ರೆಹಮಾನ್ ಖಾನ್ ಸಾಧನೆ ಅಮೂಲ್ಯ
Team Udayavani, Jun 30, 2019, 3:05 AM IST
ಬೆಂಗಳೂರು: ಕೇಂದ್ರದ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಅವರು ಜನ ನೆನಪಿಟ್ಟುಕೊಳ್ಳುವಂತಹ ಸಾಧನೆ ಮಾಡಿದ್ದಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
ನಗರದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಕೆ.ರೆಹಮಾನ್ ಖಾನ್ ಅವರ “ಮೈ ಮೆಮೋರಿಸ್’ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮನುಷ್ಯನ ಹುಟ್ಟು ಆಕಸ್ಮಿಕ, ಜನನ ಉಚಿತ, ಸಾವು ಖಚಿತ. ಆದರೆ ನಮ್ಮ ಸಾಧನೆ ನೂರು ವರ್ಷ ನೆನಪಿರುತ್ತದೆ. ಸರಳ ಸಜ್ಜನಿಕೆಯ, ಸ್ವಾಭಿಮಾನಿ ರೆಹಮಾನ್ ಖಾನ್ ಅವರು ಜನ ಸದಾ ನೆನಪಿಟ್ಟುಕೊಳ್ಳುವಂತಹ ಸಾಧನೆ ಮಾಡಿದ್ದಾರೆ ಎಂದು ಶ್ಲಾಘಿಸಿದರು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮುಸ್ಲಿಂ ಸಮುದಾಯದಲ್ಲಿ ಚಾರ್ಟೆಡ್ ಅಕೌಂಟೆಂಟ್ (ಸಿ.ಎ) ಆಗಿ ಕೆಲಸ ಮಾಡಿದ ಮೊದಲಿಗರಾದ ರೆಹಮಾನ್ ಖಾನ್ ಯುವ ಜನತೆಗೆ ಸ್ಫೂರ್ತಿಯಾಗಿದ್ದಾರೆ. ರೆಹಮಾನ್ ಖಾನ್ ಅವರು ಮುಸ್ಲಿಂ ಸಮುದಾಯ ಮಾತ್ರವಲ್ಲದೆ ಎಲ್ಲ ವರ್ಗದ ಜನರ ಅಭಿವೃದ್ಧಿಗೆ ಶ್ರಮಿಸುವ ಮೂಲಕ ಸಮಾಜಕ್ಕಾಗಿಯೇ ತಮ್ಮ ಸೇವೆ ಮುಡುಪಾಗಿಟ್ಟಿದ್ದಾರೆ ಎಂದು ಹೇಳಿದರು.
ಇದೇ ವೇಳೆ ದಿ ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆ ನೀಡುವ ಸೇವಾ ಸನ್ಮಾನ ಪ್ರಶಸ್ತಿಯನ್ನು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರು ಸಾಧಕರಿಗೆ ಪ್ರದಾನ ಮಾಡಿದರು. ಸಚಿವರಾದ ಯು.ಟಿ.ಖಾದರ್, ಬಿ.ಜಡ್. ಜಮೀರ್ ಅಹಮ್ಮದ್ ಖಾನ್, ಶಾಸಕರಾದ ತನ್ವೀರ್ ಸೇಠ್, ಎನ್.ಎ.ಹ್ಯಾರಿಸ್, ಆರ್.ರೋಷನ್ ಬೇಗ್, ಎಚ್.ಕೆ.ಪಾಟೀಲ್ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ