ತೃತೀಯ ಲಿಂಗಿಗಳ ಸಂಕಷ್ಟ ಪರಿಹರಿಸಲು ಸರ್ಕಾರ ಸಿದ್ಧ: ಕಂದಾಯ ಸಚಿವ ಆರ್. ಅಶೋಕ್
Team Udayavani, Nov 2, 2022, 4:51 PM IST
ಬೆಂಗಳೂರು : ತೃತೀಯ ಲಿಂಗಿಗಳ ಅಭ್ಯುದಯಕ್ಕೆ ರಾಜ್ಯದಲ್ಲಿ ಪ್ರಥಮ ಬಾರಿಗೆ ಕಂದಾಯ ಇಲಾಖೆ 20 ಗುಂಟೆ ಜಮೀನನ್ನು ಬೆಂಗಳೂರು ಉತ್ತರದ ಗಂಗೊಂಡನಹಳ್ಳಿಯಲ್ಲಿ ನೀಡಿದೆ.
“ನಮ್ಮನೆ ಸುಮ್ಮನೆ ನಿರಾಶ್ರಿತರ ಆಶ್ರಮ”ದ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನಡೆಸಿ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್ ಇನ್ನೂ 20 ಗುಂಟೆ ಜಮೀನನ್ನು ಈ ಆಶ್ರಮಕ್ಕೆ ನೀಡಲು ಸಿದ್ಧ. ಸಮಾಜ ಮನಸ್ಥಿತಿ ಸಹ ಬದಲಾಗಬೇಕಿದೆ. ಮಕ್ಕಳು ಕಳ್ಳತನ ಮಾಡಿ ಜೈಲಿಗೆ ಹೋಗಿ ಬಂದರೂ ಸಹ ಸ್ವೀಕರಿಸುತ್ತಾರೆ. ಆದರೆ ಮಾನಸಿಕ ಸ್ಥಿತಿಯಿಂದ ಈ ರೀತಿ ಆದಾಗ, ನಿಷ್ಕರುಣಿಗಳಾಗಿ ಮನೆಯಿಂದ ಹೊರ ಹಾಕುತ್ತಾರೆ.
ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ. ಈ ಆಶ್ರಮದಿಂದ ಮಂಗಲಮುಖಿಯರಿಗೆ ಸೂರು ಸಿಗುವಂತಾಗಲಿ. ಮನೆಯಿಂದ ಓಡಿಬಂದವರಿಗೆ ಆಶ್ರಯದ ತಾಣ ಆಗಲಿ. ಸಿಗ್ನಲ್ ಗಳಲ್ಲಿ ಭಿಕ್ಷಾಟನೆ ಮಾಡುವುದು, ಉಳಿದ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದು ನಿಲ್ಲಲಿ. ಕಟ್ಟಡಕ್ಕೆ ಸರ್ಕಾದಿಂದ ಅನುದಾನವನ್ನು ಸಹ ಕೊಡಿಸಲು ಸಹ ಪ್ರಯತ್ನಿಸುತ್ತೇನೆ. ಸಮಾಜ ಪರಿವರ್ತನೆಗೆ ಇದು ನಾಂದಿಯಾಗಲಿ. ಎಲ್ಲ ಸಂಘ ಸಂಸ್ಥೆಗಳು ಇವರಿಗೆ ನೆರವು ನೀಡಲಿ ಎಂದು ಆರ್ ಅಶೋಕ್ ಹೇಳಿದರು.
ಈ ಸಂದರ್ಭದಲ್ಲಿ ಬಿಡಿಎ ಅಧ್ಯಕ್ಷ ಎಸ್ ಆರ್ ವಿಶ್ವನಾಥ್, ಸಾಲು ಮರದ ತಿಮ್ಮಕ್ಕ, ಮಂಜಮ್ಮ ಜೋಗತಿ, ಮಾಜಿ ಶಾಸಕ ಮುನಿರಾಜು, ಶ್ರೀ ಸಂತೋಷ ಗುರೂಜಿ ಆಶ್ರಮ ಸ್ಥಾಪಕರಾದ ಡಾ. ನಕ್ಷತ್ರ ಹಾಗೂ ಇತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ಬೆಳ್ಳಾರೆ: ದಿ.ಪ್ರವೀಣ್ ನೆಟ್ಟಾರು ನೂತನ ಮನೆಗೆ ಶಂಕುಸ್ಥಾಪನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ