ಸಿಎಂ ಭೇಟಿ ಮಾಡಿದ ರಾಘವೇಂದ್ರ ರಾಜ್ಕುಮಾರ್
Team Udayavani, Feb 10, 2017, 11:32 AM IST
ಬೆಂಗಳೂರು: ಐಎಎಸ್, ಐಪಿಎಸ್ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಪರೀಕ್ಷಾರ್ಥಿಗಳಿಗೆ ಉಪಯೋಗವಾಗಲೆಂದು ವರನಟ ಡಾ.ರಾಜ್ಕುಮಾರ್ ಕುಟುಂಬವು ನೂತನವಾಗಿ ಐಎಎಸ್ ತರಬೇತಿ ಅಕಾಡೆಮಿ ಸ್ಥಾಪನೆಗೆ ಮುಂದಾಗಿದೆ.
ಐಎಎಸ್ ತರಬೇತಿ ಅಕಾಡೆಮಿ ಉದ್ಘಾಟನೆ ಗುರುವಾರ ರಾಘವೇಂದ್ರ ರಾಜ್ಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಹ್ವಾನಿಸಿದರು. ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಭೇಟಿ ನೀಡಿದ್ದ ರಾಘವೇಂದ್ರ ರಾಜ್ಕುಮಾರ್, ಐಎಎಸ್ ತರಬೇತಿ ಅಕಾಡೆಮಿ ಸ್ಥಾಪನೆ ಉದ್ದೇಶ ವಿವರಿಸಿದರು.
ಸಮಾಜ ಸೇವೆಯಲ್ಲಿ ರಾಜ್ ಕುಟುಂಬ ತೊಡಗಿಸಿಕೊಳ್ಳಲಿದೆ ಎಂದು ಈ ಹಿಂದೆ ರಾಘವೇಂದ್ರ ರಾಜ್ಕುಮಾರ್ ಕಾರ್ಯಕ್ರಮವೊಂದರಲ್ಲಿ ಪ್ರಕಟಿಸಿದ್ದರು. ಅದರಂತೆ ಇದೀಗ ಐಎಎಸ್ ಕನಸು ಹೊತ್ತ ಅಭ್ಯರ್ಥಿಗಳಿಗೆ ತರಬೇತಿ ಮತ್ತು ಮಾರ್ಗದರ್ಶನ ನೀಡಲು ಅಕಾಡೆಮಿ ಸ್ಥಾಪಿಸುವ ನಿರ್ಧಾರ ಮಾಡಿದ್ದಾರೆ.