಡಿಸಿದರು.

ದೇಶದ ಇತರೆಡೆಯೂ ಪ್ರತಿಭಟನೆ: ಗೌರಿ ಲಂಕೇಶ್‌ ಹತ್ಯೆ ಖಂಡಿಸಿ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು ದೆಹಲಿ, ಚೆನ್ನೈ, ಹೈದರಾಬಾದ್‌,ಭುವನೇಶ್ವರದಲ್ಲೂ ಪ್ರತಿಭಟನೆ ನಡೆಸಲಾಯಿತು.ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಕನಯ್ಯ ಕುಮಾರ್‌, ಸಿಪಿಐ-ಸಿಪಿಎಂ ಮುಖಂಡರು ಭಾಗವಹಿಸಿದ್ದರು.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.