ರಾಘವೇಶ್ವರ ಶ್ರೀ ಪೀಠ ತ್ಯಜಿಸಲಿ: ಹವ್ಯಕ ಒಕ್ಕೂಟ


Team Udayavani, Sep 30, 2018, 6:35 AM IST

raghaveshwara-bharathi-swamiji.jpg

ಬೆಂಗಳೂರು: ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ಪೀಠ ತ್ಯಜಿಸಬೇಕು ಎಂದು ಅಖೀಲ ಹವ್ಯಕ ಒಕ್ಕೂಟ ಒತ್ತಾಯಿಸಿದೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಸದಸ್ಯ ಶಾಂತರಾಮ ಹೆಗಡೆಕಟ್ಟೆ ಮಾತನಾಡಿ, ರಾಘವೇಶ್ವರ ಭಾರತಿ ಸ್ವಾಮೀಜಿ ಅವರು ರಾಮಚಂದ್ರಾಪುರ ಮಠದ ಅಧಿಕಾರ ವಹಿಸಿಕೊಂಡು 2 ವರ್ಷಗಳಾಗಿವೆ. ಈ ಅವಧಿಯಲ್ಲಿ ಅವರು ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಯಾಗಿರುವುದಲ್ಲದೆ ಆರೋಪಿ ಸ್ಥಾನದಲ್ಲಿದ್ದಾರೆ. ಅವರಿಂದಾಗಿ ಶಂಕರಚಾರ್ಯ ಪೀಠಗಳಲ್ಲಿ ಒಂದಾಗಿರುವ ರಾಮಚಂದ್ರಾಪುರ ಮಠಕ್ಕೂ ಅಪಾವಾದಗಳು ಬರುತ್ತಿದೆ. ಮಠದ ಖ್ಯಾತಿಗೆ ಧಕ್ಕೆ ಬರುತ್ತಿದೆ ಹೀಗಾಗಿ ರಾಘವೇಶ್ವರ ಸ್ವಾಮೀಜಿ ಅವರು ಪೀಠ ತ್ಯಜಿಸಬೇಕು ಎಂದು ಆಗ್ರಹಿಸಿದರು.

ಶಂಕರಾಚಾರ್ಯ ಪೀಠಗಳಲ್ಲಿನ ಸ್ವಾಮೀಜಿಗಳು ಅನುಸರಿಸಬೇಕಾದ ಕಠಿಣ ಜೀವನ ಕ್ರಮ ಹೇಗಿರಬೇಕೆಂದು ಶಂಕರಚಾರ್ಯರು ಮಠಾಮ್ನಾಯ ಗ್ರಂಥದಲ್ಲಿ ತಿಳಿಸಿದ್ದಾರೆ. ಆ ಜೀವನ ಕ್ರಮಕ್ಕೆ ವಿರುದ್ಧವಾಗಿ ರಾಘವೇಶ್ವರ ಶ್ರೀಗಳು ನಡೆದುಕೊಳ್ಳುತ್ತಿದ್ದಾರೆ. ಸನ್ಯಾಸ ಜೀವನಕ್ಕೆ ವ್ಯತಿರಿಕ್ತವಾಗಿ ನಡೆದುಕೊಳ್ಳುತ್ತಿದ್ದಾರೆ ಎಂಬ ಕಾರಣಕ್ಕಾಗಿ ಶೃಂಗೇರಿ ಶಾರಾದ ಮಠದ ಭಾರತಿ ತೀರ್ಥ ಸ್ವಾಮೀಜಿ ಅವರ ನೇತೃತ್ವದ ಸನಾತನ ಧರ್ಮ ಸಂವಧೀìನಿ ಸಭೆಯಿಂದ ರಾಘವೇಶ್ವರ ಸ್ವಾಮೀಜಿ ಅವರನ್ನು ಕೈಬಿಡಲಾಗಿದೆ ಎಂದು ತಿಳಿಸಿದರು.

ಮೊದಲ ಸಂತ್ರಸ್ಥೆಯ ಅತ್ಯಾಚಾರ ಆರೋಪದಲ್ಲಿ ಸ್ವಾಮೀಜಿ ಅವರು ಅಕ್ರಮ ಸಂಬಂಧ ಹೊಂದಿದ್ದರು ಎಂದು ಕೋರ್ಟ್‌ ತಿಳಿಸಿದೆ. ಅಲ್ಲದೆ ಈ ಸಂತ್ರಸ್ಥೆಯ ಭಾವ ಶ್ಯಾಮಪ್ರಸಾದ ಶಾಸಿŒ ಅವರು ಸ್ವಾಮೀಜಿ ಅವರ ಬೆದರಿಕೆ ಮತ್ತು ಒತ್ತಡಗಳಿಂದಾಗಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಿಐಡಿ ವಿಭಾಗ ಪುತ್ತೂರಿನ ನ್ಯಾಯಾಲಯದಲ್ಲಿ ಆರೋಪ ಪಟ್ಟಿ ಸಲ್ಲಿಸಿದೆ. ಎರಡನೇ ಸಂತ್ರಸ್ಥೆಯ ವಿಚಾರದಲ್ಲಿ ಸಿಐಡಿ ವಿಭಾಗ ಸ್ವಾಮೀಜಿ ಅವರ ಮೇಲೆ ಸಾಕ್ಷ್ಯಾಧಾರ ಸಮೇತ ಅತ್ಯಾಚಾರದ ಆರೋಪ ಪಟ್ಟಿ ಸಲ್ಲಿಸಿದೆ. ಹೀಗೆ ಪ್ರಮುಖ ಪ್ರಕರಣಗಳಲ್ಲಿ ಇವರು ಆರೋಪಿತ ಸ್ಥಾನದಲ್ಲಿದ್ದಾರೆ. ಇದು ಮಠಕ್ಕೆ ಅವಮಾನಕಾರ ವಿಷಯವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಒಕ್ಕೂಟದ ಸದಸ್ಯ ಗಣೇಶ ಭಟ್‌ ಬಾಯರ್‌ ಮಾತನಾಡಿ, ಸ್ವಾಮೀಜಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಮುಚ್ಚಿಹಾಕಿಕೊಳ್ಳುವ ಸಲುವಾಗಿ ಗೋವಿನ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆ. ಮಠದ ಹೆಸರಿನಲ್ಲಿ ಬೇರೆ ಬೇರೆ ಜಿಲ್ಲೆಗಳಲ್ಲಿ ತೆರೆದಿರುವ ಗೋ ಸಂರಕ್ಷಕ ಘಟಕಗಳಲ್ಲಿರುವ ಗೋವುಗಳು ಆಹಾರವಿಲ್ಲದೆ ಅಶಕ್ತವಾಗಿವೆ. ಗೋವಿನ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವುದಲ್ಲದೆ ಭಕ್ತಿಯ ಹೆಸರಿನಲ್ಲಿ ಹವ್ಯಕ ಸಮುದಾಯವನ್ನು ಒಡೆಯುತ್ತಿದ್ದಾರೆ. ಹಿಂದು ಸಂಘಟನೆಗಳ ಹೆಸರನ್ನು ಬಳಸಿಕೊಂಡು ತಮ್ಮ ವಿರುದ್ಧ ದಾಖಲಾದ ಪ್ರಕರಣಗಳಿಂದ ಪಾರಾಗಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿದರು.

ಶ್ರೀರಾಘವೇಶ್ವರ ಭಾರತಿ ಸ್ವಾಮೀಜಿ ಕೂಡಲೇ ಪೀಠ ತ್ಯಾಗ ಮಾಡಬೇಕು. ಸರ್ಕಾರ ಆರೋಪಿಯ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಿ ಬಂಧಿಸಿ ಬೇರೆ ಆರೋಪಿಗಳಂತೆ ವಿಚಾರಣೆಗಳೊಪಡಿಸಬೇಕು. ಸಂತ್ರಸ್ಥೆಯರಿಗೆ ಮತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶ್ಯಾಮಪ್ರಸಾದ ಶಾಸಿŒ ಅವರ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು. ಸ್ವಾಮೀಜಿ ಪರವಾಗಿ ವಂಚನೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

K. S. Eshwarappa ಸಂಧಾನದ ಎಲ್ಲ ಬಾಗಿಲು ಬಂದ್‌

K. S. Eshwarappa ಸಂಧಾನದ ಎಲ್ಲ ಬಾಗಿಲು ಬಂದ್‌

“ಹಾದಿ ತಪ್ಪಿದ’ ಹೇಳಿಕೆಗೆ ಎಚ್‌.ಡಿ. ಕುಮಾರಸ್ವಾಮಿ ವಿಷಾದ

“ಹಾದಿ ತಪ್ಪಿದ’ ಹೇಳಿಕೆಗೆ ಎಚ್‌.ಡಿ. ಕುಮಾರಸ್ವಾಮಿ ವಿಷಾದ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.