ರಫೇಲ್‌ ಡೀಲ್‌: ಎಚ್‌ಎಎಲ್‌ ಕಡೆಗಣಿಸಿದ್ದು ಕಾಂಗ್ರೆಸ್‌


Team Udayavani, Oct 1, 2018, 12:43 PM IST

rafel.jpg

ಬೆಂಗಳೂರು: ರಫೇಲ್‌ ಯುದ್ಧ ವಿಮಾನ ಖರೀದಿ ಒಪ್ಪಂದದ ವಿಚಾರದಲ್ಲಿ ವಾಸ್ತವವಾಗಿ ಪ್ರತಿಷ್ಟಿತ ಎಚ್‌ಎಎಲ್‌ ಅನ್ನು ಕಡೆಗಣಿಸಿದ್ದು ಸ್ವತಃ ಕಾಂಗ್ರೆಸ್‌ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಆರೋಪಿಸಿದರು. 

ರಫೇಲ್‌ ಒಪ್ಪಂದದ ಮೂಲಕ ಕೇಂದ್ರ ಸರ್ಕಾರ ಎಚ್‌ಎಲ್‌ನ ಉದ್ಯೋಗಗಳನ್ನು ಕಿತ್ತುಕೊಂಡಿತು ಎಂದು ಕಾಂಗ್ರೆಸ್‌ ಬೊಬ್ಬೆಹಾಕುತ್ತಿದೆ. ರಫೇಲ್‌ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದ ಪ್ರಸ್ತಾವನೆ ಯುಪಿಎ ಅಧಿಕಾರಾವಧಿಯಲ್ಲಿ ಸಲ್ಲಿಕೆಯಾಗಿತ್ತು. ಆ ಪ್ರಸ್ತಾವನೆ ಪೂರ್ಣ ಒಪ್ಪಂದಕ್ಕೆ ಕಾಂಗ್ರೆಸ್‌ ಯಾಕೆ ಮುಂದಾಗಲಿಲ್ಲ. ಎಚ್‌ಎಎಲ್‌ಗಾಗಿ ಕಾಂಗ್ರೆಸ್‌ ಮಾಡಿದ್ದೇನು? ಎಂದು ಪ್ರಶ್ನಿಸಿದ್ದಾರೆ.

ನಗರದ ಯಲಹಂಕ ವಾಯುನೆಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ನಾಲ್ಕೂವರೆ ವರ್ಷಗಳಲ್ಲಿ ಎಚ್‌ಎಎಲ್‌ ಲಘು ಯುದ್ಧವಿಮಾನಗಳ ಉತ್ಪಾದನಾ ಸಾಮರ್ಥ್ಯ ದುಪ್ಪಟ್ಟಾಗಿದೆ. 2006ರಿಂದ 2010 ಅವಧಿಯಲ್ಲಿ ಒಟ್ಟಾರೆ 40 ವಿಮಾನಗಳನ್ನು ತಯಾರಿಸಲಾಗಿದೆ.

2010 ರಿಂದ 14ರ ಅವಧಿಯಲ್ಲಿ ವಾರ್ಷಿಕ ಎಂಟು ಯುದ್ಧವಿಮಾನಗಳನ್ನು ತಯಾರಿಸಲಾಗಿತ್ತು. ಆದರೆ, 2014 ರಿಂದ ಈಚೆಗೆ ವರ್ಷಕ್ಕೆ 16 ಯುದ್ಧವಿಮಾನಗಳ ಪೂರೈಕೆಯಾಗುತ್ತಿದೆ. ಇದು ನಮ್ಮ ಸರ್ಕಾರದ ಸಾಧನೆ. ವಾಸ್ತವ ಈಗಿರುವಾಗ ಕಾಂಗ್ರೆಸ್‌ ನಮ್ಮ ಮೇಲೆಯೇ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದೆ ಎಂದು ಹರಿಹಾಯ್ದರು.

ಯುದ್ಧವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಹತಾಶೆ ಹೇಳಿಕೆ ನೀಡುತ್ತಿದೆ. ಈ ವಿಚಾರದಲ್ಲಿ ಕಾಂಗ್ರೆಸ್‌ ಮಾಡುತ್ತಿರುವ ಅಭಿಯಾನ ಅರ್ಧ ಸತ್ಯದಿಂದ ಕೂಡಿದೆ. ತಾನು ಅಧಿಕಾರದಲ್ಲಿದ್ದಾಗ ಎಚ್‌ಎಎಲ್‌ ಅನ್ನು ಬಲಪಡಿಸಲು ಮನಸ್ಸು ಮಾಡದವರು ಈಗ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಪರಾಕ್ರಮ ಪಥ’: ಸರ್ಜಿಕಲ್‌ ಸ್ಟ್ರೈಕ್‌ ಸಮರ್ಥಿಸಿಕೊಂಡ ಸಚಿವೆ, ಪಾಕ್‌ ಕೃತ್ಯವನ್ನು ನೋಡಿಕೊಂಡು ಸುಮ್ಮನೆ ಕೂರಲು ಆಗಲಿಲ್ಲ, ಅದಕ್ಕಾಗಿ 2016 ಸೆ.28 ರಂದು ನಿರ್ದಿಷ್ಟ ದಾಳಿ ನಡೆಸಲಾಯಿತು. ಪಾಕ್‌ನ ಇಂತಹ ಕೃತ್ಯಗಳಿಗೆ ಪ್ರತ್ಯುತ್ತರ ನೀಡುವ ಸಂದೇವನ್ನು ತಲುಪಿಸುವಂತಹ “ಪರಾಕ್ರಮ ಪಥ’ ಕಾರ್ಯಕ್ರವನ್ನು 53 ಕಡೆಗಳಲ್ಲಿ ಹಮ್ಮಿಕೊಂಡಿದ್ದೇವೆ.

ಆದರೆ ಕೆಲವರು ಇದನ್ನು ರಾಜಕೀಯ ಕಾರಣಕ್ಕಾಗಿ ಟೀಕಿಸುತ್ತಿದ್ದಾರೆ. ಅಂತಹವರು ಶತ್ರುಗಳ ಜತೆ ಕೈಜೋಡಿಸಿದ್ದಾರೆಯೇ? ಎಂದು ಖಾರವಾಗಿ ಪ್ರಶ್ನಿಸಿದರು.  ಏರೋ ಇಂಡಿಯಾ ಶೋ ಕುರಿತು ಪ್ರತಿಕ್ರಿಯಿಸಿ, ಈ ಬಾರಿ ವೈಮಾನಿಕ ಪ್ರದರ್ಶನದ ಲಖೊ°àದಲ್ಲಿ ನಡೆಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ಮನವಿ ಮಾಡಿದ್ದ ನಿಜ.

ಆದರೆ, ಈಗೆ ಕೇಳುವ ಹಕ್ಕು ಇಲ್ಲವೇ? ಉತ್ತರ ಪ್ರದೇಶದಲ್ಲಿಯೂ ಎಚ್‌ಎಎಲ್‌ ಇದೆ. ವೈಮಾನಿಕ ಕ್ಷೇತ್ರಕ್ಕೆ ಪೂರಕ ವಾತಾವರಣ ಹಾಗೂ ಪ್ರದರ್ಶಕ್ಕೆ ಅಗತ್ಯ ಸೌಕರ್ಯ ಕಲ್ಪಿಸಲಾಗುವುದು. ಈ ನಿಟ್ಟಿನಲ್ಲಿ ಚಿಂತನೆ ನಡೆಸುವಂತೆ ಬೇಡಿಕೆ ಬಂದಿತ್ತು. ಅಂತಿಮವಾಗಿ ಬೆಂಗಳೂರಿನಲ್ಲೇ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು ಎಂದು ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.