ಮತ್ತೆ 10,611 ಪದವೀಧರ ಶಿಕ್ಷಕರ ಹುದ್ದೆಗೆ ಶೀಘ್ರ ಅಧಿಸೂಚನೆ


Team Udayavani, Jan 31, 2019, 12:30 AM IST

govt.jpg

ಬೆಂಗಳೂರು : ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಭರ್ತಿಯಾಗದೇ ಉಳಿದಿರುವ ಹುದ್ದೆಗಳು ಹಾಗೂ ಸರ್ಕಾರ ಹೊಸ ನೇಮಕಾತಿಗೆ ಅನುಮತಿ ನೀಡಿರುವ ಹುದ್ದೆಗಳ ಸಹಿತವಾಗಿ 10,611 ಶಿಕ್ಷಕರನ್ನು ಪ್ರಾಥಮಿಕ ಶಾಲೆಗೆ ನೇಮಿಸಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಅತಿ ಶೀಘ್ರದಲ್ಲಿ ಅಧಿಸೂಚನೆ ಹೊರಡಿಸಲಿದೆ.

ಹೊಸ ನೇಮಕಾತಿ ಪ್ರಕ್ರಿಯೆಗೆ ಲಭ್ಯವಿರುವ 10,611 ಪದವೀಧರ ಶಿಕ್ಷಕರಹುದ್ದೆಯಲ್ಲಿ ಹೈದರಾಬಾದ್‌ ಕರ್ನಾಟಕದ 6 ಜಿಲ್ಲೆಗಳ 5 ಸಾವಿರ ಹುದ್ದೆ ಹಾಗೂ ಉಳಿದ 24 ಜಿಲ್ಲೆಗಳ 5611 ಹುದ್ದೆಗಳು ಸೇರಿಕೊಂಡಿವೆ.

2017-18ನೇ ಸಾಲಿನಲ್ಲಿ 6ರಿಂದ 8ನೇ ತರಗತಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದ ಹುದ್ದೆಗಳನ್ನು ಶಾಲೆಗಳಿಗೆ
ಹಂಚಿಕೆ ಮಾಡುವ ಸಂದರ್ಭದಲ್ಲಿ ಅನುಸರಿಸಿರುವ ವಿಧಾನವನ್ನೇ ಈ ನೇಮಕಾತಿ ಪ್ರಕ್ರಿಯೆಯಲ್ಲೂ ಅನುಸರಿಸಲಾಗುತ್ತದೆ. ಶಾಲಾವಾರು, ವಿಷಯವಾರು ಹುದ್ದೆ ಹಂಚಿಕೆ ಬಗ್ಗೆ ಇಲಾಖೆಯಿಂದ ಈಗಾಗಲೇ ವಿವರವಾದ ಮಾರ್ಗಸೂಚಿಯನ್ನು ಜಿಲ್ಲಾ ಉಪನಿರ್ದೇಶಕರಿಗೆ ನೀಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ ವಿಭಾಗದ ನಿರ್ದೇಶಕ ಎಸ್‌.ಜಯಕುಮಾರ್‌ ಖಚಿತಪಡಿಸಿದರು.

ಸರ್ಕಾರಿ ಪ್ರಾಥಮಿಕ ಶಾಲೆಯ 6ರಿಂದ 8ನೇ ತರಗತಿಯಲ್ಲಿ ಖಾಲಿಯಿದ್ದ 10 ಸಾವಿರ ಪದವೀಧರ ಶಿಕ್ಷಕರ ಹುದ್ದೆಗೆ 2017ನೇ ಸಾಲಿನಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಸ್ಪರ್ಧಾತ್ಮಕ ಪರೀಕ್ಷೆ, ಫ‌ಲಿತಾಂಶ ಪ್ರಕಟ, ಸಂದರ್ಶನ ಹಾಗೂ ಅಂತಿಮ ಆಯ್ಕೆ ಪ್ರಕ್ರಿಯೆ ಇತ್ತೀಚಿಗಷ್ಟೆ ಪೂರ್ಣಗೊಂಡಿದೆ.

ಲಭ್ಯವಿದ್ದ 10 ಸಾವಿರ ಹುದ್ದೆಗಳಲ್ಲಿ ಕೇವಲ 3389 ಹುದ್ದೆಗಳನ್ನಷ್ಟೇ ಭರ್ತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಸಕ್ತವಾಗಿತ್ತು. 6611 ಹುದ್ದೆಗಳು ಭರ್ತಿಯಾಗದೇ ಹಾಗೆ ಉಳಿದಿದೆ.

ರಾಜ್ಯ ಸರ್ಕಾರ ಪ್ರಸಕ್ತ ಸಾಲಿನಲ್ಲಿ ನಾಲ್ಕು ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಈಗಾಗಲೇ ಘೋಷಣೆ ಮಾಡಿದೆ. 2017ರ ಅಧಿಸೂಚನೆಯಂತೆ ಭರ್ತಿಯಾಗದೇ ಉಳಿದಿರುವ 6611 ಪದವೀಧರ ಶಿಕ್ಷಕರ ಹುದ್ದೆಯ ಜತೆಗೆ ಹೊಸದಾಗಿ ಅನುಮೋದನೆ ಸಿಕ್ಕಿರುವ 4 ಸಾವಿರ ಹುದ್ದೆಗಳನ್ನು ಸೇರಿಸಿಕೊಂಡು 10611 ಹುದ್ದೆಗಳನ್ನು ಪ್ರಸಕ್ತ ಸಾಲಿನಲ್ಲಿ ಭರ್ತಿ ಮಾಡಲು ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದೆ.

ಜಿಲ್ಲಾ ಉಪನಿರ್ದೇಶಕರಿಂದ ಮಾಹಿತಿ:
ಭರ್ತಿಯಾಗದೇ ಉಳಿದಿರುವ 6611 ಪದವೀಧರ ಶಿಕ್ಷಕರ ಹುದ್ದೆ ಹಾಗೂ ಹೊಸದಾಗಿ ಅನುಮೋದನೆ ಸಿಕ್ಕಿರುವ 4 ಸಾವಿರ ಹುದ್ದೆ ಸಹಿತವಾಗಿ 10611 ಪದವೀಧರ ಶಿಕ್ಷಕರ ಹುದ್ದೆಯ ಸಂಬಂಧ ಎಲ್ಲ ಜಿಲ್ಲೆಗಳಿಂದಲೂ  ಜಿಲ್ಲಾ ಉಪನಿರ್ದೇಶಕರ ಮೂಲಕ ಇಲಾಖೆ ಮಾಹಿತಿ ಪಡೆಯಲಾಗುತ್ತಿದೆ. ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ ಒಟ್ಟಾರೆ ಲಭ್ಯಪಡಿಸಬೇಕಾದ ಪದವೀಧರ ಪ್ರಾಥಮಿಕ ಶಾಲಾ ವೃಂದದ ಶಿಕ್ಷಕರ ಸಂಖ್ಯೆಯ ಸೂಚಿಯನ್ನು ಆಧರಿಸಿ ಕಾರ್ಯನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರನ್ನು (ಟಿಜಿಟಿ ಸೇರಿ)ಪರಿಗಣಿಸಿ, ಕೊರತೆ ಇರುವ ಶಿಕ್ಷಕರ ಸಂಖ್ಯೆಯನ್ನು ನೀಡುವಂತೆ ಡಿಡಿಪಿಐಗಳಿಗೆ ಸೂಚಿಸಲಾಗಿದೆ ಎಂದು ಜಯಕುಮಾರ್‌ ತಿಳಿಸಿದ್ದಾರೆ.

ಫೆ.1ರೊಳಗೆ ಮಾಹಿತಿ ನೀಡಲು ಸೂಚನೆ
1ರಿಂದ 5ನೇ ತರಗತಿಯಲ್ಲಿ ಮಂಜೂರಾಗಿರುವ ಶಿಕ್ಷಕರ ಹುದ್ದೆಗಿಂತ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಸಂಖ್ಯೆ ಹೆಚ್ಚಿರುವುದೂ ಇಲಾಖೆಯ ಗಮನಕ್ಕೆ ಬಂದಿದೆ. ಗಣಿತ, ವಿಜ್ಞಾನ, ಸಮಾಜ ಪಾಠ ಹಾಗೂ ಆಂಗ್ಲ ಭಾಷಾ ಶಿಕ್ಷಕರ ನೇಮಕಕ್ಕೆ ಸಂಬಂಧಿಸಿದಂತೆ ಫೆ.1ರೊಳಗೆ ಜಿಲ್ಲಾವಾರು ಮಾಹಿತಿಯನ್ನು ಉಪನಿರ್ದೇಶಕರು ನೀಡಬೇಕು. ಹುದ್ದೆಗಳಲ್ಲಿ ವ್ಯತ್ಯಾಸ ಪ್ರಸ್ತಾಪಿಸಿದಲ್ಲಿ ಅದಕ್ಕೆ ಸೂಕ್ತ ವಿವರಣೆ ನೀಡಿ, ಮಾಹಿತಿ ಒದಗಿಸಬೇಕು. ಇದಕ್ಕೆ ಉಪನಿರ್ದೇಶಕರೇ ಸಂಪೂರ್ಣ ಹೊಣೆಯಾಗಿರುತ್ತಾರೆ ಎಂದೂ ಇಲಾಖೆ ಎಚ್ಚರಿಕೆ ನೀಡಿದೆ.

ವಿಳಂಬಕ್ಕೆ ಅವಕಾಶ ಇಲ್ಲ :
2017ರ ಅಧಿಸೂಚನೆಯಂತೆ ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಒಂದುವರೆ ವರ್ಷದ ನಂತರ ಪೂರ್ಣಗೊಂಡಿದೆ. ಇಷ್ಟುವಿಳಂಬವಾಗಿದ್ದರೂ ಶೇ.50ರಷ್ಟು ಹುದ್ದೆ ಭರ್ತಿ ಮಾಡಿಕೊಳ್ಳಲು ಇಲಾಖೆಗೆ ಸಾಧ್ಯವಾಗಿಲ್ಲ. ಫ‌ಲಿತಾಂಶ ಘೋಷಣೆ, ಅಂಕಪಟ್ಟಿ, 1:3ರ ಅನುಪಾತದ ಪಟ್ಟಿ ಸೇರಿದಂತೆ ಅನೇಕ ಗೊಂದಲದಿಂದ ವಿಳಂಬವಾಗಿತ್ತು. ಹೊಸದಾಗಿ ನಡೆಯಲಿರುವ ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬವಾಗದಂತೆ ನಿಗಾವಹಿಸಲು ಡಿಡಿಪಿಐಗಳಿಗೆ ಮಾರ್ಗದರ್ಶನ ಇಲಾಖೆಯಿಂದ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.