ಶೂನಲ್ಲಿ ಡ್ರಗ್ಸ್‌ ಇರಿಸಿ ಮಾರಾಟ: ಮೂವರ ಸೆರೆ


Team Udayavani, Dec 14, 2018, 11:24 AM IST

shoe-drug.jpg

ಬೆಂಗಳೂರು: ಪೊಲೀಸರ ಕಣ್ಣು ತಪ್ಪಿಸಲು ಶೂ ಮತ್ತು ಸಾಕ್ಸ್‌ಗಳಲ್ಲಿ ಮಾದಕ ವಸ್ತುಗಳನ್ನು ಬಚ್ಚಿಟ್ಟು ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು ಸೇರಿ ಮೂವರನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾದ ಜಾನ್‌ ಕೆನಡಿ (37), ಕಾಂಗೋ ದೇಶದ ಕೆನಾನ್‌ ಅಡ್ಲಿ (32) ಮತ್ತು ಕೇಶವನಗರದ ಆದಿತ್ಯ (22) ಬಂಧಿತರು.

ಮತ್ತೂಬ್ಬ ವಿದೇಶಿ  ಪ್ರಜೆ ನಾಪತ್ತೆಯಾಗಿದ್ದು, ಹುಡುಕಾಟ ನಡೆಯುತ್ತಿದೆ. ಬಂಧಿತರಿಂದ ನಕಲಿ ಪಾಸ್‌ಪೋರ್ಟ್‌ ಮತ್ತು ಒಂದು ಲಕ್ಷ ರೂ. ಮೌಲ್ಯದ 21.59 ಗ್ರಾಂ ತೂಕದ ಎಂಡಿಎಂಎ ಎಕ್ಸ್‌ಟಿಸಿ ಮಾತ್ರೆಗಳು ಮತ್ತು ಕ್ರಿಸ್ಟಿಲ್‌ಗ‌ಳನ್ನು ವಶಪಡಿಸಿಕೊಳ್ಳಲಾಗಿದೆ. ಕೋರಮಂಗಲದ 8ನೇ ಬ್ಲಾಕ್‌ನ ಅಂಬೇಡ್ಕರ್‌ ಪಾರ್ಕ್‌ ಬಳಿ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುವಾಗ ಆರೋಪಿಗಳನ್ನು ಮಾದಕ ವಸ್ತುಗಳ ಸಮೇತ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಇಬ್ಬರು ವಿದೇಶಿ ಪ್ರಜೆಗಳು ಕೆಲ ವರ್ಷಗಳ ಹಿಂದೆ ವಿದ್ಯಾರ್ಥಿ ವೀಸಾದಡಿ ಬೆಂಗಳೂರಿಗೆ ಬಂದಿದ್ದು, ಹೆಣ್ಣೂರಿನ ಮುದ್ದಣ್ಣ ಲೇಔಟ್‌ನಲ್ಲಿ ವಾಸವಾಗಿದ್ದರು. ಆದರೆ, ಆರೋಪಿ ಜಾನ್‌ ಕೆನಡಿ ಬಳಿ ಪತ್ತೆಯಾದ ಪಾಸ್‌ಪೋರ್ಟ್‌ ಮತ್ತು ವಿದ್ಯಾರ್ಥಿ ವೀಸಾ ನಕಲಿ ಎಂಬುದು ತಿಳಿದು ಬಂದಿದೆ. ಈ ಪಾಸ್‌ಪೋರ್ಟ್‌ ವಿದೇಶಿಯರ ನೋಂದಣಿ ಕಚೇರಿಯಲ್ಲಿ ನೊಂದಣಿಯಾಗಿಲ್ಲ.

ವೀಸಾ ನಂಬರ್‌ ಉಗಾಂಡ ಪ್ರಜೆಗೆ ಸೇರಿದ್ದಾಗಿದೆ. ಈ ಸಂಬಂಧ ಈ ಪಾಸ್‌ಪೋರ್ಟ್‌ ಅಸಲಿಯೋ? ನಕಲಿಯೋ ಎಂಬ ಬಗ್ಗೆ ಸ್ಪಷ್ಟನೆ ನೀಡುವಂತೆ ನೈಜೀರಿಯಾ ರಾಯಭಾರ ಕಚೇರಿಗೆ ಪತ್ರ ಬರೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಮತ್ತೂಬ್ಬ ಆರೋಪಿ ಕೆನಾನ್‌ ಅಡ್ಲಿ, 2012ರ ಮಾರ್ಚ್‌ನಲ್ಲಿ ನಗರಕ್ಕೆ ಬಂದಿದ್ದು, ವೀಸಾ ಅವಧಿ ಅದೇ ವರ್ಷ ಸೆಪ್ಟೆಂಬರ್‌ನಲ್ಲಿ ಮುಕ್ತಾಯವಾಗಿದೆ. ಆದರೂ ಆರೋಪಿ ಅಕ್ರಮವಾಗಿ ಕಳೆದ ಆರು ವರ್ಷಗಳಿಂದ ನಗರದಲ್ಲೇ ವಾಸವಾಗಿದ್ದಾನೆ. ಆರೋಪಿಗಳು ಖಾಸಗಿ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ.

ಆದರೆ, ಖಚಿತವಾಗಿಲ್ಲ. ಈ ಮಧ್ಯೆ ಜೀವನ ನಿರ್ವಹಣೆಗಾಗಿ ವಿದೇಶಗಳಿಂದ ಮಾದಕ ವಸ್ತುಗಳನ್ನು ತರಿಸಿ ನಗರದ ಕಾಲೇಜು ವಿದ್ಯಾರ್ಥಿಗಳು, ಸಾಪ್ಟ್ವೇರ್‌ ಇಂಜಿನಿಯರ್‌ಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.

ಮೂರನೇ ಆರೋಪಿ ಆದಿತ್ಯ ನಗರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಬಂಧಿತ ಇಬ್ಬರು ವಿದೇಶಿ ಪ್ರಜೆಗಳಿಂದ ಎಂಡಿಎಂ ಎಕ್ಸಿಟೆಸಿ ಮಾತ್ರೆಗಳು ಹಾಗೂ ಕ್ರಿಸ್ಟೆಲ್‌ಗ‌ಳನ್ನು ಖರೀದಿಸಿ ತನಗೆ ಪರಿಚಯವಿರುವ ವಿದ್ಯಾರ್ಥಿಗಳು ಹಾಗೂ ಇತರರಿಗೆ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು.

ಶೂ ಮತ್ತು ಸಾಕ್ಸ್‌ಗಳಲ್ಲಿ ಸಾಗಾಟ: ಇಬ್ಬರು ವಿದೇಶಿ ಪ್ರಜೆಗಳು ಪೊಲೀಸರ ಕಣ್ಣು ತಪ್ಪಿಸಲು ತಾವು ಧರಿಸುತ್ತಿದ್ದ ಶೂ ಮತ್ತು ಸಾಕ್ಸ್‌ಗಳಲ್ಲಿ ಮಾದಕ ವಸ್ತುಗಳನ್ನು ಇಟ್ಟುಕೊಂಡು ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು. ಅಲ್ಲದೆ, ಆರೋಪಿ ಆದಿತ್ಯನಿಗೂ ಸಹ ಇದೇ ಮಾರ್ಗದ ಮೂಲಕ ಮಾದಕ ವಸ್ತು ಸರಬರಾಜು ಮಾಡುತ್ತಿದ್ದರು. ಬಳಿಕ ಈತ ಸಣ್ಣ-ಸಣ್ಣ ಪ್ಯಾಕೆಟ್‌ಗಳನ್ನಾಗಿ ಮಾಡಿ ಪ್ರತಿ ಗ್ರಾಂ 2 ರಿಂದ 3 ಸಾವಿರ ರೂ.ಗೆ ಬೇರೆಡೆ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.