ಕ್ವಾರೆಂಟೈನ್ : ಕಸ ಸಂಗ್ರಹಣೆಗೆ ಏಜೆನ್ಸಿ
Team Udayavani, Apr 4, 2020, 12:18 PM IST
ಬೆಂಗಳೂರು: ಕೋವಿಡ್ 19 ಸೋಂಕು ಹರಡುವ ಭೀತಿ ಇರುವ ಹಿನ್ನೆಲೆಯಲ್ಲಿ ಹಾಗೂ ಮುಂಜಾಗ್ರತಾ ಕ್ರಮವಾಗಿ ಹೋಮ್ ಕ್ವಾರೆಂಟೈನ್ಗೆ ಒಳಪಡಿಸಿದವರ ಮನೆಗಳಿಂದ ಕಸ ಸಂಗ್ರಹಿಸುವುದಕ್ಕೆ ಮತ್ತು ವಿಲೇವಾರಿಗೆ ಬಿಬಿಎಂಪಿ ಪ್ರತ್ಯೇಕ ಏಜನ್ಸಿಗಳನ್ನು ನೇಮಿಸಿದೆ.
ಪೌರಕಾರ್ಮಿಕರ ಸುರಕ್ಷತೆ ಹಾಗೂ ಹೋಮ್ ಕ್ವಾರೆಂಟೈನ್ ಮನೆ ಗಳ ತ್ಯಾಜ್ಯ ಸಂಗ್ರಹಿಸುವ ಕುರಿತು ರಾಜ್ಯ ಹೈಕೋರ್ಟ್ ಮಾ.30 ರಂದು ನೀಡಿದ ಆದೇಶದ ಅನ್ವಯ ನಿರ್ದಿಷ್ಟ ಕ್ರಮ ಕೈಗೊಂಡಿದ್ದು, ಪಾಲಿಕೆ ವ್ಯಾಪ್ತಿಯಲ್ಲಿರುವ ಆಸ್ಪತ್ರೆ, ಕ್ಲಿನಿಕ್ ಗಳಲ್ಲಿ ಉತ್ಪತ್ತಿಯಾಗುವ ಬಯೋ ಮೆಡಿಕಲ್ ತ್ಯಾಜ್ಯ ಸಂಗ್ರಹಿಸಲು ಮತ್ತು ವಿಲೇವಾರಿ ಮಾಡಲು ತಲಾ ಎರಡು ವಲಯಕ್ಕೆ ಒಂದರಂತೆ ಎಂಟು ವಲಯಗಳಿಗೆ ನಾಲ್ಕು ಏಜನ್ಸಿ ನೇಮಿಸಿ ಬಿಬಿಎಂಪಿಯ ಜಂಟಿ ಆಯುಕ್ತ ಸಫìರಾಜ ಖಾನ್ ಆದೇಶ ಹೊರಡಿಸಿದ್ದಾರೆ.
ಅನುಸರಿಸಬೇಕಾದ ಕ್ರಮಗಳು :
- ಕೆಲಸ ಆರಂಭಿಸುವ ಮುನ್ನ ಪ್ರತಿ ನಿತ್ಯ ಪೌರಕಾರ್ಮಿಕರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಬೇಕು. ಈ ಬಗ್ಗೆ ಸೂಕ್ರ ಕ್ರಮ ಕೈಗೊಳ್ಳುವಂತೆ ವಿಭಾಗದ ಎಲ್ಲ ಸಹಾಯಕ ಎಂಜಿನಿಯರ್ ಗಳಿಗೆ, ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
- ಬಯೋ ಮೆಡಿಕಲ್ ತ್ಯಾಜ್ಯ ಸಂಗ್ರಹಿಸುವ ಪೌರಕಾರ್ಮಿಕರಿಗೆ ವೈಯಕ್ತಿಕ ರಕ್ಷಣಾ ಕಿಟ್ ನೀಡಬೇಕು.
- ಬಯೋ ಮೆಡಿಕಲ್ ತ್ಯಾಜ್ಯ ಸಂಗ್ರಹಿಸುವ ಪೌರಕಾರ್ಮಿಕರಿಗೆ ಪ್ರತಿನಿತ್ಯ ಹೊಸ ವೈಯಕ್ತಿಕ ರಕ್ಷಣಾ ಕಿಟ್ ನೀಡಬೇಕು.
- ಕಿಟ್ನಲ್ಲಿ ಮೂರು ಪದರದ ಮಾಸ್ಕ್, ಹ್ಯಾಂಡ್ ಗ್ಲೌಜ್, ಕನ್ನಡಕ, ಗೌನ್ ಪರಿಕರ ನೀಡಬೇಕು.
- ಪೌರಕಾರ್ಮಿಕರು ಬಳಸಿದ ರಕ್ಷಣಾ ಪರಿಕರಗಳನ್ನು ಸಂಗ್ರಹಿಸಿ ಬಯೋ ತ್ಯಾಜ್ಯ ಎಂದು ಪರಿಗಣಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು.
- ಪೌರಕಾರ್ಮಿಕರಿಗೆ ಅನಾರೋಗ್ಯ ಉಂಟಾದರೆ ಕೂಡಲೇ ಚಿಕಿತ್ಸೆ ಕೊಡಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ