
ಕಪ್ಪಾಗಿದ್ದೀಯಾ, ಸುಂದರವಾಗಿಲ್ಲವೆಂದು ನಿಂದನೆ: ಸ್ಯಾನಿಟೈಸರ್ ಸುರಿದುಕೊಂಡು ಗೃಹಿಣಿ ಸಾವು
Team Udayavani, May 12, 2022, 9:43 AM IST

ಬೆಂಗಳೂರು: ನೋಡಲು ಸುಂದರವಾಗಿಲ್ಲ. ಕಪ್ಪಾಗಿದಿಯಾ ಎಂದೆಲ್ಲ ಪತಿಯ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬರು ಮೈಮೇಲೆ ಸ್ಯಾನಿಟೈಸರ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆರ್.ಟಿ.ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆರ್ಟಿ ನಗರದ ಮಠದ ಹಳ್ಳಿಯ ನಿವಾಸಿ ಶಾಜಿಯಾ ಬಾನು ಮೃತ ಮಹಿಳೆ.
ಆಕೆಯ ಪತಿ ಇಮ್ರಾನ್ ವಿರುದ್ಧ ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ 8 ವರ್ಷಗಳ ಹಿಂದೆ ಇಮ್ರಾನ್ ಹಾಗೂ ಶಾಜಿಯಾ ವಿವಾಹವಾಗಿ ಆರ್.ಟಿ.ನಗರದಲ್ಲಿ ವಾಸವಾಗಿದ್ದರು. ದಂಪತಿಗೆ ಮೂವರು ಮಕ್ಕಳಿದ್ದಾರೆ.
ಇತ್ತೀಚೆಗೆ ಕೌಟುಂಬಿಕ ವಿಚಾರಕ್ಕೆ ಪತ್ನಿಯ ಜತೆಗೆ ಜಗಳ ಮಾಡುತ್ತಿದ್ದ ಇಮ್ರಾನ್, ನೀನು ಕಪ್ಪಾಗಿದ್ದೀಯಾ, ಸುಂದರವಾಗಿಲ್ಲ ಎಂದು ಕಿರುಕುಳ ಕೊಡುತ್ತಿದ್ದ. ಅದಕ್ಕೆ ಇಮ್ರಾನ್ ತಾಯಿ ಕೂಡ ಪುತ್ರನಿಗೆ ಸಹಕಾರ ನೀಡುತ್ತಿದ್ದರು. ಇತ್ತ ಪತಿಯ ಕಿರುಕುಳದಿಂದ ನೊಂದ ಶಾಜಿಯಾ ಏ.20ರಂದು ಮನೆಯಲ್ಲಿದ್ದ ಸ್ಯಾನಿಟೈಸರ್ನ್ನು ಮೈ ಮೇಲೆ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದರು. ಪತಿ ಹಾಗೂ ಕುಟುಂಬ ಸ್ಥರು ಕೂಡಲೇ ಶಾಜಿಯಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಮಂಗಳವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಶಾಜಿಯಾ ಮೃತ ಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.
ಇದನ್ನೂ ಓದಿ:ಹರ್ಷ ಹತ್ಯೆ ಆರೋಪಿಗಳಿಗೆ 180 ದಿನ ನ್ಯಾಯಾಂಗ ಬಂಧನ
“ನೋಡಲು ಚೆನ್ನಾಗಿಲ್ಲ, ಕಪ್ಪಾಗಿದ್ದಾಳೆ’ ಎಂದು ಆಕೆಯ ಪತಿ ಹಾಗೂ ಅತ್ತೆ ನಿಂದಿಸಿ ಹಿಂಸೆ, ಕಿರುಕುಳ ಕೊಡುತ್ತಿದ್ದರು. ಹೀಗಾಗಿ ಆಕೆಯ ಸಾವಿಗೆ ಪತಿ ಇಮ್ರಾನ್ ಹಾಗೂ ಆತನ ತಾಯಿಯೇ ಕಾರಣ ಎಂದು ಮೃತ ಶಾಜಿಯಾ ಪೋಷಕರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ದೇಶದ ಆರ್ಥಿಕ ಅಭಿವೃದ್ದಿಗೆ ಪೂರಕವಾದ ಬಜೆಟ್:ಗೃಹ ಸಚಿವ ಆರಗ ಜ್ಞಾನೇಂದ್ರ

‘ಮಿತ್ರ್ ಕಾಲ್’ ಬಜೆಟ್ ನಲ್ಲಿ ಭಾರತದ ಭವಿಷ್ಯವಿಲ್ಲ: ಪ್ರಧಾನಿಗೆ ರಾಹುಲ್ ಗಾಂಧಿ ಟಾಂಗ್

ಹಡಪದ ಸಮಾಜ ಕುಲಶಾಸ್ತ್ರ ಅಧ್ಯಯನ,ನಿಗಮ ಸ್ಥಾಪನೆಗೆ ಕ್ರಮ: ಸಿಎಂ ಬೊಮ್ಮಾಯಿ

ಮೊಮ್ಮಗನಿಂದಾಗಿ ಮನೆಯಿಂದ ಹೊರಬಿದ್ದ ಅಜ್ಜಿಯನ್ನು ಮತ್ತೆ ಮನೆಗೆ ಸೇರಿಸಿದ ಮಧುಗಿರಿ ನ್ಯಾಯಾಲಯ

ದೇವರದಾಸಿಮಯ್ಯ ಹಟಗಾರ ಜಗದ್ಗುರುಗಳ ಸಂಭ್ರಮದ ಪುರಪ್ರವೇಶ