ಜಾಹೀರಾತು ಪ್ರದರ್ಶನಕ್ಕೆ ಶೀಘ್ರ ಅನುಮತಿ?


Team Udayavani, Feb 8, 2023, 3:03 PM IST

tdy-15

ಬೆಂಗಳೂರು: ನಗರದಲ್ಲಿ ಅನಧಿಕೃತ ಜಾಹೀರಾತಿಗೆ ಕಡಿವಾಣ ಹಾಕಲು ಜಾಹೀರಾತು ಬೈಲಾಕ್ಕೆ ತಿದ್ದುಪಡಿ ತರಲು ಬಿಬಿಎಂಪಿ ಚಿಂತನೆ ನಡೆಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಬಳಿಯೂ ಚರ್ಚಿಸಲಾಗಿದ್ದು, ಶೀಘ್ರದಲ್ಲಿ ಈ ಕುರಿತು ಅನುಮತಿ ದೊರೆಯುವ ಸಾಧ್ಯತೆಗಳಿವೆ. ನಗರದ ಸೌಂದರ್ಯ ಮತ್ತು ಪರಿಸರ ಹಾಳು ಮಾಡುತ್ತಿರುವ ಜಾಹೀರಾತು ಪ್ರದರ್ಶನವನ್ನು ನಿಷೇಧಿಸಲಾಗಿದೆ.

ಹೈಕೋರ್ಟ್‌ ಆದೇಶ ಹಾಗೂ ಬಿಬಿಎಂಪಿ ಕೌನ್ಸಿಲ್‌ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಕೆಲ ಸಂದರ್ಭಗಳನ್ನು ಹೊರತು ಪಡಿಸಿ ಜಾಹೀರಾತು ಪ್ರದರ್ಶನ ಸಂಪೂರ್ಣ ನಿಷೇಧಿಸಲಾಗಿದೆ. ಆದರೂ, ರಾಜಕೀಯ ಪಕ್ಷಗಳು ಸೇರಿ ಖಾಸಗಿಯವರು ಎಲ್ಲೆಂದರಲ್ಲಿ ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳನ್ನು ಅಳವಡಿಸಿ ಬಿಬಿಎಂಪಿ ನಿಯಮ ಹಾಗೂ ಹೈಕೋರ್ಟ್‌ ಆದೇಶ ಉಲ್ಲಂಘಿಸುತ್ತಿದ್ದಾರೆ. ಹೀಗೆ ಅಳವಡಿಸಲಾಗುತ್ತಿರುವ ಅನಧಿಕೃತ ಫ್ಲೆಕ್ಸ್‌ ತೆರವಿನಿಂದಾಗಿ ಬಿಬಿಎಂಪಿಗೆ ಹೆಚ್ಚುವರಿ ಕೆಲಸದ ಜತೆಗೆ ಖರ್ಚು ಹೆಚ್ಚುವಂತಾಗಿದೆ. ಈ ಸಮಸ್ಯೆ ನಿವಾರಿಸುವ ಸಲುವಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಆಯ್ದ ಭಾಗಗಳಲ್ಲಿ ಜಾಹೀರಾತು ಪ್ರದರ್ಶನಕ್ಕೆ ಅನುಮತಿ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ.

ನಿಯಮಕ್ಕೆ ಅನುಮತಿಸಲು ಜನಪ್ರತಿನಿಧಿಗಳ ಒತ್ತಡ: ನಗರದಲ್ಲಿ ಜಾಹೀರಾತು ಅಳವಡಿಕೆ, ಯಾವ ಪ್ರದೇಶದಲ್ಲಿ ಅದಕ್ಕೆ ಅವಕಾಶ ನೀಡಬೇಕು, ದರ ಎಷ್ಟು ನಿಗದಿ ಮಾಡಬೇಕು ಎಂಬುದು ಸೇರಿ ಇನ್ನಿತರ ವಿಷಯಗಳನ್ನಾಧರಿಸಿ 2019ರಲ್ಲಿಯೇ ಜಾಹೀರಾತು ನಿಯಮ ರೂಪಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ.

ಈ ನಿಯಮಕ್ಕೆ ಸಂಬಂಧಿಸಿದ ಕಡತವನ್ನು ಪರಿಶೀಲಿಸಿರುವ ನಗರಾಭಿವೃದ್ಧಿ ಇಲಾಖೆ 2021ರ ಡಿಸೆಂಬರ್‌ನಲ್ಲಿ ಮುಖ್ಯಮಂತ್ರಿಗಳ ಕಚೇರಿಗೆ ಸಲ್ಲಿಸಲಾಗಿದೆ. ಆದರೆ, ಈವರೆಗೆ ಮುಖ್ಯಮಂತ್ರಿಗಳಿಂದ ನೂತನ ಬಿಬಿಎಂಪಿ ಜಾಹೀರಾತು ನಿಯಮ 2019ಕ್ಕೆ ಅನುಮತಿ ದೊರೆತಿಲ್ಲ. ಇದೀಗ ಜಾಹೀರಾತು ನಿಯಮ ಅಳವಡಿಕೆಗೆ ಅನುಮತಿ ನೀಡುವಂತೆ ಬೆಂಗಳೂರಿನ ಕೆಲ ಶಾಸಕರು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ.

ಸದ್ಯ ಪಿಪಿಪಿಗೆ ಮಾತ್ರ ಅನುಮತಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಸದ್ಯ ವಾರ್ತಾ ಇಲಾಖೆ ಅಳವಡಿಸಿರುವ ಬೃಹತ್‌ ಹೋರ್ಡಿಂಗ್ಸ್‌ಗಳಲ್ಲಿ ಸರ್ಕಾರದ ಕಾರ್ಯಕ್ರಮಗಳ ಜಾಹೀರಾತನ್ನು ಮಾತ್ರ ಪ್ರದರ್ಶಿಸಲಾಗುತ್ತಿದೆ. ಅದನ್ನು ಹೊರತು ಪಡಿಸಿದರೆ ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವ ಶೌಚಾಲಯ, ಪಾದಚಾರಿ ಮೇಲ್ಸೇತುವೆ, ಬಸ್‌ ನಿಲುಗಡೆ ಸ್ಥಳ ಸೇರಿ ಇನ್ನಿತರ ನಿರ್ಮಾಣದಲ್ಲಿ ಜಾಹೀರಾತು ಪ್ರದರ್ಶನಕ್ಕೆ ಅನುಮತಿಸಲಾಗುತ್ತಿದೆ. ಅದನ್ನು ಹೊರತುಪಡಿಸಿ ದರೆ ಖಾಸಗಿಯವರು ಹೋರ್ಡಿಂಗ್ಸ್‌ಗಳನ್ನು ಅಳವಡಿಸುವುದು, ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳ ಪ್ರದರ್ಶನಕ್ಕೆ ಅನುಮತಿಯಿಲ್ಲ.

ನೂತನ ಕ್ರಮದಿಂದ ಆದಾಯ: ಸಾರ್ವಜನಿಕ ಸ್ಥಳದಲ್ಲಿ ಜಾಹೀರಾತು ಪ್ರದರ್ಶನಕ್ಕೆ ಖಾಸಗಿಯವರಿಗೆ ಅನುಮತಿಸುವುದರಿಂದ ಬಿಬಿಎಂಪಿಯ ಆದಾಯ ವೃದ್ಧಿಯಾಗಲಿದೆ. ಈ ಹಿಂದೆ ಜಾಹೀರಾತು ಪ್ರದರ್ಶನ ನಿಷೇಧಿಸುವವರೆಗೆ ಬಿಬಿಎಂಪಿಗೆ ವಾರ್ಷಿಕ 40ರಿಂದ 50 ಕೋಟಿ ರೂ. ಮಾತ್ರ ಆದಾಯ ಬರುತ್ತಿತ್ತು. ಅದಕ್ಕೆ ಪ್ರಮುಖ ಕಾರಣ ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ 8 ಸಾವಿರಕ್ಕೂ ಹೆಚ್ಚಿನ ಜಾಹೀರಾತು ಹೋರ್ಡಿಂಗ್ಸ್‌ಗಳಲ್ಲಿ ಶೇ. 50 ಅಕ್ರಮ ಹಾಗೂ ಬಿಬಿಎಂಪಿಯಲ್ಲಿ ನೋಂದಣಿ ಮಾಡಿಕೊಳ್ಳದೇ ಇರುವಂತಹದ್ದಾಗಿದ್ದವು. ಆದರೆ, ಬಿಬಿಎಂಪಿ ಜಾಹೀರಾತು ನಿಯಮ 2019 ಜಾರಿಯ ನಂತರ ಬಿಬಿಎಂಪಿಗೆ 200ರಿಂದ 300 ಕೋಟಿ ರೂ. ಆದಾಯ ಬರುವ ನಿರೀಕ್ಷೆ ಹೊಂದಲಾಗಿದೆ.

ಹೋರ್ಡಿಂಗ್ಸ್‌ಗಳಿಗೆ ಪ್ರತ್ಯೇಕ ಸಂಖ್ಯೆ ನಿಗದಿ : ಈ ಹಿಂದೆಯೇ ರೂಪಿಸಲಾಗಿರುವ ಬಿಬಿಎಂಪಿ ಜಾಹೀರಾತು ನಿಯಮ 2019ಕ್ಕೆ ಅನುಮತಿ ದೊರೆತ ನಂತರ ಬಿಬಿಎಂಪಿ ಕಂದಾಯ ವಿಭಾಗ ಜಾಹೀರಾತು ಪ್ರದರ್ಶನದ ಸ್ಥಳಗಳನ್ನು ನಿಗದಿ ಮಾಡಲಿದೆ. ಅಲ್ಲದೆ, ಪ್ರತಿ ಜಾಹೀರಾತು ಹೋರ್ಡಿಂಗ್‌ಗೂ ಪ್ರತ್ಯೇಕ ಆರ್‌ಎಫ್ಐಡಿ ಸಂಖ್ಯೆಯನ್ನು ನೀಡಲಿದೆ. ಹಾಗೆಯೇ, ಪ್ರತಿ ಹೋರ್ಡಿಂಗ್‌ನ್ನು ಜಿಪಿಎಸ್‌ ಮ್ಯಾಪಿಂಗ್‌ ಮಾಡಲಾಗುತ್ತದೆ. ಅದರಿಂದ ಜಾಹೀರಾತು ಹೋರ್ಡಿಂಗ್‌ನ ಲೆಕ್ಕ ಸಮರ್ಪಕವಾಗಿಟ್ಟುಕೊಳ್ಳಲು, ಅದನ್ನು ಹರಾಜಿನ ಮೂಲಕ ಜಾಹೀರಾತು ಪ್ರದರ್ಶಕರಿಗೆ ನೀಡಲು ಅನುಕೂಲವಾಗಲಿದೆ. ಈ ಎಲ್ಲದರ ಬಗ್ಗೆಯೂ ನಿಯಮದಲ್ಲಿ ಉಲ್ಲೇಖೀಸಲಾಗಿದೆ.

ಮಾಸಿಕ 10 ಪ್ರಕರಣ : ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್‌ ಮತ್ತು ಬ್ಯಾನರ್‌ ಅಳವಡಿಸುವವರ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಅದರಂತೆ ಪ್ರತಿ ವಲಯದಲ್ಲಿ ಅನಧಿಕೃತ ಜಾಹೀರಾತು ಪ್ರದರ್ಶಕರ ವಿರುದ್ಧ ಮಾಸಿಕ ಕನಿಷ್ಠ 10 ಪ್ರಕರಣ ದಾಖಲಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಜಾಹೀರಾತು ಪ್ರದರ್ಶನಕ್ಕೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿವೆ. ಈಗಾಗಲೇ ಸಿದ್ಧಪಡಿಸಲಾಗಿರುವ ಬಿಬಿಎಂಪಿ ಜಾಹೀರಾತು ನಿಯಮ 2019ರಲ್ಲಿ ಎಲ್ಲ ಅಂಶಗಳಿದ್ದು, ಮುಖ್ಯಮಂತ್ರಿಗಳ ಒಪ್ಪಿಗೆ ನಂತರ ಅದನ್ನು ಜಾರಿ ಮಾಡಲಾಗುವುದು. ಅದರಿಂದ ಬಿಬಿಎಂಪಿಗೆ ಆದಾಯವೂ ಬರಲಿದೆ.  -ತುಷಾರ್‌ ಗಿರಿನಾಥ್‌, ಬಿಬಿಎಂಪಿ ಮುಖ್ಯ ಆಯುಕ್ತ

-ಗಿರೀಶ್‌ ಗರಗ

ಟಾಪ್ ನ್ಯೂಸ್

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

1-manipal-station

ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಐವರು ವಿದ್ಯಾರ್ಥಿಗಳು ವಶಕ್ಕೆ

tdy-2

ಕನಸಿನಲ್ಲಿ ʼಶ್ರೀಕೃಷ್ಣʼ ದೇವರನ್ನು ಕಂಡು ನಿದ್ದೆಯಿಂದ ಎಚ್ಚೆದ್ದ ಸಚಿವ.!

Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್

Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್

TDY-22

ಸ್ಟಾರ್ಟ್‌ಅಪ್‌ ಕನಸು ಹೊತ್ತವರ ಚಿತ್ರ: ಮೇಡ್ ಇನ್ ಬೆಂಗಳೂರು

TDY-1

ಆನ್ಲೈನ್‌ ನಲ್ಲಿ ವಿದ್ಯುತ್‌ ಬಿಲ್‌ ಕಟ್ಟಲು ಹೋಗಿ 7 ಲಕ್ಷ ರೂ. ಕಳೆದುಕೊಂಡ ಮಹಿಳೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsd-asd

ಬೆಂಗಳೂರು: ಮೊದಲ ಪತ್ನಿ ಕೊಂದು 2ನೇ ಪತಿಯ ಮಗು ಹತ್ಯೆಗೂ ಯತ್ನ!

arrested

ವ್ಯಾಪಾರಿಯ 80 ಲಕ್ಷ ರೂ. ದರೋಡೆ: 8 ಮಂದಿ ಬಂಧನ

rape

ಬೆಂಗಳೂರು: ದೂರು ನೀಡಲು ಬಂದ ಯುವತಿಗೆ ಲೈಂಗಿಕ ಕ್ರಿಯೆಗೆ ಇನ್‌ಸ್ಪೆಕ್ಟರ್‌ ಒತ್ತಾಯ !

ಅನಧಿಕೃತ ನಿರ್ಮಾಣ ಕ್ರಮಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಹಿಂದೇಟು

ಅನಧಿಕೃತ ನಿರ್ಮಾಣ ಕ್ರಮಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಹಿಂದೇಟು

tdy-7

ಮಹಿಳೆ ಜತೆ ಅಸಭ್ಯ ನಡೆ: ರೈಲ್ವೆ ಟಿಟಿಇ ಬಂಧನ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

1-manipal-station

ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಐವರು ವಿದ್ಯಾರ್ಥಿಗಳು ವಶಕ್ಕೆ

tdy-2

ಕನಸಿನಲ್ಲಿ ʼಶ್ರೀಕೃಷ್ಣʼ ದೇವರನ್ನು ಕಂಡು ನಿದ್ದೆಯಿಂದ ಎಚ್ಚೆದ್ದ ಸಚಿವ.!

Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್

Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.