ಸದ್ದಿಲ್ಲದೇ ಸಿಎಂ ಸ್ಮಾರ್ಟ್‌ ಪ್ರಚಾರ;ಮುಂದಿನ ಚುನಾವಣೆಗೆ ತಯಾರಿ


Team Udayavani, Apr 28, 2017, 3:45 AM IST

170427kpn89.jpg

 ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಬದಲಾಗಿದ್ದಾರೆ. ಸಾಮಾಜಿಕ ಜಾಲತಾಣದಿಂದ ತುಸು ದೂರವೇ ಉಳಿದಿದ್ದ ಅವರು, ಇತ್ತೀಚಿನ ದಿನಗಳಲ್ಲಿ ಪರಿಣಾಮಕಾರಿಯಾಗಿ ಜಾಲತಾಣಗಳನ್ನು ಬಳಸಿಕೊಂಡು ಸರ್ಕಾರದ ಸಾಧನೆ ಹೇಳುವ ಮೂಲಕ ತಮ್ಮ ವರ್ಚಸ್ಸು ವೃದ್ಧಿಸಿಕೊಳ್ಳುತ್ತಿದ್ದಾರೆ.

ಜನರನ್ನು ತಲುಪಲು ಬೇರೆಲ್ಲಾ ಮಾರ್ಗಗಳಿಗಿಂತ ಸಾಮಾಜಿಕ ಜಾಲತಾಣಗಳ ಮಾರ್ಗ ಬಹು ಸುಲಭ. ಇಲ್ಲಿ ಕ್ರಿಯೆ ಮತ್ತು ಪ್ರತಿಕ್ರಿಯೆಗೂ ಅವಕಾಶ ಸಿಗುವುದರಿಂದ ಅಭಿಮಾನಿಗಳ ಸೃಷ್ಟಿ ಕೂಡ ಸರಳ. ಹೀಗಾಗಿಯೇ 2018ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿರುವ ಅವರು, ಸಾಮಾಜಿಕ ಜಾಲತಾಣಗಳನ್ನೇ ಪ್ರಮುಖ ಅಸ್ತ್ರವನ್ನಾಗಿ ಬಳಸಲು ಸಜ್ಜಾಗಿದ್ದಾರೆ.

ಸಿದ್ದರಾಮಯ್ಯ ಅವರು ಸರ್ಕಾರದ ಪ್ರಮುಖ ಘೋಷಣೆಗಳು, ತೆಗೆದುಕೊಂಡ ನಿರ್ಧಾರಗಳು. ಭಾಗಿಯಾದ ಕಾರ್ಯಕ್ರಮಗಳ ವಿವರ ಮತ್ತು ಫೋಟೋಗಳನ್ನು ಕ್ಷಣಾರ್ಧದಲ್ಲಿಯೇ ಅಪ್‌ಲೋಡ್‌ ಮಾಡುತ್ತಿದ್ದಾರೆ. ಆಡಳಿತಾತ್ಮಕ ವಿಚಾರಗಳಷ್ಟೇ ಅಲ್ಲದೆ ಸಾಮಾಜಿಕ, ಮನರಂಜನೆ ಸೇರಿದಂತೆ ಸಮಾಜದ ದೈನಂದಿನ ಘಟನೆಗಳು ಹಾಗೂ ಸಂದರ್ಭಗಳಿಗೆ ತತಕ್ಷಣ ಸ್ಪಂದಿಸಿ ಪ್ರತಿಕ್ರಿಯಿಸುವ ಮೂಲಕ ಸಕ್ರಿಯರಾಗಿದ್ದಾರೆ.

ಬಜೆಟ್‌ ಪ್ರಸಾರ
ಕಳೆದ ತಿಂಗಳು ಬಜೆಟ್‌ ಮಂಡನೆ ವೇಳೆ ಮುಖ್ಯಮಂತ್ರಿಗಳ ಟ್ವಿಟರ್‌ ಖಾತೆಯಿಂದ ನಿರಂತರವಾಗಿ ಟ್ವೀಟ್‌ಗಳು ಪ್ರಕಟವಾಗಿದ್ದವು. ಮಾ.15ರ ಬಜೆಟ್‌ ಮಂಡನೆಯ ದಿನ ಬೆಳಗ್ಗೆ 8.25ಕ್ಕೆ ಮುಖ್ಯಮಂತ್ರಿಗಳು ಮಾಡಿದ ಮೊದಲ ಟ್ವೀಟ್‌ ಹೀಗಿತ್ತು- ಆಯವ್ಯಯವನ್ನು ಮಂಡಿಸಲು ಹೊರಟಿರುವ ಈ ಹೊತ್ತಿನಲ್ಲಿ ನಾಡಿನ ಸಮಗ್ರ ಅಭಿವೃದ್ಧಿಯ ಚಿತ್ರವೊಂದೇ ಕಣ್ಣ ಮುಂದೆ. ಎರಡನೇ ಟ್ವೀಟ್‌- ನಾಡಿನ ಸಮಗ್ರ ವಿಕಾಸಕ್ಕೆ ಕಾರಣವಾಗುವಂಥ 12 ಬಜೆಟ್‌ಗಳನ್ನು ಮಂಡಿಸುವ ಸಾರ್ಥಕ ಅವಕಾಶ ನೀಡಿದ ರಾಜ್ಯದ ಜನತೆಯನ್ನು ನೆನೆಯುತ್ತ ಜನಪರ ಬಜೆಟ್‌ ಮಂಡನೆಗೆ ಹೊರಟಿದ್ದೇನೆ… ಹೀಗೆ ಒಟ್ಟು 63 ಟ್ವೀಟ್‌ಗಳನ್ನು ಮಾಡಿದ್ದು, ವೀಕ್ಷಿಸಿದವರ ಸಂಖ್ಯೆ 1.25 ಕೋಟಿ ಮೀರಿದೆ. ಇದು ಈವರೆಗಿನ ಅತಿ ಹೆಚ್ಚಿನ ಸ್ಪಂದನೆ ಎನಿಸಿದೆ. ಬಹುತೇಕ ಟ್ವೀಟ್‌ಗಳು ನೂರಾರು ಬಾರಿ ರೀಟ್ವೀಟ್‌ ಆಗಿದ್ದರೆ, ಪ್ರತಿಯೊಂದಕ್ಕೂ 100ರಿಂದ 200ಕ್ಕೂ ಹೆಚ್ಚು ಲೈಕ್‌ಗಳು ಬಂದಿವೆ.

ಇತ್ತೀಚೆಗೆ ನಡೆದ ಎರಡು ಉಪಚುನಾವಣೆಗಳಲ್ಲೂ ಮುಖ್ಯಮಂತ್ರಿಗಳು ಸಾಮಾಜಿಕ ಜಾಲತಾಣವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡಿದ್ದರು. ಪ್ರತಿದಿನದ ರ್ಯಾಲಿ, ಪಾದಯಾತ್ರೆ, ಬಹಿರಂಗ ಸಭೆ ಬಗ್ಗೆ ನೀಡುತ್ತಿದ್ದ ಮಾಹಿತಿಯು ಹೆಚ್ಚು ಜನ ಜಮಾವಣೆಯಾಗಲು ಅನುಕೂಲವಾಯಿತು.

ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣ ಬಳಸಿ ವರ್ಚಸ್ಸು ಹೆಚ್ಚಿಸಿಕೊಂಡ ನಂತರ ಸಿದ್ದರಾಮಯ್ಯ ಅವರ ಆಪ್ತ ವಲಯ ಕೂಡ ಅಂತದ್ದೊಂದು ವ್ಯವಸ್ಥೆ ಬೇಕು ಎಂದು ಪ್ರತಿಪಾದಿಸಿತ್ತು. ಆ ಬಳಿಕ ಟ್ವಿಟರ್‌, ಫೇಸ್‌ಬುಕ್‌, “ಯುಟ್ಯೂಬ್‌’ಗಳಲ್ಲಿ ಸಂದೇಶ, ಮಾಹಿತಿ ನೀಡುವಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ.

ನಿತ್ಯ ಸರಾಸರಿ ನಾಲ್ಕಾರು ಟ್ವೀಟ್‌
ಮುಖ್ಯಮಂತ್ರಿಗಳು ಸರ್ಕಾರದ ಪ್ರಮುಖ ಆದೇಶ, ನಿರ್ಧಾರ ಮಾತ್ರವಲ್ಲದೇ ಜಯಂತಿ, ದಿನಾಚರಣೆ, ಹಬ್ಬ ಹರಿದಿನಗಳಿಗೆ ಶುಭಾಷಯ ಹಾಗೂ ಸಾಂದರ್ಭಿಕ ಘಟನೆಗಳಿಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ನಿತ್ಯ ಸರಾಸರಿ ನಾಲ್ಕಾರು ಟ್ವೀಟ್‌ ಮಾಡುತ್ತಿದ್ದಾರೆ. ಸರ್ಕಾರದ ಪ್ರಮುಖ ನಿರ್ಧಾರ, ಮಹತ್ವದ ಹೆಜ್ಜೆಗಳ ಬಗ್ಗೆಯೂ ಟ್ವಿಟರ್‌ನಲ್ಲಿ ಸಂದೇಶ ನೀಡಿ ಮಾಹಿತಿ ದಾಟಿಸುತ್ತಿದ್ದಾರೆ. ಆ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಲಕ್ಷಕ್ಕೂ ಹೆಚ್ಚು ಹಿಂಬಾಲಕ (ಫಾಲೋವರ್) ವೃಂದವನ್ನು ಸೃಷ್ಟಿಸಿಕೊಂಡಿದ್ದಾರೆ.

ನಿರ್ವಹಣೆಗೆ ಪ್ರತ್ಯೇಕ ಸುಸಜ್ಜಿತ ತಂಡ
ಸಾಮಾಜಿಕ ಜಾಲ ತಾಣ ನಿರ್ವಹಣೆಗಾಗಿಯೇ ಮುಖ್ಯಮಂತ್ರಿಯವರ ಸಚಿವಾಲಯದಲ್ಲಿ ಪ್ರತ್ಯೇಕ ತಂಡವಿದ್ದು, ಎಂಟರಿಂದ ಹತ್ತು ಮಂದಿ ಇದರ ಉಸ್ತುವಾರಿ ವಹಿಸಿದ್ದಾರೆ. ಐಎಎಸ್‌ ಅಧಿಕಾರಿ ಎಲ್‌.ಕೆ.ಅತೀಕ್‌ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಯಾಗಿ ನಿಯೋಜನೆಗೊಂಡ ಬಳಿಕ ಪರಿಣಾಮಕಾರಿಯಾಗಿ ಬಳಕೆಯಾಗುತ್ತಿದೆ. ಈ ತಂಡವು ಮುಖ್ಯಮಂತ್ರಿಗಳು ಪ್ರಕಟಿಸುವ ಘೋಷಣೆ, ಯೋಜನೆ ಇಲ್ಲವೇ ಹೇಳಿಕೆಗೆ ಪೂರಕವಾದ ಛಾಯಾಚಿತ್ರ, ಸೂಕ್ತವೆನಿಸಿದರೆ ಕ್ಯಾರಿಕೇಚರ್‌, ಅಂಕಿಅಂಶಗಳನ್ನು ಗ್ರಾಫಿಕ್ಸ್‌ಸಹಿತ ಆಕರ್ಷಕವಾಗಿ ವಿನ್ಯಾಸಗೊಳಿಸಿ ಪ್ರಕಟಿಸುತ್ತದೆ. ಸಾಂದರ್ಭಿಕ ಕಾರ್ಯಕ್ರಮ, ಜಯಂತಿ, ದಿನಾಚರಣೆ ಸಂದರ್ಭದಲ್ಲೂ ಸೂಕ್ತ ಚಿತ್ರಗಳೊಂದಿಗೆ ಮುಖ್ಯಮಂತ್ರಿಗಳ ಸಂದೇಶದ ಮಾಹಿತಿ ಪ್ರಸಾರ ಮಾಡುತ್ತವೆ.

ಸಾಮಾಜಿಕ ಜಾಲತಾಣಗಳ ಬಳಕೆ ಮಾತ್ರವಲ್ಲದೆ, ಡಿಜಿಟಲ್‌ ತಂತ್ರಜ್ಞಾನದ ಬಳಕೆಗೂ ಮುಖ್ಯಮಂತ್ರಿಗಳು ಹೆಚ್ಚಿನ ಗಮನ ನೀಡುತ್ತಿದ್ದಾರೆ. ಅದರಂತೆ ಇತ್ತೀಚೆಗೆ ಆರಂಭಿಸಿರುವ ಸಿಎಂ ಡ್ಯಾಶ್‌ಬೋರ್ಡ್‌ “ಪ್ರತಿಬಿಂಬ’ದಲ್ಲಿ ಸರ್ಕಾರದ ಯೋಜನೆಗಳ ಸಮಗ್ರ ಚಿತ್ರಣ ಸಿಗಲಿದೆ. ದೃಶ್ಯ ಮಾಧ್ಯಮಕ್ಕೆ ಮುಖ್ಯಮಂತ್ರಿಗಳು ನೇರ ಸಂದರ್ಶನ ನೀಡಲು ಅನುಕೂಲವಾಗುವಂತೆ ಗೃಹ ಕಚೇರಿ “ಕೃಷ್ಣಾ’ದಲ್ಲಿ ಸುಮಾರು 60 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಸ್ಟುಡಿಯೋ ನಿರ್ಮಾಣವಾಗಿದೆ. ಕೃಷ್ಣಾದ ಬಲಭಾಗದ ಕಟ್ಟಡವನ್ನು ಆಧುನಿಕ ವಿನ್ಯಾಸದಡಿ ನವೀಕರಿಸಿ ಸ್ಟುಡಿಯೋ ನಿರ್ಮಿಸಲಾಗಿದೆ.

ಅತಿ ಹೆಚ್ಚು ಫಾಲೋವರ್ ಹೊಂದಿದ ಟಾಪ್‌ 5 ಸಚಿವರು
* ಕೃಷ್ಣ ಬೈರೇಗೌಡ- 17,000 ಫಾಲೋವರ್
* ತನ್ವೀರ್‌ ಸೇs…- 12,000 ಫಾಲೋವರ್
* ಪ್ರಿಯಾಂಕ್‌ ಖರ್ಗೆ- 11,000 ಫಾಲೋವರ್
* ಡಿ.ಕೆ.ಶಿವಕುಮಾರ್‌- 9,248 ಫಾಲೋವರ್
* ಎಂ.ಬಿ.ಪಾಟೀಲ್‌- 7027 ಫಾಲೋವರ್

ಮುಖ್ಯಾಂಶಗಳು
ಮುಖ್ಯಮಂತ್ರಿಗಳ ಅಧಿಕೃತ ಟ್ವಿಟರ್‌ ಖಾತೆ ಫಾಲೋವರ್- 1.13 ಲಕ್ಷ

ಮುಖ್ಯಮಂತ್ರಿಗಳ ಡ್ಯಾಶ್‌ಬೋರ್ಡ್‌ “ಪ್ರತಿಬಿಂಬ’ ವೀಕ್ಷಿಸಿದವರ ಸಂಖ್ಯೆ- 22.51 ಲಕ್ಷ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ಫೇಸ್‌ಬುಕ್‌ ಖಾತೆ ಫಾಲೋವರ್- 2.56 ಲಕ್ಷ

– ಎಂ.ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.