ಪತ್ರಕರ್ತರಿಗೆ ಶಿಕ್ಷೆ: ವಿಧಾನಸಭೆ ಉದಾತ್ತವಾಗಿ ನಡೆದುಕೊಳ್ಳಲಿ..


Team Udayavani, Dec 1, 2017, 6:40 AM IST

High-court-Karnataka-New.jpg

ಬೆಂಗಳೂರು: ಹಕ್ಕುಚ್ಯುತಿ ಪ್ರಕರಣದಲ್ಲಿ ಪತ್ರಕರ್ತರಾದ ರವಿಬೆಳೆಗೆರೆ ಮತ್ತು ಅನಿಲ್‌ರಾಜ್‌ ಅವರಿಗೆ ವಿಧಿಸಿರುವ
ಶಿಕ್ಷೆಗೆ ಸಂಬಂಧಪಟ್ಟಂತೆ ವಿಧಾನ ಸಭಾಧ್ಯಕ್ಷರು ಸೇರಿ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲರೂ ಉದಾತ್ತ ಮನಸ್ಸಿನಿಂದ
ನಡೆದುಕೊಳ್ಳಬೇಕಿದೆ ಎಂದು ಹೈಕೋರ್ಟ್‌ ಮೌಖೀಕವಾಗಿ ಹೇಳಿತು.

ಹಕ್ಕುಚ್ಯುತಿ ಪ್ರಕರಣದಲ್ಲಿ ವಿಧಾನ ಸಭೆ ತಮಗೆ ವಿಧಿಸಿರುವ ಶಿಕ್ಷೆ ರದ್ದುಪಡಿಸುವಂತೆ ಕೋರಿ ಪತ್ರಕರ್ತರಾದ
ರವಿ ಬೆಳೆಗೆರೆ ಹಾಗೂ ಅನಿಲ್‌ ರಾಜ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎ.ಎಸ್‌.ಬೋಪಣ್ಣ ಅವರಿದ್ದ
ಏಕಸದಸ್ಯ ಪೀಠ ಈ ಅಭಿಪ್ರಾಯಪಟ್ಟಿತು.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿವಾದಿಗಳಾದ ವಿಧಾನಸಭೆ ಸ್ಪೀಕರ್‌ ಕೆ.ಬಿ.ಕೋಳಿವಾಡ, ವಿಧಾನಸಭೆ
ಹಕ್ಕು ಬಾಧ್ಯತೆಗಳ ಸಮಿತಿ ಮುಖ್ಯಸ್ಥರು, ಶಾಸಕರಾದ ಬಿ.ಎನ್‌.ನಾಗರಾಜ್‌ ಮತ್ತು ಎಸ್‌.ಆರ್‌.ವಿಶ್ವನಾಥ್‌ರಿಗೆ
ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿ ವಿಚಾರಣೆಯನ್ನು ಡಿ.6ಕ್ಕೆ ಮುಂದೂಡಿತು.

ಅದಕ್ಕೂ ಮುನ್ನ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ವಿಧಾನ ಸಭಾಧ್ಯಕ್ಷರು ಹಾಗೂ ವಿಧಾನಸಭೆ
ಹಕ್ಕು ಬಾಧ್ಯತೆಗಳ ಸಮಿತಿ ಮುಖ್ಯಸ್ಥರು ಅರ್ಜಿದಾರರಿಗೆ ಜೈಲು ಶಿಕ್ಷೆ ವಿಧಿಸಿ ನೀಡಿರುವ ತೀರ್ಪು ಸಂವಿಧಾನ
ಬಾಹಿರ. ಪ್ರಸ್ತುತ ಅವರಿಗೆ ಬಂಧನ ಭೀತಿಯಿದ್ದು, ಸ್ಪೀಕರ್‌ ಅವರ ಆದೇಶಕ್ಕೆ ತಡೆಯಾಜ್ಞೆ ನೀಡಬೇಕೆಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಏಕಸದಸ್ಯ ಪೀಠ, ಪ್ರಕರಣವು ನ್ಯಾಯಾಲಯದಲ್ಲಿದೆ. ಅರ್ಜಿದಾರರಿಗೆ ಶಿಕ್ಷೆ ವಿಧಿಸಿರುವ
ಕುರಿತು ಸಂವಿಧಾನದ ಅವಕಾಶಗಳನ್ನು ಸಮಗ್ರವಾಗಿ ಪರಿಶೀಲನೆ ನಡೆಸುವ ಅಗತ್ಯವಿದೆ. ವಾದ,ಪ್ರತಿವಾದಗಳನ್ನು ಆಲಿಸಿದ ಬಳಿಕ ನ್ಯಾಯಾಲಯ ನ್ಯಾಯಸಮ್ಮತ ತೀರ್ಮಾನ ಕೈಗೊಳ್ಳಲಿದೆ ಎಂದು ಅಭಿಪ್ರಾಯಪಟ್ಟಿತು.

ಏನಿದು ಪ್ರಕರಣ?: ಪತ್ರಕರ್ತ ರವಿ ಬೆಳಗೆರೆ ಅವರು ವಿಧಾನಸಭೆ ಸ್ಪೀಕರ್‌ ಕೆ.ಬಿ.ಕೋಳಿವಾಡ ಹಾಗೂ ಪತ್ರಕರ್ತ ಅನಿಲ್‌ ರಾಜ್‌ ಅವರು ಯಲಹಂಕ ಶಾಸಕ ಎಸ್‌.ಆರ್‌.ವಿಶ್ವನಾಥ್‌ ವಿರುದಟಛಿ ಮಾನಹಾನಿ ವರದಿ ಪ್ರಕಟಿಸಿದ್ದರೆಂಬ ಆರೋಪದ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು. ಇದರಿಂದ ವಿಧಾನಸಭೆ ಹಕ್ಕು ಬಾಧ್ಯತೆಗಳ ಸಮಿತಿ ವಿಚಾರಣೆ ನಡೆಸಿ ಈ ಇಬ್ಬರು ಪತ್ರಕರ್ತರಿಗೂ ತಲಾ ಒಂದು ವರ್ಷ ಜೈಲು ಹಾಗೂ 10 ಸಾವಿರ ರೂ. ದಂಡ ವಿಧಿಸಲು ಶಿಫಾರಸು ಮಾಡಿತ್ತು.

ಇದನ್ನು ವಿಧಾನಸಭೆ ಸ್ಪೀಕರ್‌ ಅನುಮೋದಿಸಿ 2017ರ ಜುಲೈ 21ರಂದು ಆದೇಶ ಹೊರಡಿಸಿದ್ದರು. ಈ ಆದೇಶದ
ಮರು ಪರಿಶೀಲನೆಗೆ ಕೋರಿದ್ದ ಅರ್ಜಿಯನ್ನು ನ.21ರಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಸ್ಪೀಕರ್‌ ತಿರಸ್ಕರಿಸಿ, ಶಿಕ್ಷೆ ವಿಧಿಸಿದ್ದ ಆದೇಶವನ್ನೇ ಕಾಯಂಗೊಳಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಪತ್ರಕರ್ತರಾದ ರವಿ ಬೆಳಗೆರೆ ಮತ್ತು ಅನಿಲ್ ರಾಜ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.