ಪಾಲಿಕೆ ವ್ಯಾಪ್ತಿಯ 110 ಹಳ್ಳಿಗಳಿಗೆ ಶೀಘ್ರ ಕಾವೇರಿ ನೀರು


Team Udayavani, Feb 17, 2017, 12:24 PM IST

110-villege-cauvery-water.jpg

ಕೆ.ಆರ್‌.ಪುರ: ಬೆಂಗಳೂರು ಮಹಾನಗರ ಪಾಲಿಕೆಯ ಎಂಟು ವಲಯಗಳಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ ಕಲ್ಪಿಸುವ 1800 ಕೋಟಿ ವೆಚ್ಚದ ಯೋಜನೆಗೆ ಶೀಘ‌ವೇ ಚಾಲನೆ ನೀಡಲಾಗುವುದು ಎಂದು ಬೆಂಗಳೂರು ನಗರ ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದ್ದಾರೆ. 

ಹೊರಮಾವು ಜಂಕ್ಷನ್‌ ಬಳಿ ಒಂದು ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎರಡು ಕೀಮೀ ವಿಸ್ತೀರ್ಣವುಳ್ಳ ಬುಲೇವಾರ್ಡ್‌ ಉದ್ಯಾನವನವನ್ನು ಉದ್ಘಾಟಿಸಿದ ಅವರು, “ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ 110ಹಳ್ಳಿ ಗಳು ಸೇರ್ಪಡೆಗೊಂಡಿವೆ. ಈ ಹಳ್ಳಿಗಳಿಗೆ ಕಾವೇರಿ ನೀರನ್ನು ಕಲ್ಪಿಸಲು ಯೋಜನೆಯ ರೂಪುರೇಷೆಗಳು ಸಿದ್ಧಗೊಂಡಿವೆ. ಈ ಯೋಜನೆಗೆ ಅತೀ ಶೀಘ್ರದಲ್ಲಿ ಚಾಲನೆ ನೀಡಲಾಗುವುದು,” ಎಂದರು.  

“ಬೆಂಗಳೂರನ್ನು ಅಭಿವೃದ್ಧಿ ಪಡಿಸುವಲ್ಲಿ ನಿಟ್ಟಿನಲ್ಲಿ ಉತ್ತಮ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುತ್ತಿದ್ದರೂ ಒಳ್ಳೆ ಹೆಸರು ಬರುತ್ತಿಲ್ಲ. ಬಿಡಿಎ ಮೇಲೆ ಭ್ರಷ್ಟಾಚಾರ, ಹಗರಣಗಳ ಅರೋಪವನ್ನು ಹೊರಸಿ ಸದಾ ಟೀಕಿಸಲಾಗುತ್ತಿದೆ. ಬೆಂಗಳೂರು ಅಭಿವೃದ್ಧಿಗೆ ಬಿಡಿಎ ಅಪಾರ ಕೊಡುಗೆ ನೀಡುತ್ತಿದ್ದರೂ ಕೆಲವೊಂದಿಷ್ಟು ಜನ ಬಿಡಿಎಯನ್ನು ಟೀಕಿಸುತ್ತಲೇ ಇದ್ದಾರೆ. ಬಿಡಿಎಯನ್ನು ದೂಷಿಸುವುದನ್ನು ಜನ ಬಿಡಬೇಕು,” ಎಂದು ಹೇಳಿದರು.
 
“ಸಿದ್ದರಾಮಯ್ಯ ನೇತೃತ್ವದ ಸರ್ಕಾರ  ಬೆಂಗಳೂರು ಅಭಿವೃದ್ಧಿಗೆ 7,300ಕೋಟಿ ರೂ ಅನುದಾನ ನೀಡಿದೆ. ಇಷ್ಟು ದೊಡ್ಡ ಮೊತ್ತದ ಅನುದಾನ ಹಿಂದೆ ಆಡಳಿತ ನಡೆಸಿದ ಯಾವ ಸರ್ಕಾರಗಳಿಂದ ಸಿಕ್ಕಿಲ್ಲ. ನಮ್ಮದು ನುಡಿದಂತೆ ನಡೆಯುವ ಸರ್ಕಾರ. ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನತೆ ನೀಡಿದ ಹಲವು  ಭರವಸೆ ಈಡೇರುಸುತ್ತ ಬಂದಿದ್ದು, ಜನಪರ ಕಾಳಜಿಯುಳ್ಳ ಯೋಜನೆಗಳನ್ನು ಕೈಗೊಳ್ಳುತ್ತಿದೆ. ಇನ್ನುಳಿದ ಸಮಯದಲ್ಲಿ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೆ ತರಲು ಕ್ರಮ ಕೈಗೊಳ್ಳಲಾಗುವುದು,” ಎಂದು ಹೇಳಿದರು.

ಬಿಡಿಎ ದೂಷಿಸುವುದು ಬಿಡಿ: ನಂತರ ಮಾತನಾಡಿದ ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಕೆ.ವೆಂಕಟೇಶ್‌,  “ವಿಶಾಲವಾಗಿ ಬೆಳೆಯುತ್ತಿರುವ ಬೆಂಗಳೂರಿನಲ್ಲಿ 1.30ಕೋಟಿ ಜನಸಂಖ್ಯೆ ಇದೆ.  ವಲಸೆ ಬರುವವರು ಲಕ್ಷಾಂತರ ಮಂದಿಯಿದ್ದಾರೆ. ಇದನ್ನು ಗಮನದಲ್ಲಿರಿಸಿಕೊಂಡು ಬಿಡಿಎ ಬೆಂಗಳೂರಿನ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಲಕ್ಷಾಂತರ ಜನಕ್ಕೆ ಉಪಯೋಗಕ್ಕೆ ಒಂದು ಅಭಿವೃದ್ದಿ ಕೈಗೊಂಡಾಗ 100ಜನಕ್ಕೆ ತೊಂದರೆಯಾಗುವುದು ಸಹಜ ಇದರಲ್ಲಿ ಎರಡು ಮಾತಿಲ್ಲ. ಅದರೆ, ಸಣ್ಣ ಸಮಸ್ಯೆಗಳನ್ನೇ ಅಸ್ತ್ರವನ್ನಾಗಿ ಮಾಡಿಕೊಳ್ಳುವ ವಿರೋಧ ಪಕ್ಷಗಳು ದೂಷಣೆ ಮಾಡುವುದು ಸರಿಯಲ್ಲ,” ಎಂದರು. 

ಮೆಟ್ರೋ ಮೊದಲ ಹಂತ ಏಪ್ರಿಲ್‌ಗೆ ಪೂರ್ಣ 
“ನಮ್ಮ ಮೆಟ್ರೋ ಸೇವೆಯನ್ನು 2 ಲಕ್ಷ ಜನ ಬಳಸುತ್ತಿದ್ದಾರೆ. ಏಪ್ರಿಲ್‌ ತಿಂಗಳಿಗೆ ಮೊದಲನೆ ಹಂತದ ಮೆಟ್ರೋ ಕಾಮಗಾರಿ ಮುಗಿಯಲಿದ್ದು, ಪ್ರಯಾಣಿಕರ ಸಂಖ್ಯೆ 5ಲಕ್ಷಕ್ಕೆ ಏರಲಿದೆ. ಮುಂದಿನ ಹಂತದಲ್ಲಿ ಮೆಟ್ರೋ ಸೇವೆಯನ್ನು ನಾಗವಾರದಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದವರೆಗೂ ವಿಸ್ತರಿಸಲಾಗುತ್ತದೆ,”ಎಂದು ಸಚಿವ ಜಾರ್ಜ್‌ ತಿಳಿಸಿದ್ದಾರೆ. 

12 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ 
ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಕೈಗೆತ್ತಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಗುರುವಾರ ಚಾಲನೆ ನೀಡಿದರು. 12 ಕೋಟಿ ವೆಚ್ಚದಲ್ಲಿ ಎಚ್‌ಬಿಆರ್‌ ಲೇಔಟ್‌ನಲ್ಲಿ ಕೈಗೆತ್ತಿಕೊಂಡ ರಸ್ತೆ ಮತ್ತು ಫ‌ುಟ್‌ಪಾತ್‌ ದುರಸ್ತಿ ಸೇರಿದಂತೆ ಸಿವಿಲ್‌ ಕಾಮಗಾರಿಗಳು, 13 ಕೋಟಿ ವೆಚ್ಚದಲ್ಲಿ ನಾಗವಾರದಲ್ಲಿ ಕೈಗೆತ್ತಿಕೊಂಡ ಸಿವಿಲ್‌ ಕಾಮಗಾರಿಗಳಿಗೆ ಸಚಿವ ಜಾರ್ಜ್‌ ಅವರು ಚಾಲನೆ ನೀಡಿದ್ದಾರೆ. 

ಟಾಪ್ ನ್ಯೂಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.