ಪದವಿಪೂರ್ವ ಇಲಾಖೆಯ ಉಪನ್ಯಾಸಕ‌ರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ಸುರೇಶ್ ಕುಮಾರ್


Team Udayavani, Nov 20, 2020, 5:04 PM IST

suresh-kumar

ಬೆಂಗಳೂರು: ಪದವಿಪೂರ್ವ ಶಿಕ್ಷಣ‌ ಇಲಾಖೆಯಲ್ಲಿ ನೇರ‌ ನೇಮಕಾತಿಗೆ ಲಭ್ಯವಿರುವ ಸುಮಾರು ಒಂದು ಸಾವಿರ ಹುದ್ದೆಗಳನ್ನು ತುಂಬಲು‌ ಮುಂದಿನ ಆರು ತಿಂಗಳ‌ ಅವಧಿಯಲ್ಲಿ ಕ್ರಮ ವಹಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಹೇಳಿದ್ದಾರೆ.

ಮುಖ್ಯಮಂತ್ರಿಗಳ‌ ಅಧ್ಯಕ್ಷತೆಯಲ್ಲಿ‌ ಪದವಿಪೂರ್ವ ಶಿಕ್ಷಣ‌ ಇಲಾಖೆಗೆ ಹೊಸದಾಗಿ ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಸಾಂಕೇತಿಕ ನೇಮಕಾತಿ ಆದೇಶ ವಿತರಣಾ‌ ಕಾರ್ಯಕ್ರಮದಲ್ಲಿ‌  ಮಾತನಾಡಿದ ಸಚಿವರು ಇಷ್ಟರಲ್ಲಿಯೇ ಖಾಲಿಯಿರುವ ಎಲ್ಲ ಬೋಧಕ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗುವುದೆಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ವಿವಿಧ ವಿಷಯಗಳ 1194 ಉಪನ್ಯಾಸಕ ಅಭ್ಯರ್ಥಿಗಳನ್ನು  ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆಯ್ಕೆ ಮಾಡಿದೆ. ಅವರಲ್ಲಿ 1161 ಮಂದಿ ಈಗಾಗಲೇ ಸ್ಥಳ ನಿಯುಕ್ತಿ ಮಾಡಿಕೊಂಡಿದ್ದಾರೆ.  1203 ಉಪನ್ಯಾಸಕರ ಆಯ್ಕೆಗೆ 2015ರಿಂದ ಪ್ರಕ್ರಿಯೆ ಶುರುವಾಗಿತ್ತು. ಆದರೆ ಅದು ಅರ್ಜಿ ಕರೆದುದರ ಹೊರತಾಗಿ ಮುಂದೆ ಹೋಗಿರಲಿಲ್ಲ. 2019ರಲ್ಲಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಈ ಪ್ರಕ್ರಿಯೆಗೆ ವೇಗ ದೊರಕಿತು.

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಪ್ರಕ್ರಿಯೆಗೆ ವೇಗ ದೊರಕಿತು. ಉಪನ್ಯಾಸಕರ ಆಯ್ಕೆ ಪೂರ್ಣಗೊಂಡು ಸ್ಥಳ ನಿಯುಕ್ತಿ ಮಾಡಿ ಇಂದು ಆದೇಶ ನೀಡುತ್ತಿದ್ದೇವೆ. ಈ ಕೆಲಸ ಇನ್ನೂ ಆರು ತಿಂಗಳ  ಮೊದಲೇ ನಡೆಯಬೇಕಿತ್ತು. ಆದರೆ ಕೋವಿಡ್-19 ಪ್ರಸರಣದಿಂದಾಗಿ ಲಾಕ್‍ಡೌನ್ ಹಿನ್ನೆಲೆ ಹಾಗೂ ಶಾಲಾ ಕಾಲೇಜುಗಳು ಪುನರಾರಂಭವಾಗುವುದರ ಅನಿಶ್ಚಿತ ವಾತಾವರಣದ ಹಿನ್ನೆಲೆಯಲ್ಲಿ ಈಗ ಇದಕ್ಕೆ ಮಹೂರ್ತ ನಿಗದಿಯಾಗಿದೆ. ನಾನು ಇಲಾಖೆಯ ಸಚಿವರಾದ ಮಾರನೇ ದಿನವೇ ಈ ಕುರಿತು ಅಧಿಕಾರಿಗಳ ಸಭೆ ನಡೆಸಿದೆ. ಸಚಿವನಾಗಿ ನಾನು ಕೈಗೆತ್ತಿಕೊಂಡ ಮೊದಲ ಕೆಲಸ ಇದು ಎಂದು ಹೇಳಲು ನನಗೆ ಹೆಮ್ಮೆಯಾಗುತ್ತದೆ ಎಂದು‌ ಸಚಿವ ಸುರೇಶ್‌ಕುಮಾರ್‌‌ ಹೇಳಿದರು.

ಇದನ್ನೂ ಓದಿ: ಲಾಕ್‌ಡೌನ್‌ ಬಳಿಕ ಹೊಸ ಚಿತ್ರದತ್ತ ಸೆಂಚುರಿ ಸ್ಟಾರ್ : ‌ಶಿವಪ್ಪನಾದ ಶಿವಣ್ಣ

ಕಾಲೇಜುಗಳು ಆರಂಭವಾದ ದಿನದಿಂದ ನೇಮಕಾತಿ ಆದೇಶ ಜಾರಿಗೆ ಬರಲಿದ್ದು, ಅದಕ್ಕೂ ಮೊದಲು ನೂತನ ಉಪನ್ಯಾಸಕರಿಗೆ ಇಲಾಖೆಯ ನಿಯಮಗಳು, ಆಡಳಿತ, ವೃಂದ ಮತ್ತು ನೇಮಕಾತಿ ನಿಯಮಗಳು, ಉಪನ್ಯಾಸಕರ ವೃತ್ತಿ ಧರ್ಮ, ವೃತ್ತಿ ಗೌರವ ಸೇರಿದಂತೆ ಪ್ರೇರಣಾದಾಯಕ ತರಭೇತಿ ಕಾರ್ಯಾಗಾರವನ್ನು ಜಿಲ್ಲೆಗಳಲ್ಲಿ ಇಲ್ಲವೇ ವಿಭಾಗಗಳಲ್ಲಿ ನೀಡಲಾಗುವುದು ಎಂದ ಸಚಿವ ಸುರೇಶ್‌ಕುಮಾರ್,  ರಾಜ್ಯದಲ್ಲಿ  ಇರುವ 1231 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 12, 857 ಉಪನ್ಯಾಸಕ ಹುದ್ದೆಗಳು ಮಂಜೂರಾಗಿವೆ. ಇದರಲ್ಲಿ 10370 ಉಪನ್ಯಾಸಕರ ಸ್ಥಾನಗಳು ಭರ್ತಿಯಾಗಿದ್ದು, 2487 ಹುದ್ದೆಗಳು ಖಾಲಿಯಾಗಿವೆ. ಈ ಖಾಲಿಯಾದ ಹುದ್ದೆಗಳಿಗೆ ಈಗ ನೇಮಕ ಮಾಡಿರುವ 1196 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇದರ ಹೊರತಾಗಿಯೂ ಉಳಿಯುವ ಖಾಲಿ ಹುದ್ದೆಗಳ ಶೀಘ್ರ ಭರ್ತಿಗೆ ಸರ್ಕಾರ ಕ್ರಿಯಾ  ಯೋಜನೆ ರೂಪಿಸುತ್ತಿದೆ. ಮುಂದಿನ ಆರು ತಿಂಗಳ ಅವಧಿಯಲ್ಲಿ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ಸರ್ಕಾರಿ, ಅನುದಾನಿತ, ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಒಟ್ಟು 12,22,273 ವಿದ್ಯಾರ್ಥಿಗಳ ಹಿತದೃಷ್ಟಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ:  ಸ್ನೇಹಿತನೊಂದಿಗೆ ವಾಟ್ಸಾಪ್ ಚಾಟ್ ಮಾಡಿದ್ದಕ್ಕೆ ತಂಗಿಗೆ ಗುಂಡು ಹಾರಿಸಿದ ಅಣ್ಣ !

ನೂತನ‌ ಉಪನ್ಯಾಸಕರಿಗೆ ಕಿವಿಮಾತು ಹೇಳಿದ ಸಚಿವ ಸುರೇಶ್‌ಕುಮಾರ್, ನಮ್ಮ ಸರ್ಕಾರ ಅತ್ಯಂತ ಪಾರದರ್ಶಕ ವಾಗಿ  ಭ್ರಷ್ಟಾಚಾರಕ್ಕೆ‌‌ ಎಡೆ ಮಾಡದೇ ನೇಮಕಾತಿ ಆದೇಶಗಳನ್ನು ನೀಡಿದ್ದು, ಮಕ್ಕಳ ಭವಿಷ್ಯವನ್ನು ಕಾಪಾಡುವ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕವಾಗಿ ನಿರ್ವಹಿಸಬೇಕೆಂದು ಹೇಳಿದರು.

ಕೋವಿಡ್ ತಂದೊಡ್ಡಿದ ಎಲ್ಲ ಆರ್ಥಿಕ ಸಂಕಷ್ಟದ ಸಮಯದಲ್ಲೂ ನೇಮಕಾತಿ ಆದೇಶಗಳನ್ನು ನೀಡಲಾಗಿದ್ದು ಎಲ್ಲ ಉಪನ್ಯಾಸಕರು ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕೆಂದು ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪನವರು ಕರೆ ನೀಡಿದರು.

ಇದನ್ನೂ ಓದಿ:  ಮನೆಯೇ ಸ್ವರ್ಗ: ಮಾನಸಿಕ ಪ್ರತಿರಕ್ಷಣಾ ಗುಣ ಬೆಳೆಸಿಕೊಳ್ಳುವುದು ಹೇಗೆ?

ಶಿಕ್ಷಣ ಇಲಾಖೆಯ ಪ್ರಧಾನ‌ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಪದವಿಪೂರ್ವ ಶಿಕ್ಷಣ‌ ನಿರ್ದೇಶಕಿ ದೀಪಾ‌ಚೋಳನ್ ಸೇರಿದಂತೆ ಹಿರಿಯ ಅಧಿಕಾರಿಗಳು‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.